ಭಾರತ ರಕ್ಷಿಸಿ ಆಂದೋಲನಕ್ಕೆ ಡಿ.ಕೆ. ಶಿವಕುಮಾರ್ ಬೆಂಬಲ
ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಹಾಗೂ ರಾಜ್ಯ ಸರಕಾರವನ್ನು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು (JCTU) ಆ. 10 ರಂದು ಕರೆನೀಡಿರುವ ಭಾರತ ರಕ್ಷಿಸಿ ಆಂದೋಲನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಕಾರ್ಖಾನೆಗಳ ಕಾಯಿದೆ, ಕೈಗಾರಿಕಾ ವಿವಾದ ಕಾಯಿದೆ, ಗುತ್ತಿಗೆ ಕಾರ್ಮಿಕರ ಕಾಯಿದೆಗಳಿಗೆ ತಂದಿರುವ ತಿದ್ದುಪಡಿಯನ್ನು ತಕ್ಷಣ ರದ್ದುಪಡಿಸಬೇಕು.
ನಿಗದಿತ ಅವಧಿ ಕೆಲಸ ಪದ್ಧತಿ ಅನುಷ್ಠಾನಕ್ಕೆ ತರಲಾಗಿರುವ ತಿದ್ದುಪಡಿ ಹಾಗೂ ವ್ಯತ್ಯಸ್ಥ ತುಟ್ಟಿಭತ್ಯೆ ಮುಂದೂಡಿಕೆ ಆದೇಶ ಹಿಂಪಡೆಯಬೇಕು.
ಭೂಸುಧಾರಣೆ, ಎಪಿಎಂಸಿ ಕಾಯಿದೆ, ಅಗತ್ಯ ವಸ್ತುಗಳ ಕಾಯಿದೆಗಳಿಗೆ ತಿದ್ದುಪಡಿ ತಂದಿರುವ ಸುಗ್ರೀವಾಜ್ಞೆಗಳನ್ನು ವಾಪಸ್ಸು ಪಡೆಯಬೇಕು. ಎಂದು ಆಗ್ರಹಿಸಿದರು.
ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯಿದೆ 2008 ರ ಅಡಿಯಲ್ಲಿ ಕೇಂದ್ರ ಸರಕಾರವು 10,000 ಕೋಟಿ ರುಪಾಯಿಗಳ ವರ್ತುಲ ನಿಧಿಯನ್ನು ಸ್ಥಾಪಿಸಬೇಕು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಸಾರ್ವತ್ರಿಕ ಮೂಲ ವರಮಾನ ಯೋಜನೆ, ನಿರುದ್ಯೋಗ ಭತ್ಯೆ, ನಗರ ಪ್ರದೇಶ ಉದ್ಯೋಗ ಖಾತ್ರಿ ಯೋಜನೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಸಂಸತ್ ಹಾಗೂ ರಾಜ್ಯ ವಿಧಾನ ಮಂಡಲ ಅಧಿವೇಶನ ಕರೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದೇ 10 ರಂದು ಹಮ್ಮಿಕೊಂಡಿರುವ ರಾಜ್ಯಾದ್ಯಂತದ ಭಾರತ ರಕ್ಷಿಸಿ ಆಂದೋಲನವನ್ನು ತಾವು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಶಿವಕುಮಾರ್ ತಿಳಿಸಿದರು.
ರಾಯಚೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಭೇಟಿ.
ರಾಯಚೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್, ಲಿಂಗಸೂರು ಶಾಸಕ ಡಿ.ಎಸ್ ಹೂಲಗೇರಿ, ಮಾಜಿ ಸಂಸದ ಬಿ.ವಿ ನಾಯಕ್, ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರವಿ ಬೋಸರಾಜು, ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಹಾಜರಿದ್ದರು .