ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಎಸ್ ಎಂ ಕೃಷ್ಣ ಮೊಮ್ಮಗ, ದಿ. ಸಿದ್ಧಾರ್ಥ್ ಹೆಗಡೆ ಪುತ್ರ ಅಮತ್ರ್ಯ ಹೆಗಡೆ ಇಬ್ಬರ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 14 ಅಥವಾ 24 2021ರಂದು ಐಶ್ವರ್ಯಾ ಮತ್ತು ಅಮತ್ರ್ಯ ಮದುವೆ ನೆರವೇರಿಸಲು ಎರಡೂ ಕುಟುಂಬಗಳು ನಿರ್ಧರಿಸಿವೆ ಎಂದು ತಿಳಿದು ಬಂದಿದೆ. ಆದ್ರೆ ಐಶ್ವರ್ಯಾ ಮತ್ತು ಅಮತ್ರ್ಯ ಫೆಬ್ರವರಿ 14 ಪ್ರೇಮಿಗಳ ದಿನದಂದು ಮದುವೆಯಾಗುವ ಬಗ್ಗೆ ಇಚ್ಛಿಸಿದ್ದಾರಂತೆ. ಹೀಗಾಗಿ ಫೆಬ್ರವರಿ 14 ಅಥವಾ 24 ಎರಡರಲ್ಲಿ ಒಂದು ದಿನ ಅಂತಿಮವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮದುವೆಯನ್ನ ಅರಮನೆ ಮೈದಾನದಲ್ಲಿ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದ್ದು, ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ಸ್ಥಳ ನಿಗದಿ ಅಂತಿಮವಾಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಏಪ್ರಿಲ್ 15ರಂದು ನಡೆದ ಸಮಾರಂಭದಲ್ಲಿ ಎರಡೂ ಕುಟುಂಬಗಳು ತಾಂಬೂಲ ಬದಲಿಸಿಕೊಂಡಿದ್ದವು. ನವೆಂಬರ್ ನಲ್ಲಿ ನಿಶ್ಚಿತಾರ್ಥ ಮತ್ತು ಫೆಬ್ರವರಿಯಲ್ಲಿ ಮದುವೆ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದು, ದಿನಾಂಕ ಅಂತಿಮಾಗಬೇಕಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.