ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್ ಪಾದಯಾತ್ರೆ : ಬಿ.ಸಿ.ಪಾಟೀಲ್
ಯಾದಗಿರಿ : “ಸಿಎಂ ಸ್ಥಾನಕ್ಕಾಗಿ ಡಿ ಕೆ ಶಿವಕುಮಾರ್ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ.
ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ.
ಈ ಬಗ್ಗೆ ಯಾದಗಿರಿಯಲ್ಲಿ ಪ್ರತಿಕ್ರಿಯೆ ನೀಡಿದ ಬಿ.ಸಿ.ಪಾಟೀಲ್, ಸಿಎಂ ಹುದ್ದೆಗಾಗಿ ಪಾದಯಾತ್ರೆ ಮೂಲಕ ಕಿತ್ತಾಟ ಮಾಡುತ್ತಿದ್ದಾರೆ.
ಸಿದ್ದರಾಮಯ್ಯನವರ ವರ್ಚಸ್ಸು ಕಡಿಮೆ ಮಾಡಲು ಸಿಎಂ ಹುದ್ದೆಗಾಗಿ ಡಿ.ಕೆ.ಶಿವಕುಮಾರ್ ಪಾದಯಾತ್ರೆ ಮಾಡುತ್ತಿದ್ದಾರೆ.
ಸಿಎಂ ರೇಸ್ ನಲ್ಲಿ ಸಿಎಂ ನಾನಾಗಬೇಕೆಂದು ಸಿಎಂ ಹುದ್ದೆಗಾಗಿ ತಿಕ್ಕಾಟ ಮಾಡುತ್ತಿದ್ದಾರೆ.
ವಿಧಾನಸಭೆ ಚುನಾವಣೆ ಮುಂದಿರುವಾಗಲೇ ಕೂಸು ಹುಟ್ಟುವ ಮುನ್ನವೇ ಕುಲಾಯಿ ಹೊಲಿಸಿದಂತೆ ಡಿಕೆಶಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನು ಸಿದ್ದರಾಮಯ್ಯನವರ ಮೇಲೆ ಬಲ ಪ್ರದರ್ಶನ ಮಾಡಲು ಪಾಪುಲಾರಿಟಿ ತೋರಿಸಿಕೊಳ್ಳಲು ಶಿವಕುಮಾರ್ ಮೇಕುದಾಟು ಪಾದಯಾತ್ರೆ ಮಾಡುತ್ತಿದ್ದಾರೆ.
ಡಿಕೆಶಿ ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿ ಕೆಲಸ ಮಾಡಿದರು, ಅವರು ಅಂದು ಮೇಕುದಾಟು ಯೋಜನೆ ಬಗ್ಗೆ ಚಕಾರ ಎತ್ತಿಲ್ಲ ಎಂದು ಆರೋಪಿಸಿದರು.