ಡಿ.ಕೆ.ಶಿವಕುಮಾರ್ ಸಂಘಟನಾ ಚತುರ : ಹೆಚ್.ವಿಶ್ವನಾಥ್
ಮೈಸೂರು :ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷವನ್ನು ಯಾವ ರೀತಿ ಸಂಘಟನೆ ಮಾಡಬೇಕೆಂದು ಕರಗತ ಮಾಡಿಕೊಂಡಿದ್ದಾರೆ. ಅವರು ಪಕ್ಷದ ರಾಜ್ಯಾಧ್ಯಕ್ಷನಾಗಿ ಅವರ ಪಕ್ಷದ ಸಂಘಟನೆ, ಚಾತುರ್ಯತೆಗೆ ಮೆಚ್ಚುತ್ತೇನೆ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ.
ಸಿದ್ದಾಂತ ಒಪ್ಪಿ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಬಹುದು ಎಂಬ ಡಿಕೆಶಿವಕುಮಾರ್ ಹೇಳಿಕಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಹೆಚ್.ವಿಶ್ವನಾಥ್, ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷನಾಗಿ ರಾಜಕೀಯ ಚಲನವಲನಗಳು ಮತ್ತು ಪರಿಸ್ಥಿತಿಗಳು ಎಲ್ಲದರ ಹಿನ್ನೆಲೆಯಲ್ಲಿ 17 ಜನ ಕಾಂಗ್ರೆಸ್ ನಿಂದ ಬಿಟ್ಟುಹೋಗಿದ್ದವರನ್ನು ಮಾತೃಸಂಸ್ಥೆಗೆ ವಾಪಸ್ ಬನ್ನಿ ಎಂದು ಕರೆಯುವುದು ಡಿ ಕೆ ಶಿವಕುಮಾರ್ ಅವರ ಸೌಜನ್ಯವನ್ನು ತೋರಿಸುತ್ತದೆ.
ಅವರು ಪಕ್ಷದ ರಾಜ್ಯಾಧ್ಯಕ್ಷನಾಗಿ ಅವರ ಪಕ್ಷದ ಸಂಘಟನೆ, ಚಾತುರ್ಯತೆಗೆ ಮೆಚ್ಚುತ್ತೇನೆ, ಅವರು ಕರೆದು ತಕ್ಷಣ ದಿಢೀರ್ ಎಂದು ಯಾರೂ ಹೋಗುವುದಿಲ್ಲ ಎಂದು ಹೇಳಿದರು.
ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ವಿಶ್ವನಾಥ್, ಸಿದ್ದರಾಮಯ್ಯನವರು ಹೇಳಿದಂತೆ ಪ್ರಳಯವೇನು ಆಗುವುದಿಲ್ಲ, ನಾವ್ಯಾರು ಆತುರಾತುರವಾಗಿ ಹೋಗುತ್ತೇವೆ ಎಂಬ ಭಯ ಸಿದ್ದರಾಮಯ್ಯನವರಿಗೆ ಬೇಡ ಎಂದು ಟಾಂಗ್ ನೀಡಿದರು.