ಬೆಂಗಳೂರು: ರಾಜಕೀಯದಲ್ಲಿ ನಿವೃತ್ತಿ ಎಂಬ ಪರಿಕಲ್ಪನೆ ಇಲ್ಲದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರಲ್ಲೂ ತಮ್ಮ ನಾಯಕತ್ವ ಮುಂದುವರೆಯುತ್ತದೆ ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿರಬಹುದು ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಡಿಕೆ ಸುರೇಶ್ ಅವರು, ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾರೆ, ಮುಂದೆಯೂ ನಡೆಸುತ್ತಾರೆ ಎಂದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶಾಸಕರ ಬೆಂಬಲ ಪಡೆಯಲು ಅಥವಾ ಕೇಳಲು ಇದು ಸೂಕ್ತ ಸಮಯವಲ್ಲ ಎಂದು ಸುರೇಶ್ ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆ ಪದೇ ಪದೇ ಏಕೆ ಉದ್ಭವಿಸುತ್ತಿದೆ ಎಂದು ತಮಗೆ ತಿಳಿದಿಲ್ಲ ಎಂದೂ ಅವರು ಅಚ್ಚರಿ ವ್ಯಕ್ತಪಡಿಸಿದರು.








