ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಾಗಾರಾಧನೆಯನ್ನು ಈ ರೀತಿ ಮಾಡುವುದರಿಂದ ನಿಮ್ಮ ಬದುಕೇ ಬದಲಾಗುತ್ತದೆ!

ಗುರುಜಿ ಬಳಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಉತ್ತರ ಪಡೆಯಿರಿ

Author2 by Author2
July 16, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

09-08-2024 ಶುಕ್ರವಾರ
ನಾಗರ ಪಂಚಮಿ

ಚಾಂದ್ರಮಾನದ ಐದನೆಯ ತಿಂಗಳೇ ಶ್ರಾವಣ . ಈ ತಿಂಗಳಿನ ಆರಂಭದ ಹಬ್ಬವೇ ನಾಗರ ಪಂಚಮಿ. ನಮ್ಮ ನಾಡಿಗೆ ದೊಡ್ಡ ಹಬ್ಬ . ಪುರಾಣಗಳಲ್ಲಿಯೂ ಉಲ್ಲೇಖಿತವಾದ ನಮ್ಮ ಈ ಪರಶುರಾಮ ಸೃಷ್ಟಿಯ ವಿಶೇಷ ಹಬ್ಬವಿದು ಎನ್ನುವುದರಲ್ಲಿಯೇ ತುಂಬಾ ಔಚಿತ್ಯವಿದೆ.

Related posts

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

January 22, 2026

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ.

January 22, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಿ ಆರಾಧಿಸುವ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ ತಂತ್ರಿ 8548998564. ಇವರಿಂದ ಜೇವನದಲ್ಲಿ ನೀವು ಅನುಭಿಸುತ್ತಾ ಇರೋ ಸಕಲ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಒಮ್ಮೆ ಕರೆ ಮಾಡಿರಿ ಈಗಾಗಲೇ ಗುರುಗಳ ಸಲಹೆ ಪಡೆದು ಅನೇಕ ಜನರು ಶಾಶ್ವತ ಪರಿಹಾರ ಪಡೆದುಕೊಂಡು ಸುಖ ಜೀವನ ನಡೆಸುತ್ತಾ ಇದ್ದಾರೆ, ನಿಮ್ಮ ನಿರುದ್ಯೋಗ ಸಮಸ್ಯೆ ಇರ್ಲಿ ಅಥವಾ ಪ್ರೀತಿ ಪ್ರೇಮದ ವಿಚಾರ ಇರ್ಲಿ ಅಥವ ಮನೆಯಲ್ಲಿ ದಾಂಪತ್ಯ ಸಲಹೆಗಳು ಅತ್ತೆ ಸೊಸೆ ಕಿರಿ ಕಿರಿ ಇನ್ನು ಗುಪ್ತ ಸಮಸ್ಯೆಗಳನ್ನು ಸಹ ಬಲಿಷ್ಠ ಶ್ರೀ ಕಟೀಲು ರಕ್ತೇಶ್ವರಿ ದೇವಿ ಪೂಜೆಗಳಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ, ಎಲ್ಲ ಸಮಸ್ಯೆಗಳು ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಶಾಶ್ವತ ಪರಿಹಾರ ಫೋನ್ ಮುಖಾಂತರ ಮಾಡಲಾಗುವುದು ಒಮ್ಮೆ ಕರೆ ಮಾಡಿರಿ 8548998564

ನಾಗಾರಾಧನೆಯು ಜಗತ್ತಿನ ಇತಿಹಾಸದಲ್ಲಿ ಅತ್ಯಂತ ಪ್ರಾಚೀನವಾದುದು. ನಾಗಾರಾಧನೆ ಎಂಬುದು ಕೇವಲ ಗ್ರಾಮೀಣ ಜನತೆಯ ನಂಬಿಕೆಯಾಗಿ ಉಳಿದಿಲ್ಲ. ಈ ನಂಬಿಕೆಯು ಇಂದು ನಾಗರಿಕರೆನಿಸಿದ ವಿದ್ಯಾವಂತರ ಮನೆ ಮನಗಳಲ್ಲೂ ಆಳವಾಗಿ ಬೇರೂರಿ ನಿಂತಿದೆ. ನಾಗರ ಪಂಚಮಿಯಂದು ನಾಗದೇವತೆಗೆ ತನು ಹಾಕುವಲ್ಲಿಂದ, ತಂಬಿಲ ನೀಡುವಲ್ಲಿಂದ ತೊಡಗಿ ಅಷ್ಟ ಪವಿತ್ರ ನಾಗಮಂಡಲದಂತಹ ವಿಶಿಷ್ಟ ಆರಾಧನಾ ಕ್ರಮಗಳ ವರೆಗೆ ಅವರವರ ಶ್ರದ್ಧಾಭಕ್ತಿ, ಆರ್ಥಿಕ ಸ್ಥಿತಿಗತಿಗಳನ್ನು ಅವಲಂಬಿಸಿ ನಾಗಾರಾಧನೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ನಾಗಾರಾಧನೆಯು ಒಂದರ್ಥದಲ್ಲಿ ಪ್ರಕೃತಿಯ ಆರಾಧನೆ.

ನಾಗಾರಾಧನೆ ಇದೊಂದು ಪ್ರಾಚೀನ ಆರಾಧನೆ . ವೇದದ ಸೊಲ್ಲುಗಳು ನಾಗಪೂಜೆಯ ಪ್ರಾಚೀನತೆಯನ್ನು ತಿಳಿಯ ಪಡಿಸುತ್ತವೆ . ನಾಗ ದೇವರು ಅಗಣಿತ ಮಹಿಮೆಯ ಶಕ್ತಿಯೆಂದು ಸರ್ಪ ಸೂಕ್ತಗಳ ವರ್ಣನೆಯಿದೆ.

‘ “ಅನಂತಶ್ಚಾಸ್ಮಿ ನಾಗಾನಾಂ ” – ಶ್ರೀ ಕೃಷ್ಣ ಗೀತೆಯಲ್ಲಿ ತಿಳಿಸಿದ ಈ ಮಾತು ಸದಾ ಸ್ಮರಣೀಯವಾದುದು . ನಮ್ಮ ಭಾರತದ ಹರಪ್ಪ – ಮೊಹೆಂಜೊದಾರೋಗಳಲ್ಲಿ ಲಭ್ಯವಾದ ನಾಗ ಮುದ್ರೆಗಳು , ಗೋಕರ್ಣದ ನಾಗ ಬಂಧ ಚಿತ್ರ , ಬನವಾಸಿಯಲ್ಲಿರುವ ಕ್ರಿ . ಶ . ಮೂರನೆಯ ಶತಮಾನದ ನಾಗ ಪ್ರತೀಕಗಳು , ಶಿಲಾ ಶಾಸನಗಳಲ್ಲಿ ಕಾಣ ಸಿಗುವ ಹಾವಿನ ಚಿತ್ರಗಳು ಭಾರತದಲ್ಲಿ ಅನಾದಿಯಿಂದಲೂ ನಾಗ ದೇವರ ಬಗ್ಗೆ ಭಯ ಭಕ್ತಿಯಿತ್ತು ಎಂಬುದನ್ನು ಸಾರುತ್ತಲಿವೆ . ಪ್ರಾಚೀನ ಕಾಲದ ಕಾಷ್ಠ ಶಿಲ್ಪಗಳಲ್ಲಿರುವ ನಾಗ ಬಂಧದ ಸುಂದರ ದೃಶ್ಯ ಮನ ಮೋಹಕ . ದೇವರ ಪ್ರಭಾವಳಿ , ಆರತಿ ತಟ್ಟೆ , ಉದ್ಧರಣೆ ( ಸೌಟು ) , ಗರ್ಭ ಗೃಹದ ಮಾಡಿನ ಆಧಾರದ ಲೋಹದ ಆಕೃತಿಗಳು, ದೇವರ ವಿಗ್ರಹದ ಶಿರೋಭಾಗ ಇವೆಲ್ಲವುಗಳಲ್ಲಿ ನಾಗ ಸಂಕೇತಗಳನ್ನು ಗುರುತಿಸಬಹುದಾಗಿದೆ .

ವಿಧಿಯ ಆಟದಂತೆ ನಾಗಗಳು ಭೂಮಿಯಿಂದ ತಮ್ಮ ವಾಸ್ತವ್ಯದ ಸ್ಥಾನ ಬದಲಾಯಿಸಿಕೊಂಡು ಅನುಗ್ರಹ ಪಡೆದ ಅರ್ಥಾತ್ ಬದುಕು ರೂಪಿಸಿಕೊಂಡ ದಿನವೇ ಪಂಚಮಿ . ಹೀಗಾಗಿ ಪ್ರತಿ ತಿಂಗಳ ಶುಕ್ಲ ಪಂಚಮಿಗಳೂ ನಾಗರ ಪೂಜೆಗೆ ಹೇಳಿಸಿದ ತಿಥಿಗಳು , ಅದರಲ್ಲಿಯೂ ನಾಗರ ಪಂಚಮಿ ( ಶ್ರಾವಣ ಶುಕ್ಲ ಪಂಚಮಿ ) ಹಾಗೂ ಮಾರ್ಗಶಿರ ಶುಕ್ಲ ಪಂಚಮಿ ನಾಗಾರಾಧನೆಗೆ ಪುಣ್ಯಪ್ರದವೆಂಬ ಹೇಳಿಕೆ ಸ್ಕಾಂದ ಪುರಾಣದಲ್ಲಿದೆ .

ವಾಡಿಕೆಯಂತೆ ಶ್ರಾವಣ ಶುಕ್ಲ ಪಂಚಮಿಯೇ ನಾಗರ ಪಂಚಮಿಯೆಂದು ಖ್ಯಾತಿ ಪ್ರಖ್ಯಾತಿಗಳಿಸಿದೆ . ನಾಗದೇವರಿಗೆ ತನು ಹಾಕುವುದು ( ನಾಗ ದೇವರಿಗೆ ತಂಪೆರೆಯುವುದು ) ಈ ಹಬ್ಬದ ವಿಶೇಷ ಪೂಜಾ ಕಾರ್ಯಕ್ರಮ. ಪಂಚಾಮೃತಾಭಿಷೇಕ , ಶೀಯಾಳದ ಅಭಿಷೇಕ; ಹಾಲಿನ ಅಭಿಷೇಕ ನಾಗ ದೇವರಿಗೆ ವಿಶೇಷ ಪ್ರೀತಿಯನ್ನುಂಟು ಮಾಡುವುದು. ಅರಸಿನ ಹುಡಿ ನಾಗದೇವರಿಗೆ ಪ್ರೀತಿ ಕರ.

ಅರಶಿನ ಬಣ್ಣದ- ಸುಗಂಧ ಭರಿತ ಕೇದಗೆ , ಹಿಂಗಾರ ( ಪೂಗ ಪುಷ್ಪ ) ಸಂಪಿಗೆ ಇಂತಹ ಹೂಗಳು ಪೂಜಾರ್ಹ , ಅರಶಿನ ಎಲೆಯಲ್ಲಿ ಮಾಡಿದ ಭಕ್ಷವನ್ನು ತಯಾರಿಸಿ ಸ್ವೀಕರಿಸುವುದೂ ಈ ದಿನದ ವಿಶೇಷ . ಅಂತೂ ಮೂಲ ನಾಗಬನದಲ್ಲಿ ಅಥವಾ ಯಥಾ ಸಾಧ್ಯ ನಾಗ ಸನ್ನಿಧಿಯಲ್ಲಿ ಫಲ – ಪುಷ್ಪ – ಅಭಿಷೇಕ ದ್ರವ್ಯ – ಲಾವಂಚ ಧೂಪ ಇತ್ಯಾದಿ ಯಥಾ ಲಭ್ಯ ವಸ್ತುಗಳನ್ನು ಅರ್ಪಿಸಿ , ಪ್ರಾರ್ಥನಾ ಪೂರ್ವಕ ಪ್ರಸಾದ ಸ್ವೀಕರಿಸಿ , ಕೃತ ಕೃತ್ಯರಾಗುವುದೇ ಈ ದಿನದ ಧನ್ಯತೆಯ ಕಾರ್ಯಕ್ರಮ .ನಾಗಾಂತರ್ಗತ ಸಂಕರ್ಷಣ ರೂಪಿ ಪರಮಾತ್ಮನ ಪ್ರಸನ್ನತೆಯು ಸತ್ ಸಂತಾನವನ್ನು; ದೈವಿಕ ಸಂಪತ್ತನ್ನು ನೀಡುವುದರಲ್ಲಿ ಅನುಮಾನವಿಲ್ಲ.

ನಾವು ವಾಸವಾಗಿರುವ ಈ ಭೂಮಿಯನ್ನು ಹೊತ್ತ ದಿವ್ಯ ಶಕ್ತಿಯೇ ಆದಿ ಶೇಷ . ಹೀಗಾಗಿ ಈ ದಿನ ಮಣ್ಣನ್ನು ಅಗೆಯುವ , ಕಡಿಯುವ ಕೆಲಸ ವರ್ಜ್ಯ. ಸಾಸಿವೆ , ಪಡುವಲ ಕಾಯಿ ಈ ದಿನ ಬಳಸುವ ರೂಢಿಯಿಲ್ಲ . ಶ್ಯಾವಿಗೆ ಮಾಡುವಂತಿಲ್ಲ . ವಿಶೇಷ ಭಕ್ಷಗಳಾದ ಮೋದಕ , ಕಡುಬು , ತುಂಬಿಟ್ಟು ಮುಂತಾದವುಗಳನ್ನು ಹಬೆಯಲ್ಲಿಯೇ ಬೇಯಿಸುತ್ತಾರೆ. . ದೋಸೆ . ಹೊಯ್ಯುವ , ಒಗ್ಗರಣೆ ಹಾಕುವ ಹಾಗೂ ಕರಿಯುವ ಕ್ರಿಯೆಗಳಿಗೂ ಈ ದಿನ ವಿರಾಮ ನೀಡುತ್ತಾರೆ . ಇವೆಲ್ಲ ಜನಮನದ ನಂಬುಗೆಗಳು . ನಾವು ನಾಗ ದೇವರ ಕುರಿತು ಮೊದಲು ಅರಿತುಕೊಳ್ಳಬೇಕು . ಆಗ ಭಕ್ತಿ ಪ್ರೀತಿ ಹೆಚ್ಚಾಗುತ್ತದೆ . ಈ ತಿಳಿದು ಮಾಡುವ ಪೂಜೆಯಿಂದ ಆರೋಗ್ಯ , ಸತ್ಸಂತಾನ , ಸೌಭಾಗ್ಯ ಲಭಿಸುತ್ತದೆ . ನಾಗಬನ , ನಾಗ ಬೀದಿ , ಹುತ್ತ , ನಾಗ ಪರಿಸರ ಭಕ್ತಿ ಪ್ರಧಾನವಾದ ಈ ನಂಬುಗೆಯಿಂದಲೂ ನಮ್ಮ ಪರಿಸರ ಭಾಗಶಃ ಶುದ್ಧವಾಗಿ ಉಳಿದು ಬರಲು ಸಹಾಯಕವಾಗಿದೆ . ಲೌಕಿಕವಾಗಿಯೂ ಇದು ನಾವು ಪಡೆದು ಬಂದ ಭಾಗ್ಯವೆನ್ನಬಹುದು . ವರ್ಷಕ್ಕೊಮ್ಮೆಯಾದರೂ ನಾಗಾರಾಧನೆಯ ನೆಪದಿಂದ ಕುಟುಂಬೀಯರು , ಊರವರು ಸಾಮೂಹಿಕವಾಗಿ ನಾಗಬನಗಳಲ್ಲಿ ನಾಗ ಕ್ಷೇತ್ರಗಳಲ್ಲಿ ಒಟ್ಟುಗೂಡಿ , ಸತ್ ಚಿಂತನೆಗಳಲ್ಲಿ ಪಾಲ್ಗೊಳ್ಳುವುದು ನಿಜಕ್ಕೂ ಶ್ರೇಯಸ್ಕರ . ಮುಖ್ಯವಾಗಿ ಮುಂದಿನ ಜನಾಂಗ ಈ ಪೂಜಾ ಸಂಸ್ಕೃತಿಯಲ್ಲಿ ಪಾಲ್ಗೊಳ್ಳಬೇಕು . ಪರಿಸರ ಪ್ರಜ್ಞೆ ಅವರಲ್ಲಿ ಬೆಳೆಯಬೇಕು . ಜ್ಞಾನ , ಭಕ್ತಿ , ವೈರಾಗ್ಯ ಅವರಲ್ಲಿಯೂ ಅಂಕುರಿಸಬೇಕು . ಇದರಿಂದಲೇ ನಮ್ಮ ಸಂಸ್ಕೃತಿಯ ಸೌರಭ ಉಳಿಯಲು ಸಾಧ್ಯ . ಅನಂತ ಫಲದಾಯಕನೆಂಬ ಕೀರ್ತಿಯ ಅನಂತನೆಂಬ ನಾಮದ ಪರಮಾತ್ಮನು ನಮ್ಮ ಮನದಂತರಂಗದಾಳದಲ್ಲಿ ವಾಸಿಸಲಿಕ್ಕೂ ಇದೊಂದು ಸದವಕಾಶ .

ನಾಗನಿಗೇಕೀ ಮಹತ್ವ?
ನಾಗನು ಕೃಷಿ ಪ್ರಧಾನ ದೇವತೆ. ಸಕಾಲದಲ್ಲಿ ಮಳೆ ಬೆಳೆಗಳನ್ನು ಅನುಗ್ರಹಿಸುವಾತ. ಸಂತಾನವಿಲ್ಲದೆ ಕೊರಗುವವರಿಗೆ ಸಂತಾನ ಭಾಗ್ಯ ಕರುಣಿಸಬಲ್ಲ ಮಹಾಮಹಿಮ, ರೋಗ ರುಜಿನಗಳನ್ನು ತಡೆಯಬಲ್ಲ ವಿಶ್ವ ವೈದ್ಯನೀತ. ನಿಧಿ ಸಂರಕ್ಷಕನು ಹೌದು….
ಸರ್ಪಗಳಿಗೆ ಸರಿಸೃಪಗಳಿಗೆ ಹಾನಿಯುಂಟು ಮಾಡಿದವನಿಗೆ ಸರ್ಪಶಾಪದಿಂದ ಕಷ್ಟಕಾರ್ಪಣ್ಯಗಳು ಸತತವಾಗಿ ಬಾಧಿಸುತ್ತಲೇ ಇರುತ್ತವೆ ಎಂಬುದು ಆಸ್ತಿಕರ ಅಚಲ ನಂಬಿಕೆ.

ಸರ್ಪಗಳ ಜನ್ಮ

, ಸರ್ಪ ಸಂಕುಲ
ಕಶ್ಯಪ ಮಹರ್ಷಿಯ ಹದಿಮೂರು ಮಂದಿ ಪತ್ನಿಯರಲ್ಲಿ ಕದ್ರು ಎಂಬಾಕೆ ಸರ್ಪಗಳ ಮಾತೆ. ಅವಳ ಮಕ್ಕಳಲ್ಲಿ ತಕ್ಷಕ, ವಾಸುಕಿ ಪ್ರಧಾನರು. ಅನಂತ, ಮಹಾಶೇಷ, ಕಪಿಲ, ನಾಗ, ಕುಳಿಕ, ಶಂಖಪಾಲ, ಭೂಧರ, ತಕ್ಷಕ, ವಾಸುಕಿ ಇವರು ನವನಾಗರೆಂದು ಪ್ರಸಿದ್ಧರು. ಇವರಲ್ಲೇ ೫೨ ಮಂದಿ ಸರ್ಪಶ್ರೇಷ್ಠರೂ…. ಹದಿನಾರು ಸಾವಿರ ಪ್ರಕಾರಗಳ ಸರ್ಪಗಳೂ ಇವೆಯೆಂದು ಬ್ರಹ್ಮ ಪುರಾಣದಲ್ಲಿ ವರ್ಣಿತವಾಗಿದೆ. ವಿಷಮಯವಾದ ಹಲ್ಲುಗಳು, ಅಗ್ನಿ ಜ್ವಾಲೆಗಳನ್ನು ಹೊರಸೂಸುವಂತೆ ತೀಕ್ಷ್ಣವಾಗಿ ಹೊಳೆಯುವ ಕೆಂಗಣ್ಣುಗಳು, ಭಯಂಕರವಾದ ಕಡುಕೋಪವಿದ್ದರೂ ನಂಬಿ ಪೂಜಿಸಿದವರಿಗೆ ತಾರಕ ಶಕ್ತಿ- ನಂಬದೆ ಹಾನಿಯುಂಟು ಮಾಡಿದರೆ ಮಾರಕ ಶಕ್ತಿಯೂ ಹೌದು. ನಾಗದೇವತೆಗೆ ಕಾಯೇನ, ವಾಚಾ, ಮನಸಾ ಹಾನಿಯುಂಟು ಮಾಡಿದರೆ, ಅಪಚಾರವೆಸಗಿದರೆ ಸರ್ಪಶಾಪದಿಂದ ವಿಧ ವಿಧದ ಅನಿಷ್ಟಗಳು ಎದುರಾಗಿ ಕಾಡುತ್ತವೆ ಎಂಬುದು ಅನುಭವಿಕರ ಮಾತು. ಆದುದರಿಂದ ಸರ್ಪಶಾಪದಿಂದ ಮುಕ್ತಿ ಪಡೆಯುವ ಮಾರ್ಗಗಳಲ್ಲಿ ಆಶ್ಲೇಷಾ ಬಲಿ ಆರಾಧನೆಯೂ ಒಂದು. ಪಂಚಮಿ, ಆಶ್ಲೇಷ ನಕ್ಷತ್ರ, ಷಷ್ಠಿಯದಿನ ನಾಗದೇವರ ಸಂಬಂಧಿ ನಕ್ಷತ್ರಗಳು
ಇಂತಹ ಪ್ರಶಸ್ತ ದಿನಗಳಲ್ಲಿ ನಾಗಾರಾಧನೆಯು ಉತ್ತಮ

ನಾಗ ದೇವತೆಗೆ ಹಾನಿಯುಂಟಾಗುವ, ಅಪಚಾರ ತರುವ ಪ್ರಸಂಗಗಳು ಹಲವು. ಈ ಜನ್ಮದ, ಪೂರ್ವಜನ್ಮದ, ಜನ್ಮ ಜನ್ಮಾಂತರಗಳ ಜೀವಿತಾವಧಿಯ ವಿವಿಧ ಅವಸ್ಥೆಗಳಲ್ಲಿ ಮನಸ್ಸು, ಮಾತು, ಶರೀರ, ಕರ್ಮೇಂದ್ರಿಯ ವ್ಯಾಪಾರಗಳಿಂದ, ಶರೀರದ ಅಂಗಾಂಗಗಳಿಂದ, ಅರಿಷಡ್ವರ್ಗಗಳ ದೆಸೆಯಿಂದ, ತಿಳಿದೋ, ತಿಳಿಯದೆಯೋ ಓರ್ವ ವ್ಯಕ್ತಿ, ಆತನ ಕುಟುಂಬಸ್ಥರು ಯಾ ಪೂರ್ವಜರಿಂದ ನಡೆದ ಸರ್ಪವಧೆ, ದಂಡದಿಂದ ಹೊಡೆಯುವಿಕೆ, ಹುತ್ತಗಳ ಅಗೆತ, ವೃಕ್ಷ ,ಸರಿಸೃಪನಾಶ ಅಥವಾ ಇಂತಹ ದುಷ್ಕೃತ್ಯಗಳಿಗೆ ಪ್ರೇರಣೆ ನೀಡುವುದರಿಂದ ಸರ್ಪಶಾಪ ಉಂಟಾಗುತ್ತದೆ. ತನ್ಮೂಲಕ ಕುಟುಂಬದಲ್ಲಿ ಬಂಜೆತನ, ಸಂತತಿ ನಾಶ, ಕುಷ್ಠಾದಿ ಮಹಾರೋಗಗಳೂ ಇನ್ನಿತರ ಭಯಂಕರ ಆಪತ್ತುಗಳೂ ಉಂಟಾಗುತ್ತವೆ ಎಂದು ಆಶ್ಲೇಷಾ ಬಲಿ ವಿಧಾನದ ಸಂಕಲ್ಪದಲ್ಲಿ ಹೇಳಲಾಗಿದೆ. ಸರ್ಪಗಳ ಮೊಟ್ಟೆಗಳ ನಾಶವೂ ಇಂತಹ ಅಕೃತ್ಯಗಳ ಸಾಲಿಗೆ ಸೇರುತ್ತದೆ. ಕೃಷಿ ಕ್ಷೇತ್ರದಲ್ಲಿ ಕೃಷಿಕನಿಗೆ ತಿಳಿಯದೆಯೇ ಇಂತಹ ಹಾನಿಗಳು ಸಂಭವಿಸುತ್ತಿರುತ್ತವೆ. ಆದುದರಿಂದ ಕೃಷಿಕರು ವಿಶೇಷವಾಗಿ ನಾಗದೇವತೆಯ ಆರಾಧನೆ ಮಾಡುತ್ತಾರೆ. ಸಮಸ್ತ ಸರ್ಪದೋಷ, ಸರ್ಪ ಶಾಪಗಳ ಪ್ರಾಯಶ್ಚಿತ್ತ ಪರಿಹಾರಾರ್ಥವಾಗಿ, ಸಕಲೈಶ್ವರ್ಯ ಸಿದ್ಧಿಗಾಗಿ ನಾಗಾರಾಧನೆಯನ್ನು ಸರ್ಪ ಸಂಸ್ಕಾರವನ್ನು ಮಾಡಲಾಗುತ್ತದೆ.

ಯಾರು ಯಾವ ಸಂದರ್ಭದಲ್ಲಿ ಯಾಕೆ ಸರ್ಪ ಸಂಸ್ಕಾರ ಮಾಡಬೇಕು

ಕೆಲ ಜ್ಯೋತಿಷ್ಯರು ಜಾತಕ ನೋಡಿ ಸಾಮಾನ್ಯವಾಗಿ ದುಸ್ಥಾನ ಗಳಲ್ಲಿ (೬,೮,೧೨)ರಲ್ಲಿ ರಾಹು ಇದ್ದಾಗ ನಿಮಗೆ ಸರ್ಪ ದೋಷವಿದೆ.ಸರ್ಪ ಸಂಸ್ಕಾರ ಮಾಡಿಸಿ ಬನ್ನಿ ಎಂದು ಹೇಳುವುದು ವಾಡಿಕೆ ಯಾಗಿದೆ. ಇಂತಹ ಸಲಹೆಗಳು ಬರುತ್ತದೆ. ಆದರೆ ಒಂದು ವೇಳೆ ಸರ್ಪ ಸಾಯದೇ ಇದ್ದಲ್ಲಿ ಸರ್ಪ ಸಂಸ್ಕಾರ ಮಾಡುವುದು ಉಚಿತವೇ ಎಂಬುದು ಪ್ರಶ್ನೆಯಾಗುತ್ತದೆ. ಸಾಯದ ಜಂತುವಿಗೆ ಮರಣೋತ್ತರ ಕ್ರಿಯೆ ಮಾಡಿ ಅದನ್ನು ಎಲ್ಲಿಗೆ ಕಳುಹಿಸುತ್ತಾರೆ.? ಒಬ್ಬ ವ್ಯಕ್ತಿ ಸಾಯದೆ ಇದ್ದಾಗ ಉತ್ತರ ಕ್ರಿಯೆ ಮಾಡು ವುದು ಸರಿಯೇ?
ಯಾವ ಸಂದರ್ಭದಲ್ಲಿ ಸರ್ಪ ಸಂಸ್ಕಾರ ಮಾಡ ಬೇಕು?
1.ಸರ್ಪನ ಮರಣ ನೋಡಿರಬೇಕು ಮತ್ತು ಅದಕ್ಕೆ ಸಂಸ್ಕಾರ ಆಗದೆ ಇರಬೇಕು.
2. ಸ್ಥಳ ಭಾದಿತ ಸರ್ಪ ದೋಷಗಳು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದರೆ ಆಗ ಸರ್ಪ ಸಂಸ್ಕಾರ ಬೇಕು.
3. ಹೊಸದಾಗಿ ನಾಗಬನ ಮಾಡುವುದಿದ್ದರೆ ಆಗ ಸರ್ಪ ಸಂಸ್ಕಾರದ ಮೂಲಕ ನಾಗ ಶಿಲಾ ಪ್ರತಿಷ್ಟೆಯಾಗಬೇಕು. ಭೂಮಿ ಎಂದ ಮೇಲೆ ಜೀವಿಗಳು ಪ್ರತೀ ಇಂಚು ಇಂಚಿಗೂ ಸತ್ತಿರುತ್ತದೆ.ಭೂಮಿಯು ಸ್ಮಶಾನವೆ ಆಗಿರುತ್ತದೆ. ಅದಕ್ಕಾಗಿ ಮರ್ತ್ಯಲೋಕ ಎಂದು ಕರೆದರು.ಇಂತಹ ಉದ್ಧಿಶ್ಯದಲ್ಲಿ ಸರ್ಪಸಂಸ್ಕಾರ ಮಾಡಿ ಭೂಮಿಯಲ್ಲಿ ನಿಧಿಸ್ಥಾಪಿಸಿ ನಾಗ ಪ್ರತಿಷ್ಟೆ ಮಾಡಬಹುದು.
4. ವಾಹನಗಳ ಗಾಲಿಗಳಿಗೆ ನಾಗನು ಬಿದ್ದು ಸತ್ತಿದ್ದು ಕಂಡರೆ, ಯಾವುದೋ ನವಿಲೋ, ಗಿಡುಗನೋ, ಮುಂಗುಸಿಯೋ ಅಥವಾ ಇನ್ಯಾವ ಪ್ರಾಣಿ ಪಕ್ಷಿಗಳಿಂದ ನಾಗರ ಹಾವು ಸತ್ತಿದ್ದು ಕಂಡರೆ ಸಂಸ್ಕಾರ ಮಾಡಲೇ ಬೇಕು.
5.ನಾಗವಂಶದ ಸರಿಸೃಪಾದಿ ಅಂದರೆ ಇತರ ವಿಷಯುಕ್ತ ಹಾವುಗಳು ನಮ್ಮ ಕೈಯಲ್ಲಿ ಕೊಲ್ಲಲ್ಪಟ್ಟಿದ್ದರೆ ಅದು ನಾಗದೋಷವಾಗುತ್ತದೆ.ಆಗ ಇದರ ಉದ್ದಿಶ್ಯವಾಗಿ ಸಂಸ್ಕಾರ ಮಾಡಬಹುದು.
6. ನಾಗ ವನಗಳು ನಮ್ಮಿಂದಾಗಿ ಸುಟ್ಟು ಹೋಗಿದ್ದರೆ, ಧ್ವಂಸವಾಗಿದ್ದರೆ ಇಲ್ಲಿ ಅಗೋಚರವಾಗಿ ಸರ್ಪ ಸಂತತಿ ನಾಶವಾ ಗಿರಬಹುದು.ಇಂತಹ ವಿಚಾರವಿದ್ದಾಗ ಸಂಸ್ಕಾರ ಮಾಡಬೇಕು.

ನಾಗ ದೇವರನ್ನು ಸ್ತೋತ್ರಗಳ ಮೂಲಕ ಆರಾಧನೆ ಮಾಡಿದರೆ ನಾಗಗಳಿಂದ ಅನುಗ್ರಹವನ್ನು ಪಡೆಯಬಹುದು

‘ ಓಂ ನಮೋ ಭಗವತೇ ಕಾಮರೂಪಿಣಿ ಮಹಾಬಲಾಯ ನಾಗಾಧಿಪತಯೇ ಅನಂತಾಯ ಸ್ವಾಹಾ’

ನಮೋ ಅಸ್ತು ಸರ್ಪೇಭ್ಯೋ ಯೇ ಕೇ ಚ ಪೃಥಿವೀಮನು ।
ಯೇ ಅಂತರಿಕ್ಷೇ ಯೇ ದಿವಿ ತೇಭ್ಯಃ ಸರ್ಪೇಭ್ಯೋ ನಮಃ ॥

ಭೂಮಂಡಲದಲ್ಲಿರುವ ಸರ್ಪಗಳಿಗೆ , ವಾಯುಮಂಡಲದಲ್ಲಿರುವ ಸರ್ಪಗಳಿಗೆ , ನಭೋಮಂಡಲದಲ್ಲಿರುವ ಸರ್ಪಗಳಿಗೆ ನಮಸ್ಕಾರ..

ಯೇSದೋರೋಚನೇ ದಿವೋ ಯೇ ವಾ ಸೂರ್ಯಸ್ಯ ರಶ್ಮಿಷು ।
ಯೇಷಾಮಪ್ಸು ಸದಸ್ಕೃತಂ ತೇಭ್ಯಃ ಸರ್ಪೇಭ್ಯೋ ನಮಃ ॥

ಆಕಾಶದ ಬೆಳಕಿನಲ್ಲಿ , ಸೂರ್ಯನ ಪ್ರಕಾಶದಲ್ಲಿ ಹಾಗೂ ನೀರಿನಲ್ಲಿರುವ ಸಮಸ್ತ ಸರ್ಪಗಣಗಳಿಗೆ ನಮಸ್ಕಾರ.

ಯಾ ಇಷವೋ ಯಾತುಧಾನಾನಾಂ ಯೇ ವಾ ವನಸ್ಪತೀರನು ।
ಯೇ ವಾ ವಟೇಷು ಶೇರತೇ ತೇಭ್ಯಃ ಸರ್ಪೇಭ್ಯಃ ನಮಃ ॥

ಆಯುಧವನ್ನಾಗಿ ಉಪಯೋಗಿಸುವ ಸರ್ಪಗಳಿಗೆ (ಹಿಂದೆ ಯುದ್ಧಗಳಲ್ಲಿ ಸರ್ಪಾಸ್ತ್ರವನ್ನು ಉಪಯೋಗಿಸಲಾಗುತ್ತಿತ್ತು)
ಹೂ ಬಿಡದೇ ಕೇವಲ ಹಣ್ಣನ್ನಷ್ಟೇ ನೀಡುವ ವೃಕ್ಷಗಳಲ್ಲಿ ವಾಸಿಸುತ್ತಿರುವ ಸರ್ಪಗಳಿಗೆ ,
ಬಿಲಗಳಲ್ಲಿ ಮಲಗಿರುವ ಸರ್ಪಗಳಿಗೆ ನಮಸ್ಕರಿಸೋಣ..

ಸರ್ಪೋ ಅನಂತೋ ತಥಾ ಶೇಷೋ ಕಪಿಲೋ ನಾಗ ಏವಚ|
ಕಳಿಂಗ ಶಂಖ ಪಾಲಾಶ್ಚ ಭೂಧರಾಶ್ಚ ಪ್ರಕೀರ್ತಿತಾಃ||

ಅಷ್ಟಕುಲ ನಾಗ ಸ್ತೋತ್ರ
(ಸಂತಾನ ಪ್ರಾಪ್ತಿಗಾಗಿ)

ಓಂ ಬ್ರಹ್ಮಲೋಕೇ ಚ ಯೇ ಸರ್ಪಾಃ ಶೇಷನಾಗ ಪುರೋಗಮಾಃ|
ನಮೋಸ್ತು ತೇಭ್ಯಃ ಸುಪ್ರೀತಾ ಪ್ರಸನ್ನಾ ಸಂತು ಮೇ ಸದಾ||
ಓಂ ವಿಷ್ಣುಲೋಕೇ ಚ ಯೇ ಸರ್ಪಾಃ ವಾಸುಕೀ ಪ್ರಮುಖಾಸ್ತಥಾ|
ನಮೋಸ್ತು ತೇಭ್ಯಃ ಸುಪ್ರೀತಾ ಪ್ರಸನ್ನಾ ಸಂತು ಮೇ ಸದಾ||
ಓಂ ರುದ್ರಲೋಕೇ ಚ ಯೇ ಸರ್ಪಾಃ ತಕ್ಷಕ ಪ್ರಮುಖಾಸ್ತಥಾ|
ನಮೋಸ್ತು ತೇಭ್ಯಃ ಸುಪ್ರೀತಾ ಪ್ರಸನ್ನಾ ಸಂತು ಮೇ ಸದಾ||
ಕಾಪೀಲೇಯಾಶ್ಚ ಯೇ ಸರ್ಪಾಃ ಮಾತೃ ಭಕ್ತಿ ಪರಾಯಣಾಃ|
ನಮೋಸ್ತು ತೇಭ್ಯಃ ಸುಪ್ರೀತಾ ಪ್ರಸನ್ನಾ ಸಂತು ಮೇ ಸದಾ||
ಖಾಂಡವಸ್ಯ ಚ ದಾಹೇನ ಸ್ವರ್ಗಂಯೇಚ ಸಮಾಗತಾಃ|
ನಮೋಸ್ತು ತೇಭ್ಯಃ ಸುಪ್ರೀತಾ ಪ್ರಸನ್ನಾ ಸಂತು ಮೇ ಸದಾ||
ಸರ್ಪ ಸತ್ರೇಚ ಯೇ ಸರ್ಪಾಃ ಅಸ್ತಿಕೇನಚ ರಕ್ಷಿತಾಃ|
ನಮೋಸ್ತು ತೇಭ್ಯಃ ಸುಪ್ರೀತಾ ಪ್ರಸನ್ನಾ ಸಂತು ಮೇ ಸದಾ||
ಯಮಲೋಕೇಚ ಯೇ ಸರ್ಪಾಃ ವೆತರಣ್ಯಾಂ ಸಮಾಗತಃ|
ನಮೋಸ್ತು ತೇಭ್ಯಃ ಸುಪ್ರೀತಾ ಪ್ರಸನ್ನಾ ಸಂತು ಮೇ ಸದಾ||
ಸಮುದ್ರೇಚೈವ ಯೇ ಸರ್ಪಾಃ ಯೇ ಸರ್ಪಾಃ ಜಲವಾಸಿನಃ|
ನಮೋಸ್ತು ತೇಭ್ಯಃ ಸುಪ್ರೀತಾ ಪ್ರಸನ್ನಾ ಸಂತು ಮೇ ಸದಾ||
ಮಾನವೇಚೈವ ಯೇ ಸರ್ಪಾಃ ಕರ್ಕೋಟ ಪ್ರಮುಖಾಶ್ಚಯೇ|
ನಮೋಸ್ತು ತೇಭ್ಯಃ ಸುಪ್ರೀತಾ ಪ್ರಸನ್ನಾ ಸಂತು ಮೇ ಸದಾ||
ಯೇ ಸರ್ಪಾಃ ಪರ್ವತಾಗ್ರೇಚ ಯೇ ಚ ಸಂಧಿಶು ಸಂಸ್ಥಿತಾಃ|
ನಮೋಸ್ತು ತೇಭ್ಯಃ ಸುಪ್ರೀತಾ ಪ್ರಸನ್ನಾ ಸಂತು ಮೇ ಸದಾ||
ಗ್ರಾಮೇ ವಾಯದಿವಾರಣ್ಯೇ ಯೇ ಸರ್ಪಾ ಪ್ರಚರಂತಿಃ|
ನಮೋಸ್ತು ತೇಭ್ಯಃ ಸುಪ್ರೀತಾ ಪ್ರಸನ್ನಾ ಸಂತು ಮೇ ಸದಾ||
ಯಸ್ಯವಾಸಃ ಕುರುಕ್ಷೇತ್ರೇ ಖಾಣುವೇಚಾ ಭವತ್ಪುರಾ|
ಕರವಾಣಿ ಸದಾ ಚಾಹಂ ಸರ್ಪೇಭ್ಯೋ ವೈ ನಮೋ ನಮಃ||
ತಕ್ಷಕಶ್ಚಾಸ್ವಕರ್ಣಶ್ಚ ನಿತ್ಯಂ ಸಹಚರಾ ವುಭೌ|
ಕರವಾಣಿ ಸದಾ ಚಾಹಂ ಸರ್ಪೇಭ್ಯೋ ವೈ ನಮೋ ನಮಃ||

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸರ್ಪರಾಜ ಅಷ್ಟೋತ್ತರ..
ಓಂ ಅನಂತಾಯ ನಮಃ
ಓಂ ವಾಸುದೇವಾಯ ನಮಃ
ಓಂ ತಕ್ಷಕಾಯ ನಮಃ
ಓಂ ವಿಶ್ವತೋಮುಖಾಯ ನಮಃ
ಓಂ ಕರ್ಕೋಟಕಾಯ ನಮಃ
ಓಂ ಮಹಾಪದ್ಮಾಯ ನಮಃ
ಓಂ ಪದ್ಮಾಯ ನಮಃ
ಓಂ ಶಂಖಾಯ ನಮಃ
ಓಂ ಶಿವಪ್ರಿಯಾಯ ನಮಃ
ಓಂ ಧೃತರಾಷ್ಟ್ರಾಯ ನಮಃ ||೧೦||
ಓಂ ಶಂಖಪಾಲಾಯ ನಮಃ
ಓಂ ಕುಳಿಕಾಯ ನಮಃ
ಓಂ ಸರ್ಪನಾಥಾಯ ನಮಃ
ಓಂ ಇಷ್ಠದಾಯಿನೇ ನಮಃ
ಓಂ ನಾಗರಾಜಾಯ ನಮಃ
ಓಂ ಪುರಾಣಾಯ ನಮಃ
ಓಂ ಪುರುಷಾಯ ನಮಃ
ಓಂ ಅನಘಾಯ ನಮಃ
ಓಂ ವಿಶ್ವರೂಪಾಯ ನಮಃ
ಓಂ ಮಹೀಧಾರಿಣೇ ನಮಃ
||೨೦||
ಓಂ ಕಾಮದಾಯಿನೇ ನಮಃ
ಓಂ ಸುರಾರ್ಚಿತಾಯ ನಮಃ
ಓಂ ಕುಂಡಪ್ರಭಾಯ ನಮಃ
ಓಂ ಬಹುಶಿರಸೇ ನಮಃ
ಓಂ ದಕ್ಷಾಯ ನಮಃ
ಓಂ ದಾಮೋದರಾಯ ನಮಃ
ಓಂ ಅಕ್ಷರಾಯ ನಮಃ
ಓಂ ಗಣಾಧಿಪಾಯ ನಮಃ
ಓಂ ಮಹಾಸೇನಾಯ ನಮಃ
ಓಂ ಪುಣ್ಯಮೂರ್ತಯೇ ನಮಃ
ಓಂ ಗಣಪ್ರಿಯಾಯ ನಮಃ
||೩೦||
ಓಂ ವರಪ್ರದಾಯ ನಮಃ
ಓಂ ವಾಯುಭಕ್ಷಕಾಯ ನಮಃ
ಓಂ ವಿಶ್ವಧಾರಿಣೇ ನಮಃ
ಓಂ ವಿಹಂಗಮಾಯ ನಮಃ
ಓಂ ಪುತ್ರಪ್ರದಾಯ ನಮಃ
ಓಂ ಪುಣ್ಯರೂಪಾಯ ನಮಃ
ಓಂ ಬಿಲೇಶಾಯ ನಮಃ
ಓಂ ಪರಮೇಷ್ಠಿನೇ ನಮಃ
ಓಂ ಪಶುಪತಯೇ ನಮಃ
ಓಂ ಪವನಾಶಿನೇ ನಮಃ
||40||
ಓಂ ಬಲಪ್ರದಾಯ ನಮಃ
ಓಂ ದಾಮೋದರಾಯ ನಮಃ
ಓಂ ದೈತ್ಯಹಂತ್ರೇ ನಮಃ
ಓಂ ದಯಾರೂಪಾಯ ನಮಃ
ಓಂ ಧನಪ್ರದಾಯ ನಮಃ
ಓಂ ಮತಿದಾಯಿನೇ ನಮಃ
ಓಂ ಮಹಾಮಾಯನೇ ನಮಃ
ಓಂ ಮಧುವೈರಿಣೇ ನಮಃ
ಓಂ ಮಹೋರಗಾಯ ನಮಃ
ಓಂ ಭುಜಗೇಶಾಯ ನಮಃ
ಓಂ ಭೂಮರೂಪಾಯ ನಮಃ ||೫೦||
ಓಂ ಭೀಮಕಾಮಾಯ ನಮಃ
ಓಂ ಭಯಾಪಹತೇ ನಮಃ
ಓಂ ಸಕಲರೂಪಾಯ ನಮಃ
ಓಂ ಶುದ್ಧದೇಹಾಯ ನಮಃ
ಓಂ ಶೋಕಹಾರಿಣೇ ನಮಃ
ಓಂ ಶುಭಪ್ರದಾಯ ನಮಃ
ಓಂ ಸಂತಾನದಾಯನೇ ನಮಃ
ಓಂ ಸರ್ಪೇಶಾಯ ನಮಃ
ಓಂ ಸವದಾಯನೇ ನಮಃ
ಓಂ ಸರೀಸೃಪಾಯ ನಮಃ
||೬೦||
ಓಂ ಲಕ್ಷ್ಮೀಕರಾಯ ನಮಃ
ಓಂ ಲಾಭದಾಯಿನೇ ನಮಃ
ಓಂ ಲಲಿತಾಯ ನಮಃ
ಓಂ ಲಕ್ಷ್ಮಣಾಕೃತಯೇ ನಮಃ
ಓಂ ದಯಾರಾಶಯೇ ನಮಃ
ಓಂ ದಾಶರಥಾಯ ನಮಃ
ಓಂ ದಾಶರಥಾಯ ನಮಃ
ಓಂ ದೈತ್ಯಹಂತ್ರೇ ನಮಃ
ಓಂ ದಮಾಶ್ರಮಾಯ ನಮಃ
ಓಂ ರಮ್ಯರೂಪಾಯ ನಮಃ
ಓಂ ರಾಮಭಕ್ತಾಯ ನಮಃ
ಓಂ ರಾಮಭಕ್ತಾಯ ನಮಃ
||೭೦||
ಓಂ ರಣಧೀರಾಯ ನಮಃ
ಓಂ ರತಿಪ್ರದಾಯ ನಮಃ
ಓಂ ಸೌಮಿತ್ರಿಯೇ ನಮಃ
ಓಂ ಸೋಮಸಂಕಾಶಾಯ ನಮಃ
ಓಂ ಸರ್ಪರಾಜಾಯ ನಮಃ
ಓಂ ಸತಾಂಪ್ರಿಯಾಯ ನಮಃ
ಓಂ ಕರ್ಬುರಾಯ ನಮಃ
ಓಂ ಕಾಮಫಲಪ್ರದಾಯ ನಮಃ
ಓಂ ಕಿರೀಟಿನೇ ನಮಃ
ಓಂ ಕಿನ್ನರಾರ್ಚಿತಾಯ ನಮಃ
||೮೦||
ಓಂ ಪಾತಾಳವಾಸಿನೇ ನಮಃ
ಓಂ ಪರಾಯ ನಮಃ
ಓಂ ಫಣಿಮಂಡಲಮಂಡಿತಾಯ ನಮಃ
ಓಂ ಆಶೀವಿಷಾಯ ನಮಃ
ಓಂ ವಿಷಧರಾಯ ನಮಃ
ಓಂ ಭಕ್ತನಿಧಯೇ ನಮಃ
ಓಂ ಭೂಮಿಧಾರಿಣೇ ನಮಃ
ಓಂ ಭವಪ್ರಿಯಾಯ ನಮಃ
ಓಂ ನಾರಾಯಣಾಯ ನಮಃ
ಓಂ ನಾಗರಾಜಾಯ ನಮಃ
ಓಂ ನಾನಾರೂಪಾಯ ನಮಃ
||೯೦||
ಓಂ ಜನಪ್ರಿಯಾಯ ನಮಃ
ಓಂ ಕಾಕೋದರಾಯ ನಮಃ
ಓಂ ಕಾವ್ಯರೂಪಾಯ ನಮಃ
ಓಂ ಕಲ್ಯಾಣಾಯ ನಮಃ
ಓಂ ಕಾಮಿತಾರ್ಥದಾಯಿನೇ ನಮಃ
ಓಂ ಹತಾಸುರಾಯ ನಮಃ
ಓಂ ಹಲ್ಯಹೀನಾಯ ನಮಃ
ಓಂ ಹರ್ಷದಾಯನೇ ನಮಃ
ಓಂ ಹರಭೂಷಣಾಯ ನಮಃ
ಓಂಜಗದಾಧಾರಯೇ ನಮಃ
ಓಂ ಜರಾಹೀನಾಯ ನಮಃ
ಓಂ ಜಾತಿಶೂನ್ಯಾಯ ನಮಃ
ಓಂ ಜಗನ್ಮಯಾಯ ನಮಃ
ಓಂ ವಂಧ್ಯಾತ್ವದೋಷ ಶಮನಾಯ ನಮಃ
ಓಂ ವರಪುತ್ರಫಲಪ್ರದಾಯ ನಮಃ
ಓಂ ಶ್ರೀ ಸುಬ್ರಹ್ಮಣ್ಯಾಯ ನಮಃ ||108||
ಇತಿ ಶ್ರೀ ನಾಗರಾಜ ಅಷ್ಟೋತ್ತರ ಸಂಪೂರ್ಣಂ ..

Tags: Doing Nagaradhana this way will change your life!
ShareTweetSendShare
Join us on:

Related Posts

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

by admin
January 22, 2026
0

ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಬೇಕೆಂದರೆ ಬಿಳಿ ಗುರಗಂಜಿಯಿಂದ ಈ ಉಪಾಯ ಮಾಡಿ ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ...

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ.

by admin
January 22, 2026
0

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ.. ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಬೇಕೆಂದರೆ ಬಿಳಿ ಗುರಗಂಜಿಯಿಂದ ಈ ಉಪಾಯ ಮಾಡಿ ಕೆಲವೊಂದು...

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 22, 2026
0

ದಿನ ಭವಿಷ್ಯ: 22-01-2026 ಮೇಷ ರಾಶಿ ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆಯಿದೆ. ಆರ್ಥಿಕವಾಗಿ ದಿನವು ಉತ್ತಮವಾಗಿದೆ. ಕುಟುಂಬದವರೊಂದಿಗೆ...

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

by admin
January 21, 2026
0

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು...

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 21, 2026
0

ದಿನ ಭವಿಷ್ಯ: 21-01-2026 ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚುವ ದಿನವಾಗಿದೆ. ನಿಮ್ಮ ದೀರ್ಘಕಾಲದ ಕನಸುಗಳು ನನಸಾಗುವ ಲಕ್ಷಣಗಳು ಗೋಚರಿಸುತ್ತಿವೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram