ಮೈಸೂರು : ಜೂನ್ 7 ರಂದು ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಹಿನ್ನಲೆ ಇಂದು ಮೈಸೂರಿನ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಜೂನ್ 7 ರಂದು ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಕೊರೊನಾ ಭೀತಿ ಹಿನ್ನೆಲೆ ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕಾಗಿ ಮೈಸೂರಿನ ಎಲ್ಲಾ ವಾರ್ಡ್ ಗಳಲ್ಲಿ ಪದಗ್ರಹಣ ಕಾರ್ಯಕ್ರಮ ವೀಕ್ಷಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಮೈಸೂರಿನ 65 ವಾರ್ಡ್ ನಲ್ಲಿ ಎಲ್.ಇ.ಡಿ. ವಾಲ್ ಅಳವಡಿಸಲು ಚಿಂತನೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಇನ್ನು ಈ ಪೂರ್ವ ಭಾವಿ ಸಭೆಯಲ್ಲಿ ಪಾಲಿಕೆ ಸದಸ್ಯರುಗಳಾದ ಲೋಕೇಶ್, ಜೆ ಗೋಪಿ,ಮಾಜಿ ನಗರಾಧ್ಯಕ್ಷರಾದ ಟಿ ಎಸ್ ರವಿಶಂಕರ್, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಕೆಪಿಸಿಸಿ ಸದಸ್ಯರಾದ ಭಾಸ್ಕರ್ ,ವೀಣಾ, ಶ್ರೀನಾಥ್ ಬಾಬು, ಬ್ಲಾಕ್ ಅಧ್ಯಕ್ಷರುಗಳಾದ ಜಿ ಸೋಮಶೇಖರ್, ಶ್ರೀಧರ್, ಪ್ರಚಾರ ಸಮಿತಿ ಅಧ್ಯಕ್ಷರಾದ ಡಾ.ಎಂ ಕೆ ಅಶೋಕ್, ಯುವಕಾಂಗ್ರೆಸ್ ಅಧ್ಯಕ್ಷರಾದ ಮನೋಜ್, ಮಾಜಿ ಪಾಲಿಕೆ ಸದಸ್ಯರಾದ ಎಂ ಸುನೀಲ್, ಎಂ ಸಿ ಚಿಕ್ಕಣ್ಣ, ಓಬಿಸಿ ಅಧ್ಯಕ್ಷ ಶಿವಮಲ್ಲು, ಸೇವಾದಳ ಗಿರೀಶ್, ಐಟಿ ಸೆಲ್ ನಿರಾಲ್,ಡೈರಿ ವೆಂಕಟೇಶ್,ಡಾ.ಸುಜಾತ ರಾವ್,ನಾಗರತ್ನ, ಮಂಜುಳಾ ಹಾಗೂ ಕೆಆರ್ ಕ್ಷೇತ್ರದ ಎಲ್ಲಾ ವಾರ್ಡಿನ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.