ಬೆಂಗಳೂರು : ದೊರೆಸ್ವಾಮಿ ಬಗ್ಗೆ ನೀಡಿರುವ ಯಾವುದೇ ಹೇಳಿಕೆಯನ್ನು ಹಿಂಪಡೆಯಲ್ಲ. ಅವರಲ್ಲಿ ಕ್ಷಮೆ ಕೇಳುವ ಪ್ರಶ್ನೇ ಇಲ್ಲ. ನಾನು ಸ್ವಾತಂತ್ರö್ಯ ಹೋರಾಟಗಾರರಿಗೆ ಗೌರವ ಕೊಡುತ್ತೇನೆಯೇ ಹೊರತು ನಕಲಿ ಹೋರಾಟಗಾರರಿಗೆ ಅಲ್ಲ ಎಂದು ಮತ್ತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದೊರೆಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊರೆಸ್ವಾಮಿ ಹೋರಾಟದ ಬಗ್ಗೆ ತನಿಖೆಯಾಗಲಿ. ಅವರು ಬ್ರಿಟಿಷ್ ಲಾಠಿಯ ಬೂಟಿನ ಏಟು ತಿಂದಿದ್ದಾರೆಯೇ? ಕಾಲಾಪಾನಿ ಶಿಕ್ಷೆ ಎಷ್ಟು ಬಾರಿ ಅನುಭವಿಸಿದ್ದಾರೆ ? ಎಷ್ಟು ಸಲ ದೊರೆಸ್ವಾಮಿ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಪ್ರಶ್ನಿಸಿದರು.
ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ
ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...








