Wednesday, December 6, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೀಪಾವಳಿ ನಂತ್ರ ಡಿಗ್ರಿ ಕಾಲೇಜು ಓಪನ್; ಡಿಸೆಂಬರ್15ರಿಂದ ಶಾಲಾ ಕಾಲೇಜಿಗೆ ಮುಹೂರ್ತ..?

Kariyappa N by Kariyappa N
November 12, 2020
in Newsbeat, Politics, Samagra karnataka, ರಾಜ್ಯ
schools
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹಾಗೂ 2ನೇ ಅಲೆಯ ಭೀತಿಯ ನಡುವೆಯೇ ದೀಪಾವಳಿ ಹಬ್ಬದ ನಂತರ ಪದವಿ ಕಾಲೇಜುಗಳು ಹಾಗೂ ಡಿಸೆಂಬರ್ 15ರಿಂದ ಶಾಲಾ-ಕಾಲೇಜುಗಳ ಆರಂಭಕ್ಕೆ ಭರ್ಜರಿ ಸಿದ್ಧತೆ ನಡೆದಿದೆ.
ದೀಪಾವಳಿ ಹಬ್ಬಕ್ಕೆ ಇನ್ನು ಎರಡು ದಿನಗಳು ಬಾಕಿ ಇದ್ದು, ಹಬ್ಬ ಮುಗಿಯುತ್ತಿದ್ದಂತೆ ಅಂದರೆ ನವೆಂಬರ್ 17ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ಭರದ ಸಿದ್ಧತೆ ನಡೆದಿದೆ.
ಈಗಾಗಲೇ ಎಲ್ಲಾ ಪದವಿ ಕಾಲೇಜುಗಳ ಕೊಠಡಿ ಶುಚಿತ್ವ ಮುಗಿದು ಸ್ಯಾನಿಟೈಸ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳ ಆಗಮನಕ್ಕಾಗಿ ಎದುರು ನೋಡುತ್ತಿವೆ.

UGC guidelines released
ಕಳೆದ ತಿಂಗಳು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನ.17ರಿಂದ ಡಿಗ್ರಿ ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತಯ. ಈ ಹಿನ್ನೆಲೆಯಲ್ಲಿ ಕೊರೊನಾ ಗೈಡ್‍ಲೈನ್ಸ್ ಅನುಸಾರವೇ ತರಗತಿಗಳನ್ನು ಆರಂಭಿಸಲು ಸಿದ್ಧತೆ ನಡೆದಿದೆ.
ಒಂದು ಬೆಂಚ್‍ಗೆ ಇಬ್ಬರು ವಿದ್ಯಾರ್ಥಿಗಳು ಎಂಬಂತೆ ಸಮಾಜಿಕ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸಿ ಸ್ಯಾನಿಟೈಸ್ ಮಾಡುವ ಮೂಲಕ ಪದವಿ ಕಾಲೇಜುಗಳನ್ನು ಆರಂಭಿಸಲು ಸರ್ವಸಿದ್ಧತೆ ಬಹುತೇಕ ಪೂರ್ಣಗೊಂಡಿದೆ.

Related posts

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ಲವ್ವರ್ ಮಾತು ಕೇಳಿ ಪತಿಯ ಕೈಯಲ್ಲಿ ಸಿಕ್ಕ ಪತ್ನಿ

ಲವ್ವರ್ ಮಾತು ಕೇಳಿ ಪತಿಯ ಕೈಯಲ್ಲಿ ಸಿಕ್ಕ ಪತ್ನಿ

December 5, 2023

ಡಿಸೆಂಬರ್ 15ರಿಂದ ಶಾಲೆ-ಕಾಲೇಜು ಆರಂಭಿಸಿ..!
ದೀಪಾವಳಿ ಹಬ್ಬದ ನಂತರ ಪದವಿ ಕಾಲೇಜುಗಳ ಆರಂಭವಾಗುತ್ತಿರುವ ಬೆನ್ನಲ್ಲೇ ಹೈಸ್ಕೂಲು ಹಾಗೂ ಪಿಯುಸಿ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಆದರೆ, ಹೈಸ್ಕೂಲ್, ಪಿಯುಸಿ ತರಗತಿಗಳು ಆರಂಭಿಸುವುದೇ ಆದರೆ ಡಿಸೆಂಬರ್ 15ರ ನಂತರ ಆರಂಭಿಸಿ ಎಂದು ಪೋಷಕರ ಸಂಘಟನೆಗಳು ಸರ್ಕಾರಕ್ಕೆ ಸಲಹೆ ನೀಡಿವೆ.
ಮೊದಲು 10ನೇ ತರಗತಿ ಹಾಗೂ 12ನೇ ಕ್ಲಾಸ್‍ಗಳನ್ನು ಆರಂಭಿಸುವಂತೆ ಆರ್‍ಟಿಇ ವಿದ್ಯಾರ್ಥಿಗಳ ಸಂಘ ಹಾಗೂ ಪೋಷಕರ ಸಂಘ ಶಿಕ್ಷಣ ಇಲಾಖೆಗೆ ಸಲಹೆ ನೀಡಿವೆ.
ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಿದ 5 ದಿನಗಳ ನಂತರ 9 ಹಾಗೂ 11(ಪ್ರಥಮ ಪಿಯುಸಿ) ನೇ ಕ್ಲಾಸ್ ತರಗತಿಗಳನ್ನು ಆರಂಭಿಸಬಹುದು. ಆದರೆ, ಹೆಚ್ಚುವರಿ ಶುಲ್ಕ ಕಟ್ಟುವಂತೆ ಶಾಲೆಗಳು ಒತ್ತಡ ಹೇರುವಂತಿಲ್ಲ ಎಂದು ಷರತ್ತು ವಿಧಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

ಶಿಕ್ಷಣ ಇಲಾಖೆಗೆ ಪೋಷಕರ ಸಲಹೆಗಳು ಇಂತಿವೆ..
1. ಡಿ.15ರ ನಂತರ 10 ಹಾಗೂ 12ನೇ ತರಗತಿ ಆರಂಭಿಸಿ
2. 5 ದಿನ ಬಿಟ್ಟು 9 ಹಾಗೂ 11ನೇ ತರಗತಿ ಪ್ರಾರಂಭಿಸಬಹುದು
3 ದಿನಕ್ಕೆರಡರಂತೆ ಪಾಳಿಯಲ್ಲಿ ತರಗತಿಗಳನ್ನು ನಡೆಸಬೇಕು
4. ಬೆಳಿಗ್ಗೆ 7ರಿಂದ ಮಧ್ಯಾಹ್ನ 12 ಗಂಟೆಗೆ ಒಂದು ಪಾಳಿ
5. ಮಧ್ಯಾಹ್ನ 1ಗಂಟೆಯಿಂದ ಸಂಜೆ 5 ಗಂಟೆಗೆ ಮತ್ತೊಂದು ತರಗತಿ
6. ಯೂನಿಫಾರಂ ಧರಿಸಲೇಬೇಕು ಎಂದು ಕಡ್ಡಾಯ ಮಾಡುವಂತಿಲ್ಲ
7. ಶಾಲಾ-ಕಾಲೇಜುಗಳು ಹೆಚ್ಚುವರಿ ಶುಲ್ಕ ನೀಡುವಂತೆ ಒತ್ತಾಯ ಮಾಡುವಂತಿಲ್ಲ
8. ಒಂದು ಕ್ಲಾಸ್‍ನಲ್ಲಿ ಕೇವಲ 10 ವಿದ್ಯಾರ್ಥಿಗಳಿರುವಂತೆ ನೋಡಿಕೊಳ್ಳಬೇಕು
9. ಆಟೋಟ ಸೇರಿದಂತೆ ಪಠ್ಯೇತರ ಚಟುವಟಿಕೆಗಳನ್ನು ನಡೆಸಬಾರದು
10 ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಾಡುವುದು
ಇದು, ಪೋಷಕರ ಸಂಘಗಳು ಶಿಕ್ಷಣ ಇಲಾಖೆಗೆ ನೀಡಿದ ಸಲಹೆಗಳಾಗಿವೆ. ಈಗಾಗಲೇ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು, ಎಸ್‍ಡಿಎಂಸಿ ಅಧ್ಯಕ್ಷರು, ಸರ್ಕಾರಿ ಶಾಲೆಗಳ ಶಿಕ್ಷಕರು ಹಾಗೂ ಡಿಡಿಪಿಇ, ಬಿಇಒಗಳ ಸಭೆ ನಡೆಸಿಸಿ ಅಭಿಪ್ರಾಯ ಸಂಗ್ರಹಿಸಿರುವ ಶಿಕ್ಷಣ ಇಲಾಖೆ, ತನ್ನ ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡಿದೆ.
ಮುಖ್ಯಮಂತ್ರಿಗಳು ಶಿಕ್ಷಣ ಹಾಗೂ ಆರೋಗ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಶಾಲಾ-ಕಾಲೇಜು ಆರಂಭಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಭರದ ಸಿದ್ದತೆ ನಡೆಸಿರುವ ಬೆನ್ನಲ್ಲೇ ಪೋಷಕರ ಅಭಿಪ್ರಾಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Coronadegree collegeseducation departmentparents meetingPUCschools reopensslc
ShareTweetSendShare
Join us on:

Related Posts

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

by Honnappa Lakkammanavar
December 5, 2023
0

ನವದೆಹಲಿ: ಬುಧವಾರ ನಡೆಯಬೇಕಿದ್ದ ಇಂಡಿಯಾ ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಪ್ರತಿ ಪಕ್ಷ ನಾಯಕರ ಅಲಭ್ಯತೆಯ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚರಾಜ್ಯಗಳ ಚುನಾವಣೆ ಹಿನ್ನಲೆಯಲ್ಲಿ...

ಲವ್ವರ್ ಮಾತು ಕೇಳಿ ಪತಿಯ ಕೈಯಲ್ಲಿ ಸಿಕ್ಕ ಪತ್ನಿ

ಲವ್ವರ್ ಮಾತು ಕೇಳಿ ಪತಿಯ ಕೈಯಲ್ಲಿ ಸಿಕ್ಕ ಪತ್ನಿ

by Honnappa Lakkammanavar
December 5, 2023
0

ಆನೇಕಲ್: ಪತ್ನಿಯೊಬ್ಬಳು ತನ್ನ ಲವ್ವರ್ ಮಾತು ಕೇಳಿ ಪತಿಯ ಕೈಯಲ್ಲಿ ತಗಲಾಕಿಕೊಂಡಿರುವ ಘಟನೆ ನಡೆದಿದೆ. ಆನೇಕಲ್‍ ನಲ್ಲಿ (Anekal) ಈ ಘಟನೆ ನಡೆದಿದೆ. ಮಾರುತಿ ಬಡಾವಣೆಯಲ್ಲಿ ಕಿರಣ್...

ರಾಜ್ಯದಲ್ಲಿ ಎರಡು ದಿನಗಳ ಕಾಲ ಇರಲಿದೆ ಮಳೆಯ ಅಬ್ಬರ

ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಭರ್ಜರಿ ಮಳೆಯ ಮುನ್ಸೂಚನೆ

by Honnappa Lakkammanavar
December 5, 2023
0

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಮಿಂಚಾಂಗ್‌ ಚಂಡ ಮಾರುತಕ್ಕೆ ತಮಿಳುನಾಡು, ಆಂಧ್ರ...

ಬೆಳ್ಳಂಬಳಿಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ

ಬೆಳ್ಳಂಬಳಿಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ

by Honnappa Lakkammanavar
December 5, 2023
0

ಬೆಂಗಳೂರು: ಲೋಕಾಯುಕ್ತ ಅಧಿಕಾರಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 13...

ನಾಯಿಯ ಮೇಲೆ ಅತ್ಯಾಚಾರ ನಡೆಸಿ, ಮಹಡಿ ಮನೆಯಿಂದ ತಳ್ಳಿದ ಕಾಮುಕ

ಸಿಕ್ಕ ಸಿಕ್ಕವರ ಮೇಲೆ ನಾಯಿಗಳ ಅಟ್ಟಹಾಸ

by Honnappa Lakkammanavar
December 4, 2023
0

ದೊಡ್ಡಬಳ್ಳಾಪುರ ನಗರದಲ್ಲಿ ಸಿಕ್ಕ ಸಿಕ್ಕವರ ಮೇಲೆ ಬೀದಿ ನಾಯಿಗಳು ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ. ಬರೋಬ್ಬರಿ 14 ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ನಗರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

December 5, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram