ಬೆಂಗಳೂರು: ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಶೀತಲ ಸಮರ ಮುಂದುವರಿದಂತೆ ಕಾಣುತ್ತಿದೆ.
ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಭೇಟಿಗೆ ಕೊನೇ ಘಳಿಗೆಯಲ್ಲಿ ಡಿ.ಕೆ ಶಿವಕುಮಾರ್ ನಿರಾಕರಿಸಿದ್ದಾರೆ. ಇಂದು ಬೆಳಿಗ್ಗೆ 10:30ಕ್ಕೆ ಡಿ.ಕೆ ಶಿವಕುಮಾರ್ರನ್ನ ಭೇಟಿ ಮಾಡುವ ಉದ್ದೇಶದಿಂದ ಅಖಂಡ ಶ್ರೀನಿವಾಸ್ ಸಿದ್ಧರಾಗಿ ಹೊರಟಿದ್ದರು. ಆದ್ರೆ ನಾಳೆ ಡಿ.ಕೆ ಶಿವಕುಮಾರ್ ಅವರ ಮಗಳ ನಿಶ್ಚಿತಾರ್ಥವಿದೆ. ಹೀಗಾಗಿ ನಿಶ್ಚಿತಾರ್ಥ ಕಾರ್ಯಕ್ರಮದ ನೆಪವೊಡ್ಡಿ ಕೊನೆ ಕ್ಷಣದಲ್ಲಿ ಡಿ.ಕೆ ಶಿವಕುಮಾರ್ ಅಖಂಡ ಶ್ರೀನಿವಾಸಮೂರ್ತಿ ಭೇಟಿಗೆ ನಿರಾಕರಿಸಿದ್ದಾರೆ.

ನವೆಂಬರ್ 21ಕ್ಕೆ ತಮ್ಮನ್ನು ಭೇಟಿ ಮಾಡುವಂತೆ ಅಖಂಡ ಶ್ರೀನಿವಾಸ್ಗೆ ಶಿವಕುಮಾರ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸ್ ನಾಳೆ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಯ ಕಿಂಗ್ಪಿನ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಗಲಭೆ ನಡೆಸಿದ್ದು ಸಂಪತ್ ರಾಜ್ ಎಂದು ಸಿಸಿಬಿ ಪೊಲೀಸರು ಕೋರ್ಟ್ಗೆ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ.

ಹೀಗಾಗಿ ಕೊನೆಗೂ ಸಿಸಿಬಿ ಪೊಲೀಸರ ಬಲೆಗೆ ಸಂಪತ್ ರಾಜ್ ಬೀಳುತ್ತಿದ್ದ ತಮ್ಮ ವಿರುದ್ಧ ರಾಜಕೀಯ ದ್ವೇಷ ಸಾಧಿಸಿ ಕೊಲೆಗೆ ಸಂಚು ರೂಪಿಸಿದ್ದ ಸಂಪತ್ರಾಜ್ ವಿರುದ್ಧ ಪಕ್ಷದಿಂದ ಕಠಿಣಕ್ರಮ ಕೈಗೊಳ್ಳಬೇಕೆಂದು ನಿನ್ನೆ ಅಖಂಡ ಶ್ರೀನಿವಾಸ್ ಹೇಳಿಕೆ ನೀಡಿದ್ದರು. ಈ ಸಂಬಂಧ ಇಂದು ಡಿ.ಕೆ ಶಿವಕುಮಾರ್ ಭೇಟಿ ಮಾಡುವುದಾಗಿಯೂ ಅಖಂಡ ಮಾತನಾಡಿದ್ದರು.

ಮಾಜಿ ಮೇಯರ್ ಸಂಪತ್ ರಾಜ್ ಬೆಂಬಲಕ್ಕೆ ಡಿ.ಕೆ ಶಿವಕುಮಾರ್ ನಿಂತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಈ ಕಾರಣಕ್ಕೇ ಶಾಸಕ ಅಖಂಡ ಶ್ರೀನಿವಾಸ್ ಭೇಟಿಗೆ ಡಿ.ಕೆ ಶಿವಕುಮಾರ್ ನಿರಾಕರಿಸಿದ್ರಾ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








