ನಟ ದರ್ಶನ್ (Darshan) ಮನೆಯ ನಾಯಿಯೊಂದು ಮಹಿಳೆಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಪೊಲೀಸರು ನೋಟಿಸ್ (Notice) ನೀಡಿದ್ದಾರೆ.
ಮೂರು ದಿನಗಳ ಒಳಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ನಾಯಿಯ ಕೇರ್ ಟೇಕರ್ ಹೇಮಂತ್ ಅವರ ವಿಚಾರಣೆ ಮಾಡಿರುವ ಪೊಲೀಸರು, ನಂತರ ದರ್ಶನ್ ಗೆ ನೋಟಿಸ್ ನೀಡಿದ್ದಾರೆ. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಕುರಿತು ಆರ್ ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ಸ್ವತಃ ದೂರುದಾರರಾದ ಅಮಿತಾ ಜಿಂದಾಲ್ (Amita), ನಾನು ಆರ್ ಆರ್ ನಗರದಲ್ಲಿನ ಆಸ್ಪತ್ರೆ ಕಾರ್ಯಕ್ರಮಕ್ಕೆ ಆಗಮಿಸಿದ್ದೆ. ಈ ವೇಳೆ ದರ್ಶನ್ ಮನೆಯ ಹತ್ತಿರ ಇರುವ ಖಾಲಿ ಜಾಗದಲ್ಲಿ ಕಾರು ಪಾರ್ಕ್ ಮಾಡಿದ್ದೆ. ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವು. ದರ್ಶನ್ರ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಕೇಳಿದೆ, ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದು ಸಿಬ್ಬಂದಿ ಹೇಳಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಆಗ ನಾಯಿಗಳು ದಾಳಿ ನಡೆಸಿವೆ. ಈ ವೇಳೆ ಮಹಿಳೆಯ ಹೊಟ್ಟೆ ಹಾಗೂ ಕೈಗೆ ನಾಯಿಗಳು ಕಡಿದು ಗಾಯ ಮಾಡಿದ್ದವು. ಹೀಗಾಗಿ ಮಹಿಳೆ ದೂರು ನೀಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತಾ ಅವರು ದೂರು ನೀಡಿದ್ದರು.