ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

State: ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಆಯುಷ್ಮಾನ್ ಕಾರ್ಡ್ ವಿತರಣೆ 

Vivek Biradar by Vivek Biradar
May 1, 2022
in Newsbeat, State, ರಾಜ್ಯ
K Sudhakar Saaksha Tv
Share on FacebookShare on TwitterShare on WhatsappShare on Telegram

ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಆಯುಷ್ಮಾನ್ ಕಾರ್ಡ್ ವಿತರಣೆ

ಬೆಂಗಳೂರು: ಆಯುಷ್ಮಾನ್ ಭಾರತ್ ಯೋಜನೆಯಡಿ ರಾಜ್ಯದ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡುಗಳು ದೊರೆಯುವಂತೆ ಮಾಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಆಯುಷ್ಮಾನ್ ಭಾರತ್ ದಿನ ಅಂಗವಾಗಿ, ಸಚಿವ ಡಾ.ಕೆ.ಸುಧಾಕರ್ ಅವರು ‘ಆರೋಗ್ಯ ಮಂಥನ’ ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ವಿವಿಧ ಜಿಲ್ಲೆಗಳ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವೈದ್ಯರು, ಸಿಬ್ಬಂದಿ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಚರ್ಚೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಕಾರ್ಡ್ ಮೂಲಕ ಜನರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಈ ಕಾರ್ಡ್ ಎಲ್ಲರಿಗೂ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.

ಹೂವಿನ ಹಡಗಲಿಯ ಮೈಲಾರ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ 60 ವರ್ಷದ ಪ್ರಸನ್ನ ಮಾತನಾಡಿ, 10 ವರ್ಷದಿಂದ ಬಿಪಿ ಹಾಗೂ ಮಧುಮೇಹವಿದ್ದು, ದಾವಣಗೆರೆ, ಹಾವೇರಿ ಮೊದಲಾದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ. ಈಗ ನಮ್ಮ ಊರಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಪ್ರತಿ ತಿಂಗಳು ಉಚಿತವಾಗಿ ಮಾತ್ರೆ ದೊರೆಯುತ್ತಿದ್ದು, ಮಧುಮೇಹ ನಿಯಂತ್ರಣಕ್ಕೆ ಬಂದಿದೆ ಎಂದರು.

ಆಹಾರ ಮತ್ತು ವ್ಯಾಯಾಮ ಕುರಿತು ಮಾರ್ಗದರ್ಶನ ದೊರೆತಿದೆಯೇ ಎಂದು ಸಚಿವ ಡಾ.ಕೆ.ಸುಧಾಕರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸನ್ನ, ಪ್ರತಿ ದಿನ ವಾಕಿಂಗ್ ಹಾಗೂ ವ್ಯಾಯಾಮ ಮಾಡಲು ಮಾರ್ಗದರ್ಶನ ದೊರೆತಿದೆ. ಯೋಗವನ್ನೂ ಮಾಡುತ್ತಿದ್ದೇನೆ ಎಂದರು.

1-2 ಸಾವಿರ ಬದಲು 500 ರೂ. ಖರ್ಚು

ಬೆಂಗಳೂರಿನ ಯಲಹಂಕದ ಜನ ಔಷಧಿ ಕೇಂದ್ರದ ಫಲಾನುಭವಿ ವಸಂತ್ ಮಾತನಾಡಿ, ಜನ ಔಷಧಿ ಕೇಂದ್ರದಿಂದಾಗಿ ಮಧುಮೇಹದ ಔಷಧಿಯ ಖರ್ಚು ತಿಂಗಳಿಗೆ 2-3 ಸಾವಿರ ರೂ. ಕಡಿಮೆಯಾಗಿದೆ. 1-2 ಸಾವಿರ ರೂ. ಬದಲು ಕೇವಲ 500 ರೂ.ಗೆ ಔಷಧಿ ಇಲ್ಲಿ ದೊರೆಯುತ್ತಿದೆ ಎಂದು ಶ್ಲಾಘಿಸಿದರು.

ಯಲಹಂಕದ ಜನ ಔಷಧಿ ಕೇಂದ್ರದ ನೇತ್ರ ಮಾತನಾಡಿ, ಆರಂಭದಲ್ಲಿ 90 ಸಾವಿರ ಔಷಧಿ ಪೂರೈಕೆಯಾಗುತ್ತಿದ್ದು, ದಿನಕ್ಕೆ 100-200 ಮಾತ್ರ ಮಾರಾಟವಾಗುತ್ತಿತ್ತು. ಈಗ ದಿನಕ್ಕೆ ಸುಮಾರು 20 ಸಾವಿರದಷ್ಟು ಔಷಧಿ ಮಾರಾಟವಾಗುತ್ತಿದೆ. ಇಡೀ ದೇಶದಲ್ಲಿ 1 ಲಕ್ಷ ಔಷಧಿ ಮಾರಾಟ ಗುರಿಯನ್ನು ನಾವು ತಲುಪಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಹೆಚ್ಚು ಜನರಿಗೆ ಔಷಧಿ ತಲುಪಿಸಿದ್ದೇವೆ. ಮೊದಲು ಔಷಧಿಗೆ 1-2 ಸಾವಿರ ರೂ. ಖರ್ಚು ಮಾಡುತ್ತಿದ್ದರೆ, ಈಗ 700-800 ರೂ. ಖರ್ಚು ಮಾಡುತ್ತಿದ್ದೇವೆ ಎಂದು ರೋಗಿಗಳು ಹೇಳುತ್ತಿದ್ದಾರೆ ಎಂದು ತಿಳಿಸಿದರು.

Ayushman Divas Saaksha Tv

ವೈದ್ಯಕೀಯ ತಪಾಸಣೆಗೆ ಸೂಚನೆ

ರಾಜ್ಯದ ಪ್ರತಿ ಆರೋಗ್ಯ ಉಪ ಕೇಂದ್ರ ವ್ಯಾಪ್ತಿಯಲ್ಲಿ ಎಲ್ಲರಿಗೂ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ನಡೆಯಬೇಕಿದೆ. ಬಳಿಕ ಈ ಅಂಕಿ ಅಂಶವನ್ನು ಇಲಾಖೆಗೆ ಕಳುಹಿಸಿಕೊಡಬೇಕು. ಇದನ್ನು ಎಲ್ಲಾ ವೈದ್ಯರು ಜನಾಂದೋಲನದಂತೆ ಮಾಡಿ ಎಂದು ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದರು.

ಕರ್ನಾಟಕಕ್ಕೆ ಪ್ರಥಮ ಸ್ಥಾನ

ವರ್ಚುವಲ್ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕಳೆದ ವರ್ಷ 960 ಕೋಟಿ ರೂ.ಗೂ ಅಧಿಕ ಹಣವನ್ನು ಇದರಡಿ ನೀಡಲಾಗಿದೆ. 6.68 ಕೋಟಿ ಜನರು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸೇವೆ ಪಡೆದಿದ್ದಾರೆ. 997 ಜನ ಔಷಧಿ ಕೇಂದ್ರಗಳು ರಾಜ್ಯದಲ್ಲಿದ್ದು, ಇಡೀ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಜನ ಔಷಧಿಗೆ ಹೆಚ್ಚು ಜನರು ಬಂದು ಔಷಧಿ ಪಡೆಯುವಂತಾಗಬೇಕು ಎಂದರು.

ಅಸಾಂಕ್ರಾಮಿಕ ರೋಗಗಳ ತಪಾಸಣೆ, ಚಿಕಿತ್ಸೆಗೆ ವೈದ್ಯರು ಹೆಚ್ಚು ಒತ್ತು ನೀಡಬೇಕು. ಮಧುಮೇಹಿಗಳ ಆಹಾರ ಶೈಲಿ, ನಿತ್ಯದ ಚಟುವಟಿಕೆಗಳು ಬದಲಾಗಬೇಕು. ಇದಕ್ಕಾಗಿ ವೈದ್ಯರು ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. 2025 ಕ್ಕೆ ಕ್ಷಯ ರೋಗವನ್ನು ರಾಜ್ಯದಿಂದ ನಿರ್ಮೂಲನೆ ಮಾಡುವ ಗುರಿ ಇದೆ. ಇದರಲ್ಲಿ ವೈದ್ಯರು, ಸಿಬ್ಬಂದಿ ಪಾತ್ರ ಮಹತ್ವದ್ದಾಗಿದೆ ಎಂದರು.

Tags: #Saaksha TVAyushman CardDr. K SudhakarPM MODI
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram