ಮಕ್ಕಳನ್ನ ಸಾಯಿಸಬೇಕು ಎಂದುಕೊಂಡಿದ್ದೀರಾ..? : ಹೆಚ್.ವಿಶ್ವನಾಥ್
ಬೆಂಗಳೂರು : ಮಕ್ಕಳನ್ನ ಸಾಯಿಸಬೇಕು ಎಂದುಕೊಂಡಿದ್ದೀರಾ..? ಶಿಕ್ಷಕರನ್ನ, ಪೋಷಕರನ್ನ ಬಲಿ ಪಡೆಯುವ ಅಧಿಕಾರ ಸರ್ಕಾರಕ್ಕಿಲ್ಲ ಎಂದು ಸರ್ಕಾರದ ವಿರುದ್ಧ ಎಂಎಲ್ ಸಿ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇನ್ನೇನು 10 ರಿಂದ 15 ದಿನಗಳಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಲಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ಮಾಡಿದರೆ ಮಕ್ಕಳ ಕತೆ ಏನಾಗಬೇಡ..? ತಾನು ಹೇಳಿದ್ದೇ ನಡೆಯಬೇಕು ಎಂಬ ಅಹಂನಲ್ಲಿ ಸರ್ಕಾರ ಮಕ್ಕಳನ್ನೇ ಮರೆತಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ ಕಾಗೇರಿ, ತನ್ವೀರ್ ಸೇಠ್ ಹಾಗೂ ನಾನು ಸೇರಿದಂತೆ ಅನೇಕರು ಇದ್ದೇವೆ. ಶಿಕ್ಷಣ ಇಲಾಖೆಯಲ್ಲಿ ಆಯುಕ್ತರಾಗಿ, ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ ಹಿರಿಯ ಅಧಿಕಾರಿಗಳೂ ಇದ್ದಾರೆ. ಆದರೆ ಸರ್ಕಾರ ಪ್ರತಿಪಕ್ಷದವರು ಸೇರಿದಂತೆ ಯಾರ ಅಭಿಪ್ರಾಯವನ್ನೂ ಕೇಳಿಲ್ಲ. ಮಕ್ಕಳನ್ನ ಸಾಯಿಸಬೇಕು ಎಂದುಕೊಂಡಿದ್ದೀರಾ ಎಂದು ಪ್ರಶ್ನಿಸಿದರು.
ಶಿಕ್ಷಕರನ್ನ, ಪೋಷಕರನ್ನ ಬಲಿ ಪಡೆಯುವ ಅಧಿಕಾರ ಸರ್ಕಾರಕ್ಕಿಲ್ಲ. ಕೇಂದ್ರ ಸರ್ಕಾರ ದೊಡ್ಡ ದೊಡ್ಡ ಪರೀಕ್ಷೆಗಳನ್ನೇ ರದ್ದು ಮಾಡಿದೆ. ಅಂತದ್ರಲ್ಲಿ ಶಿಕ್ಷಣ ಸಚಿವರು ಯಾವ ಹಠಕ್ಕೆ ಈ ಪರೀಕ್ಷೆ ಮಾಡುತ್ತಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೀವ ಹಾಗೂ ಜೀವನವನ್ನ ತೆಗೆಯಲು ಈ ರೀತಿ ಮಾಡ್ತಿದ್ದಾರೆ ಎಂದು ಸುರೇಶ್ ಕುಮಾರ್ ವಿರುದ್ಧ ಗರಂ ಆದರು.









