ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

State: ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಆಯುಷ್ಮಾನ್ ಕಾರ್ಡ್ ವಿತರಣೆ 

Vivek Biradar by Vivek Biradar
May 1, 2022
in Newsbeat, State, ರಾಜ್ಯ
K Sudhakar Saaksha Tv
Share on FacebookShare on TwitterShare on WhatsappShare on Telegram

ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಆಯುಷ್ಮಾನ್ ಕಾರ್ಡ್ ವಿತರಣೆ

ಬೆಂಗಳೂರು: ಆಯುಷ್ಮಾನ್ ಭಾರತ್ ಯೋಜನೆಯಡಿ ರಾಜ್ಯದ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡುಗಳು ದೊರೆಯುವಂತೆ ಮಾಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಆಯುಷ್ಮಾನ್ ಭಾರತ್ ದಿನ ಅಂಗವಾಗಿ, ಸಚಿವ ಡಾ.ಕೆ.ಸುಧಾಕರ್ ಅವರು ‘ಆರೋಗ್ಯ ಮಂಥನ’ ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ವಿವಿಧ ಜಿಲ್ಲೆಗಳ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವೈದ್ಯರು, ಸಿಬ್ಬಂದಿ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಚರ್ಚೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಕಾರ್ಡ್ ಮೂಲಕ ಜನರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಈ ಕಾರ್ಡ್ ಎಲ್ಲರಿಗೂ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.

ಹೂವಿನ ಹಡಗಲಿಯ ಮೈಲಾರ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ 60 ವರ್ಷದ ಪ್ರಸನ್ನ ಮಾತನಾಡಿ, 10 ವರ್ಷದಿಂದ ಬಿಪಿ ಹಾಗೂ ಮಧುಮೇಹವಿದ್ದು, ದಾವಣಗೆರೆ, ಹಾವೇರಿ ಮೊದಲಾದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ. ಈಗ ನಮ್ಮ ಊರಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಪ್ರತಿ ತಿಂಗಳು ಉಚಿತವಾಗಿ ಮಾತ್ರೆ ದೊರೆಯುತ್ತಿದ್ದು, ಮಧುಮೇಹ ನಿಯಂತ್ರಣಕ್ಕೆ ಬಂದಿದೆ ಎಂದರು.

ಆಹಾರ ಮತ್ತು ವ್ಯಾಯಾಮ ಕುರಿತು ಮಾರ್ಗದರ್ಶನ ದೊರೆತಿದೆಯೇ ಎಂದು ಸಚಿವ ಡಾ.ಕೆ.ಸುಧಾಕರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸನ್ನ, ಪ್ರತಿ ದಿನ ವಾಕಿಂಗ್ ಹಾಗೂ ವ್ಯಾಯಾಮ ಮಾಡಲು ಮಾರ್ಗದರ್ಶನ ದೊರೆತಿದೆ. ಯೋಗವನ್ನೂ ಮಾಡುತ್ತಿದ್ದೇನೆ ಎಂದರು.

1-2 ಸಾವಿರ ಬದಲು 500 ರೂ. ಖರ್ಚು

ಬೆಂಗಳೂರಿನ ಯಲಹಂಕದ ಜನ ಔಷಧಿ ಕೇಂದ್ರದ ಫಲಾನುಭವಿ ವಸಂತ್ ಮಾತನಾಡಿ, ಜನ ಔಷಧಿ ಕೇಂದ್ರದಿಂದಾಗಿ ಮಧುಮೇಹದ ಔಷಧಿಯ ಖರ್ಚು ತಿಂಗಳಿಗೆ 2-3 ಸಾವಿರ ರೂ. ಕಡಿಮೆಯಾಗಿದೆ. 1-2 ಸಾವಿರ ರೂ. ಬದಲು ಕೇವಲ 500 ರೂ.ಗೆ ಔಷಧಿ ಇಲ್ಲಿ ದೊರೆಯುತ್ತಿದೆ ಎಂದು ಶ್ಲಾಘಿಸಿದರು.

ಯಲಹಂಕದ ಜನ ಔಷಧಿ ಕೇಂದ್ರದ ನೇತ್ರ ಮಾತನಾಡಿ, ಆರಂಭದಲ್ಲಿ 90 ಸಾವಿರ ಔಷಧಿ ಪೂರೈಕೆಯಾಗುತ್ತಿದ್ದು, ದಿನಕ್ಕೆ 100-200 ಮಾತ್ರ ಮಾರಾಟವಾಗುತ್ತಿತ್ತು. ಈಗ ದಿನಕ್ಕೆ ಸುಮಾರು 20 ಸಾವಿರದಷ್ಟು ಔಷಧಿ ಮಾರಾಟವಾಗುತ್ತಿದೆ. ಇಡೀ ದೇಶದಲ್ಲಿ 1 ಲಕ್ಷ ಔಷಧಿ ಮಾರಾಟ ಗುರಿಯನ್ನು ನಾವು ತಲುಪಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಹೆಚ್ಚು ಜನರಿಗೆ ಔಷಧಿ ತಲುಪಿಸಿದ್ದೇವೆ. ಮೊದಲು ಔಷಧಿಗೆ 1-2 ಸಾವಿರ ರೂ. ಖರ್ಚು ಮಾಡುತ್ತಿದ್ದರೆ, ಈಗ 700-800 ರೂ. ಖರ್ಚು ಮಾಡುತ್ತಿದ್ದೇವೆ ಎಂದು ರೋಗಿಗಳು ಹೇಳುತ್ತಿದ್ದಾರೆ ಎಂದು ತಿಳಿಸಿದರು.

Ayushman Divas Saaksha Tv

ವೈದ್ಯಕೀಯ ತಪಾಸಣೆಗೆ ಸೂಚನೆ

ರಾಜ್ಯದ ಪ್ರತಿ ಆರೋಗ್ಯ ಉಪ ಕೇಂದ್ರ ವ್ಯಾಪ್ತಿಯಲ್ಲಿ ಎಲ್ಲರಿಗೂ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ನಡೆಯಬೇಕಿದೆ. ಬಳಿಕ ಈ ಅಂಕಿ ಅಂಶವನ್ನು ಇಲಾಖೆಗೆ ಕಳುಹಿಸಿಕೊಡಬೇಕು. ಇದನ್ನು ಎಲ್ಲಾ ವೈದ್ಯರು ಜನಾಂದೋಲನದಂತೆ ಮಾಡಿ ಎಂದು ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದರು.

ಕರ್ನಾಟಕಕ್ಕೆ ಪ್ರಥಮ ಸ್ಥಾನ

ವರ್ಚುವಲ್ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕಳೆದ ವರ್ಷ 960 ಕೋಟಿ ರೂ.ಗೂ ಅಧಿಕ ಹಣವನ್ನು ಇದರಡಿ ನೀಡಲಾಗಿದೆ. 6.68 ಕೋಟಿ ಜನರು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸೇವೆ ಪಡೆದಿದ್ದಾರೆ. 997 ಜನ ಔಷಧಿ ಕೇಂದ್ರಗಳು ರಾಜ್ಯದಲ್ಲಿದ್ದು, ಇಡೀ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಜನ ಔಷಧಿಗೆ ಹೆಚ್ಚು ಜನರು ಬಂದು ಔಷಧಿ ಪಡೆಯುವಂತಾಗಬೇಕು ಎಂದರು.

ಅಸಾಂಕ್ರಾಮಿಕ ರೋಗಗಳ ತಪಾಸಣೆ, ಚಿಕಿತ್ಸೆಗೆ ವೈದ್ಯರು ಹೆಚ್ಚು ಒತ್ತು ನೀಡಬೇಕು. ಮಧುಮೇಹಿಗಳ ಆಹಾರ ಶೈಲಿ, ನಿತ್ಯದ ಚಟುವಟಿಕೆಗಳು ಬದಲಾಗಬೇಕು. ಇದಕ್ಕಾಗಿ ವೈದ್ಯರು ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. 2025 ಕ್ಕೆ ಕ್ಷಯ ರೋಗವನ್ನು ರಾಜ್ಯದಿಂದ ನಿರ್ಮೂಲನೆ ಮಾಡುವ ಗುರಿ ಇದೆ. ಇದರಲ್ಲಿ ವೈದ್ಯರು, ಸಿಬ್ಬಂದಿ ಪಾತ್ರ ಮಹತ್ವದ್ದಾಗಿದೆ ಎಂದರು.

Tags: #Saaksha TVAyushman CardDr. K SudhakarPM MODI
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram