ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಹಿಳೆಯರು ಋತುಚಕ್ರ ಸಮಯದಲ್ಲಿ ಕೊರೋನಾ ಲಸಿಕೆ ಪಡೆಯಬಹುದೇ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು?

Shwetha by Shwetha
April 25, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Covid vaccine affect your period
Share on FacebookShare on TwitterShare on WhatsappShare on Telegram

ಮಹಿಳೆಯರು ಋತುಚಕ್ರ ಸಮಯದಲ್ಲಿ ಕೊರೋನಾ ಲಸಿಕೆ ಪಡೆಯಬಹುದೇ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು?

ಮಹಿಳೆಯರು ಋತುಚಕ್ರ ಸಮಯದಲ್ಲಿ ಕೊರೋನಾ ಲಸಿಕೆ ಪಡೆಯಬಹುದೇ ಎಂಬ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಲವು ಸುದ್ದಿಗಳು ವೈರಲ್ ಆಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ವೈದ್ಯರು ಸ್ಪಷ್ಟನೆ ನೀಡಿದ್ದು ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Related posts

King Mohammed VI sent congratulations to Morocco’s national football team

FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!

July 6, 2026
ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

July 6, 2026


ಕೆಲವು ಮಹಿಳೆಯರು ಲಸಿಕೆ ತೆಗೆದುಕೊಂಡ ನಂತರ ನೋವಿನ ಅಥವಾ ವಿಳಂಬದ ಋತುಚಕ್ರ ಅವಧಿಗಳ ಅನುಭವಗಳನ್ನು ಹಂಚಿಕೊಂಡ ನಂತರ ಕೋವಿಡ್ 19 ಲಸಿಕೆಗಳು ಮುಟ್ಟಿನ ಚಕ್ರ ಮತ್ತು ಫಲವತ್ತತೆಗೆ ಪರಿಣಾಮ ಬೀರುತ್ತವೆ ಎಂಬ ಆತಂಕವನ್ನು ಹುಟ್ಟಿಸುವ ಸುದ್ದಿಗಳು ಸಾಮಾಜಿಕ ‌ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ವೈದ್ಯಕೀಯ ತಜ್ಞರು ಇದನ್ನು ‌ನಿರಾಕರಿಸಿದ್ದಾರೆ.

ಇಲ್ಲಿಯವರೆಗೆ, ಲಸಿಕೆಗಳು ಋತುಚಕ್ರದಲ್ಲಿನ ಬದಲಾವಣೆಗೆ ಕಾರಣವಾಗುವ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಯೇಲ್ ಸ್ಕೂಲ್ ಆಫ್ ಮೆಡಿಸಿನ್‌ನ ಆಲಿಸ್ ಲು-ಕುಲ್ಲಿಗನ್ ಮತ್ತು ಡಾ. ರಾಂದಿ ಹಟ್ಟರ್ ಎಪ್ಸ್ಟೀನ್ ಅಂಗ್ಲ ಪತ್ರಿಕೆಯಲ್ಲಿ ಬರೆದಿದ್ದಾರೆ. ಒಂದು ವೇಳೆ ಋತುಚಕ್ರ ತಡವಾದರೂ, ವಿಳಂಬ ಅವಧಿಯ ಬಗ್ಗೆ ಆತಂಕ ಪಡಲು ಯಾವುದೇ ಕಾರಣವಿಲ್ಲ ಎಂದು ‌ಹೇಳಿದ್ದಾರೆ.
ಸೇಂಟ್ ಲೂಯಿಸ್‌ನ ವಾಷಿಂಗ್ಟನ್ ಯೂನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್‌ನಲ್ಲಿ ಇಲಿನಾಯ್ಸ್ ವಿಶ್ವವಿದ್ಯಾಲಯದ ಅರ್ಬಾನಾ-ಚಾಂಪೇನ್‌ನ ಸಹಾಯಕ ಪ್ರಾಧ್ಯಾಪಕ ಡಾ. ಕ್ಯಾಥರಿನ್ ಕ್ಲಾನ್ಸಿ ಮತ್ತು ಸಾರ್ವಜನಿಕ ಆರೋಗ್ಯ ವಿಜ್ಞಾನ ವಿಭಾಗದಲ್ಲಿ ಪೋಸ್ಟ್ ಡಾಕ್ಟರಲ್ ಸ್ಕಾಲರ್ ಡಾ. ಕ್ಯಾಥರೀನ್ ಲೀ ಅಸಹಜ ಅವಧಿಗೆ ಮತ್ತು ಕೋವಿಡ್-19 ಲಸಿಕೆಗಳ ನಡುವೆ ಯಾವುದೇ ಸಂಬಂಧವಿದೆಯೇ ಎಂದು ನಿರ್ಧರಿಸಲು ಅಧ್ಯಯನವನ್ನು ನಡೆಸಲು ಸಿದ್ಧರಾಗಿದ್ದಾರೆ ಎಂದು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

https://twitter.com/ScissorTongue/status/1385822292597379075?s=19

ಸಾಮಾಜಿಕ ಜಾಲತಾಣದಲ್ಲಿ ಋತುಚಕ್ರ ಸಮಯದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಮಹಿಳೆಯರು ಮತ್ತು ಹುಡುಗಿಯರು ಆ ಅವಧಿಗಳಲ್ಲಿ ಲಸಿಕೆ ತೆಗೆದುಕೊಳ್ಳಬಾರದು ಎಂದು ಸಂದೇಶಗಳು ಫಾರ್ವರ್ಡ್ ಆಗುತ್ತಿದೆ.
https://twitter.com/dilnajaaneyaaa/status/1385841528405323777?s=19

ಇದಕ್ಕೆ ಸಂಬಂಧಿಸಿದಂತೆ ಸ್ತ್ರೀರೋಗತಜ್ಞ ಡಾ.ಮುಂಜಾಲ್ ವಿ ಕಪಾಡಿಯಾ, ಕೆಲವು ಸಿಲ್ಲಿ ವಾಟ್ಸಾಪ್ ವದಂತಿಯು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ನಿಮ್ಮ ಋತುಚಕ್ರ ಅವಧಿಯು ಲಸಿಕೆ ಪರಿಣಾಮಕಾರಿತ್ವದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಸಾಧ್ಯವಾದಷ್ಟು ಬೇಗ ಲಸಿಕೆ ತೆಗೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇನ್ನೊಬ್ಬ ವೈದ್ಯಕೀಯ ಸಿಬ್ಬಂದಿ ಆಕೆಯ ಋತುಚಕ್ರ ಅವಧಿಯಲ್ಲಿ ಎರಡೂ ಡೋಸ್ ಗಳನ್ನು ಸ್ವೀಕರಿಸಿರುವ ಬಗ್ಗೆ ಬರೆದು ಕೊಂಡಿದ್ದಾರೆ.
‘ ನಾನು ಋತುಚಕ್ರ ಅವಧಿಗಳನ್ನು ಹೊಂದಿರುವಾಗ ನನ್ನ ಎರಡೂ ಡೋಸ್ ಗಳನ್ನು ಪಡೆದುಕೊಂಡಿದ್ದೇನೆ. ನಾನು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಒಂದು ವಾರದೊಳಗೆ ದೊಡ್ಡ ಮಟ್ಟಿನ ಅಡ್ಡಪರಿಣಾಮಗಳಿಲ್ಲದೆ ಚೇತರಿಸಿಕೊಂಡಿದ್ದೇನೆ. ಲಸಿಕೆಗೆ ಧನ್ಯವಾದಗಳು. ದಯವಿಟ್ಟು ಲಸಿಕೆ ಪಡೆಯಿರಿ. ತುಂಬಾ ಲಘುವಾದ ಅಡ್ಡಪರಿಣಾಮಗಳು ಉಂಟಾಗುತ್ತವೆ ಆದರೆ ಅದು ನಿಮ್ಮ ಜೀವವನ್ನು ಉಳಿಸುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.

I got both my doses when I had my periods. I got covid later on because I work in a hospital but recovered without side effects within a week all thanks to he vaccine. PLEASE GET VACCINATED, there will be very mild side effects BUT IT WILL SAVE YOUR LIFE. https://t.co/XqZCM0Ob0k

— S (@vakeel_saheba) April 24, 2021

ಮತ್ತೋರ್ವ ಸ್ತ್ರೀರೋಗ ತಜ್ಞೆ, ವದಂತಿಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ಹೇಳಿದ್ದಾರೆ.
ಮುಂಬೈನ ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಯ ಪ್ರಸೂತಿ ತಜ್ಞೆ ಮತ್ತು ಸ್ತ್ರೀರೋಗ ತಜ್ಞೆ ಡಾ.ವೈಶಾಲಿ ಜೋಶಿ, ಕೋವಿಡ್ ವ್ಯಾಕ್ಸಿನೇಷನ್ ಮುಟ್ಟಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ. ಕೋವಿಡ್ -19 ಲಸಿಕೆ ಋತು ಚಕ್ರದ ಅವಧಿ ಮತ್ತು ಅದರ ಹರಿವಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಮೌಲ್ಯೀಕರಿಸಲು ಯಾವುದೇ ಡೇಟಾ ಇಲ್ಲ. ಜನರು ತಮ್ಮದೇ ಆದ ವೈಯಕ್ತಿಕ ಅನುಭವಗಳನ್ನು ಹಂಚಿಕೊಳ್ಳುತ್ತಿರುವ ಸಾಮಾಜಿಕ ಮಾಧ್ಯಮದಿಂದ ಇದು ಹುಟ್ಟಿಕೊಂಡಿದೆ. ಎಲ್ಲಾ ಅಂತರರಾಷ್ಟ್ರೀಯ ಸಲಹಾ ಸಂಸ್ಥೆಗಳು ಮತ್ತು ಸಂಸ್ಥೆಗಳು ಇದನ್ನು ಒಪ್ಪಿಕೊಂಡಿಲ್ಲ. ಅಲ್ಲದೆ, ಋತು ಚಕ್ರದ ಅವಧಿಯನ್ನು ಅವಲಂಬಿಸಿ ವ್ಯಾಕ್ಸಿನೇಷನ್ ದಿನಾಂಕವನ್ನು ಮರು ನಿಗದಿಪಡಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
Covid vaccine affect your period
ಆದ್ದರಿಂದ ಗರ್ಭಿಣಿಯರನ್ನು ಹೊರತುಪಡಿಸಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಮಹಿಳೆಯರು ತಮ್ಮ ಅವಧಿಗಳು, ಹಾರ್ಮೋನುಗಳ ಸ್ಥಿತಿಯನ್ನು ಲೆಕ್ಕಿಸದೆ ಲಸಿಕೆ ಪಡೆಯಬೇಕು ಎಂದು ಅವರು ಹೇಳಿದ್ದಾರೆ.

ಆರೋಗ್ಯಕರ ಶಕ್ತಿಯುತ ಲಿವರ್/ಶ್ವಾಸಕೋಶಕ್ಕಾಗಿ ಮನೆಮದ್ದುಗಳು#Saakshatv #healthtips #Homeremedies https://t.co/N9Q4oC4hwR

— Saaksha TV (@SaakshaTv) April 20, 2021

ದರ್ಶನ್ ಮೇಲೆ ನಾನು ಬಹಳ ಕ್ರಶ್ ಹೊಂದಿದ್ದೇನೆ – ನಟಿ ಗಾಯತ್ರಿ ಐಯ್ಯರ್#Darshan #VinodhPrabhakar #gayathri #sandalwood https://t.co/ovvgICjjcW

— Saaksha TV (@SaakshaTv) April 20, 2021

ಬಿರುಬಿಸಿಲಿಗೆ ಚಾಕಲೇಟ್ ಮಿಲ್ಕ್ ಶೇಕ್#Saakshatv #cookingrecipe #chocolate #milkshake https://t.co/JCAQoyp8GI

— Saaksha TV (@SaakshaTv) April 20, 2021

ಕೋವಿಡ್ -19 ಎರಡನೇ ಅಲೆ ಪ್ರಕರಣಗಳು ಭಾರತದಲ್ಲಿ ಎಷ್ಟು ಸಮಯದ ಬಳಿಕ ಇಳಿಮುಖ ಕಾಣಲಿದೆ ?#covid19 #secondwave https://t.co/ViqnbxhzTN

— Saaksha TV (@SaakshaTv) April 20, 2021

ಮೇ 1 ರಿಂದ ಕೋವಿಡ್-19 ವ್ಯಾಕ್ಸಿನೇಷನ್‌ 3ನೇ ಡ್ರೈವ್ – ಯಾವ್ಯಾವ ಲಸಿಕೆಗಳು ಲಭ್ಯ? ದರವೆಷ್ಟು ? ಯಾವುದು ಸುರಕ್ಷಿತ ? – ಸಂಪೂರ್ಣ ಮಾಹಿತಿ ಇಲ್ಲಿದೆ.#Covid19vaccinationdrive #coronavaccination https://t.co/8fhRzUu4AT

— Saaksha TV (@SaakshaTv) April 24, 2021

#Covidvaccine #period

Tags: Covid vaccine affect your period
ShareTweetSendShare
Join us on:

Related Posts

King Mohammed VI sent congratulations to Morocco’s national football team

FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!

by admin
July 6, 2026
0

ಹಾಗಂತ... ಇದು ಖಂಡಿತವಾಗಿಯೂ ಫುಟ್‍ಬಾಲ್ ಜಗತ್ತಿನ ಕಾಲ್ಪನಿಕ ಕಥೆಯಂತೂ ಅಲ್ಲವೇ ಅಲ್ಲ. ಬದಲಾಗಿ ಮತ್ತೊಂದು ಸಣ್ಣ ದೇಶದ ಫುಟ್‍ಬಾಲ್ ಆಟದ ಮಹೋನ್ನತ ಪರ್ವದ ನೈಜ ಚಿತ್ರಣ. ಒಬ್ಬ...

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

by Shwetha
July 6, 2026
0

ಮನೆಯಲ್ಲಿರುವ ಹಳೆಯ ಚಿನ್ನವನ್ನು ಲಾಕರ್ ನಲ್ಲಿಟ್ಟು ಸುಮ್ಮನೆ ಕೂರುವ ಬದಲು ಅದರಿಂದಲೇ ಲಾಭ ಗಳಿಸುವ ಸುವರ್ಣಾವಕಾಶವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ದೇಶದ ಚಿನ್ನದ ಆಮದು ಪ್ರಮಾಣವನ್ನು ತಗ್ಗಿಸುವ...

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

by Shwetha
July 6, 2026
0

ಗರ್ಭಿಣಿಯಾಗಿದ್ದಾಗ ಪತಿ ತನಗೆ ಫಿಂಗರ್ ಚಿಪ್ಸ್ ಮತ್ತು ಮಾಂಸದೂಟ ತಿನ್ನಲು ಬಿಡಲಿಲ್ಲ ಎಂಬ ವಿಚಿತ್ರ ಕಾರಣ ನೀಡಿ ಪತ್ನಿಯೊಬ್ಬಳು ತನ್ನ ಎನ್ಆರ್ಐ ಪತಿಯ ಮೇಲೆ ದಾಖಲಿಸಿದ್ದ ಕ್ರಿಮಿನಲ್...

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

by Shwetha
July 6, 2026
0

ವಾಷಿಂಗ್ಟನ್: ಇರಾನ್ ದೇಶದ ಉನ್ನತ ನಾಯಕತ್ವವನ್ನು ಕೇವಲ ಒಂದೇ ಒಂದು ದಾಳಿಯ ಮೂಲಕ ಸಂಪೂರ್ಣವಾಗಿ ನಾಶಪಡಿಸುವ ಸಾಮರ್ಥ್ಯ ಅಮೆರಿಕಕ್ಕಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಘಾತಕಾರಿ...

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಅಧಿಕೃತವಾಗಿ ನೋಂದಣಿಯಾದರೆ ಮಾತ್ರ ಇಂತಹ ಅಕ್ರಮಗಳಿಗೆ ಮುಕ್ತಿ ಸಿಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. ಅಯೋಧ್ಯಾ ರಾಮಮಂದಿರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram