ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

Shwetha by Shwetha
August 16, 2026
in ಬೆಂಗಳೂರು, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: “ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ” ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಚುನಾವಣಾ ಆಯೋಗದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಕಾಶ್ ರಾಜ್, ಚುನಾವಣಾ ಆಯೋಗವು ಸದ್ಯ ಕೈಗೊಂಡಿರುವ ವಿಶೇಶ ಮುಖ್ಯಾಂಶಗಳ ಪರಿಷ್ಕರಣೆ (SIR) ಪ್ರಕ್ರಿಯೆಯ ವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಚುನಾವಣಾ ಆಯೋಗ ಇಡೀ ದೇಶದ ಜನರಿಂದ ಪರೀಕ್ಷೆ ಬರೆಸುತ್ತಿದೆಯೇ? ಕರ್ನಾಟಕದಲ್ಲಿರುವ 5.54 ಕೋಟಿ ಮತದಾರರ ಮಾಹಿತಿಯನ್ನು ಕೇವಲ ಒಂದು ತಿಂಗಳ ಅಲ್ಪಾವಧಿಯಲ್ಲಿ ಪಡೆದುಕೊಳ್ಳಲು ಹೇಗೆ ಸಾಧ್ಯ? ಬಿಎಲ್‌ಒ (ಬೂತ್ ಮಟ್ಟದ ಅಧಿಕಾರಿಗಳು)ಗಳ ಮೇಲೆ ಏಕಾಏಕಿ ಯಾಕೆ ಇಷ್ಟೊಂದು ತೀವ್ರ ಒತ್ತಡ ಹೇರುತ್ತಿದ್ದೀರಿ? ಪ್ರಜೆಗಳು ತಮ್ಮ ಮತ ಹಕ್ಕನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳ ಕಚೇರಿಗಳ ಸುತ್ತ ದಿನವಿಡೀ ಅಲೆಯುವಂತೆ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿದರು.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ದೇಶದಲ್ಲಿ ಬದುಕಿಗಾಗಿ ವಲಸೆ ಹೋಗುವ ಬಡ ಸಮುದಾಯಗಳ ಸ್ಥಿತಿಯನ್ನು ಎತ್ತಿಹಿಡಿದ ನಟ, ನಾಗರಹೊಳೆ ಮತ್ತು ಬಂಡೀಪುರದ ಗಡಿ ಭಾಗದ ಜನರು ವರ್ಷದ ಆರು ತಿಂಗಳು ಕೇರಳಕ್ಕೆ ವಲಸೆ ಹೋಗುತ್ತಾರೆ. ಇತ್ತ ಉತ್ತರ ಕರ್ನಾಟಕದ ರೈತರು ಹಾಗೂ ದಿನಗೂಲಿ ನೌಕರರು ಬದುಕಿನ ಬಂಡಿ ಸಾಗಿಸಲು ಗೋವಾ, ಮಹಾರಾಷ್ಟ್ರ ಮುಂತಾದ ನೆರೆ ರಾಜ್ಯಗಳಿಗೆ ಗುಳೇ ಹೋಗುತ್ತಾರೆ. ಈ ಜನರಿಗೆ ಯಾವುದೇ ಮುನ್ಸೂಚನೆ ನೀಡದೆ, ಬಿಎಲ್‌ಒಗಳು ಮನೆಗೆ ಹೋದಾಗ ಲಭ್ಯವಿಲ್ಲ ಎಂಬ ಒಂದೇ ಕಾರಣಕ್ಕೆ ಮತಪಟ್ಟಿಯಿಂದ ಹೆಸರುಗಳನ್ನು ಡಿಲೀಟ್ ಮಾಡುವುದು ಎಷ್ಟು ಸರಿ? ಮನೆ ಸ್ಥಳಾಂತರಿಸಿದವರು ಅಥವಾ ಕೆಲಸಕ್ಕೆ ಹೋದವರು ಯಾವುದೇ ಅಪರಾಧಿಗಳಲ್ಲ. ಅವರು ಗುರು ಗ್ರಹಕ್ಕಾಗಲಿ ಅಥವಾ ಮಂಗಳ ಗ್ರಹಕ್ಕಾಗಲಿ ಹೋಗಿಲ್ಲ, ಇಲ್ಲೇ ದೇಶದೊಳಗೆ ಇದ್ದಾರೆ ಎಂದು ಗರಂ ಆದರು.

ಏಕಾಏಕಿ ಎಸ್‌ಐಆರ್ ತಂದು ಬಡ ಜನರ ಮತಹಕ್ಕನ್ನು ಕಸಿಯಲಾಗುತ್ತಿದೆ. ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಸ್ಥಳಾಂತರಗೊಂಡವರಿಗೆ ನಮೂನೆ-8 ನೀಡಿ ಸರಿಪಡಿಸಬೇಕೇ ಹೊರತು, ಮತಪಟ್ಟಿಯಿಂದ ಅವರ ಹೆಸರನ್ನೇ ಸಂಪೂರ್ಣವಾಗಿ ತೆಗೆದುಹಾಕಬಾರದು. ಹೆಸರು ಡಿಲೀಟ್ ಮಾಡುವ ಮುನ್ನ ಪ್ರತಿಯೊಬ್ಬ ಮತದಾರನಿಗೂ ನೋಟಿಸ್ ನೀಡಬೇಕು. ಈ ಪ್ರಕ್ರಿಯೆಯ ಬಗ್ಗೆ ಆರು ತಿಂಗಳ ಮುಂಚೆಯೇ ಸಾರ್ವಜನಿಕವಾಗಿ ಅರಿವು ಮೂಡಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ಚುನಾವಣಾ ಆಯೋಗ ತನ್ನ ಧೋರಣೆಯನ್ನು ತಕ್ಷಣವೇ ಬದಲಾಯಿಸಿಕೊಳ್ಳಬೇಕು. ಎಸ್‌ಐಆರ್ ಪ್ರಕ್ರಿಯೆಗೆ ಕನಿಷ್ಠ ಒಂದು ವರ್ಷದ ಕಾಲಾವಕಾಶ ನೀಡಬೇಕು. ಬಿಎಲ್‌ಒಗಳು ಭೇಟಿ ನೀಡಿದಾಗ ಸಿಗದ ವಲಸೆ ಕಾರ್ಮಿಕರಿಗೆ ಕನಿಷ್ಠ 3 ತಿಂಗಳ ಕಾಲಾವಕಾಶ ನೀಡಬೇಕು. ಈಗಾಗಲೇ ಡಿಲೀಟ್ ಮಾಡಲಾಗಿರುವ ಅರ್ಹ ಮತದಾರರನ್ನು ತಕ್ಷಣವೇ ಪಟ್ಟಿಗೆ ಮರುಸೇರ್ಪಡೆಗೊಳಿಸಬೇಕು. ಆಯೋಗವು ನಮ್ಮ ಬೇಡಿಕೆಗಳಿಗೆ ಸರಿಯಾಗಿ ಸ್ಪಂದಿಸದಿದ್ದರೆ, ರಾಜ್ಯಾದ್ಯಂತ ಜನಪರ ಹೋರಾಟ ತೀವ್ರಗೊಳಿಸುವುದರ ಜೊತೆಗೆ ನ್ಯಾಯಾಂಗ ಹೋರಾಟವನ್ನೂ ಆರಂಭಿಸುತ್ತೇವೆ ಎಂದು ಪ್ರಕಾಶ್ ರಾಜ್ ಎಚ್ಚರಿಕೆ ನೀಡಿದ್ದಾರೆ.

ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

‘ಆರ್‌ಎಸ್‌ಎಸ್‌ ಇದುವರೆಗೆ ನೋಂದಣಿಯಾಗಿಲ್ಲ, ಮುಂದೆಯೂ ಮಾಡಲ್ಲ’: ‘ನೋಂದಣಿ ಮಾಡಿಕೊಂಡ ಸಂಸ್ಥೆಗಳು ಏನ್ ಮಾಡ್ತಿವೆ ಗೊತ್ತಿದೆ’- ಕಾಂಗ್ರೆಸ್ ಸರ್ಕಾರಕ್ಕೆ ಬಿ.ಎಲ್. ಸಂತೋಷ್‌ ಟಾಂಗ್

‘ಆರ್‌ಎಸ್‌ಎಸ್‌ ಇದುವರೆಗೆ ನೋಂದಣಿಯಾಗಿಲ್ಲ, ಮುಂದೆಯೂ ಮಾಡಲ್ಲ’: ‘ನೋಂದಣಿ ಮಾಡಿಕೊಂಡ ಸಂಸ್ಥೆಗಳು ಏನ್ ಮಾಡ್ತಿವೆ ಗೊತ್ತಿದೆ’- ಕಾಂಗ್ರೆಸ್ ಸರ್ಕಾರಕ್ಕೆ ಬಿ.ಎಲ್. ಸಂತೋಷ್‌ ಟಾಂಗ್

by Shwetha
August 16, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಆರ್‌ಎಸ್‌ಎಸ್ ನಡುವೆ ಸೃಷ್ಟಿಯಾಗಿರುವ ರಾಜಕೀಯ ಸಂಘರ್ಷ ಈಗ ಮತ್ತಷ್ಟು ತೀವ್ರಗೊಂಡಿದೆ. ಆರ್‌ಎಸ್‌ಎಸ್‌...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram