ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಬೇರೆಯವರ ಜೊತೆ ಮಾತಾಡಿದಂಗೆ ನನ್ ಹತ್ರ ಮಾತಾಡ್ಬೇಡಿ: ಅಕ್ರಮ ಮುಚ್ಚಿಹಾಕಲು ಗೃಹ ಇಲಾಖೆ ತಗೊಂಡ್ರಾ- ಪ್ರಿಯಾಂಕ್ ಖರ್ಗೆಗೆ HD ಕುಮಾರಸ್ವಾಮಿ ಖಡಕ್ ವಾರ್ನಿಂಗ್

Shwetha by Shwetha
August 29, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಕೆಪಿಎಸ್ಸಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಭೀಕರ ವಾಕ್ಸಮರ ಶುರುವಾಗಿದೆ. ಕೆಪಿಎಸ್ಸಿ ನೇಮಕಾತಿ ಹಗರಣದ ಬಗ್ಗೆ ಗಂಭೀರ ಆರೋಪ ಮಾಡಿರುವ ಕುಮಾರಸ್ವಾಮಿ ಅವರು ಪ್ರಿಯಾಂಕ್ ಖರ್ಗೆ ಅವರಿಗೆ ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಬೇರೆಯವರ ಜೊತೆ ಮಾತನಾಡಿದಂತೆ ನನ್ನ ಹತ್ತಿರ ಮಾತನಾಡಬೇಡಿ ಎಂದು ಗುಡುಗುವ ಮೂಲಕ ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಕೆಪಿಎಸ್ಸಿ ಸದಸ್ಯರ ನೇಮಕಾತಿಗೂ ರೇಟ್ ಫಿಕ್ಸ್ ಆರೋಪ

Related posts

ಯಶ್‌ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಣ್ಣಾಮಲೈ ಅಸಮಾಧಾನ; ‘ನಿಯಮಗಳನ್ನು ಬಿಗಿಗೊಳಿಸಬೇಕು’

ಯಶ್‌ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಣ್ಣಾಮಲೈ ಅಸಮಾಧಾನ; ‘ನಿಯಮಗಳನ್ನು ಬಿಗಿಗೊಳಿಸಬೇಕು’

August 29, 2026
‘ಈ ನೆಗೆಟಿವಿಟಿ ನನ್ನ ಮಗನಿಗೆ ಕೌಂಟ್ ಆಗಲ್ಲ’: ಟಾಕ್ಸಿಕ್ ಟ್ರೋಲ್‌ಗಳಿಗೆ ಯಶ್ ತಾಯಿ ಖಡಕ್ ತಿರುಗೇಟು

‘ಈ ನೆಗೆಟಿವಿಟಿ ನನ್ನ ಮಗನಿಗೆ ಕೌಂಟ್ ಆಗಲ್ಲ’: ಟಾಕ್ಸಿಕ್ ಟ್ರೋಲ್‌ಗಳಿಗೆ ಯಶ್ ತಾಯಿ ಖಡಕ್ ತಿರುಗೇಟು

August 29, 2026

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು ಕೆಪಿಎಸ್ಸಿ ಸಂಸ್ಥೆಯ ಇಂದಿನ ಸ್ಥಿತಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕೆಪಿಎಸ್ಸಿ ಮೇಲೆ ಜನರಿಗೆ ಇದ್ದ ವಿಶ್ವಾಸ ಸಂಪೂರ್ಣವಾಗಿ ಕುಸಿದು ಹೋಗಿದೆ. ಈ ಸಂಸ್ಥೆಗೆ ಸರ್ಕಾರ ಉತ್ತಮರನ್ನು ನೇಮಕ ಮಾಡಬೇಕಿತ್ತು. ಆದರೆ ದುರದೃಷ್ಟವಶಾತ್ ಸದಸ್ಯರ ನೇಮಕಾತಿಗೂ ಇಂತಿಷ್ಟು ಎಂದು ರೇಟ್ ಫಿಕ್ಸ್ ಮಾಡಲಾಗಿದೆ. ಇದು ಅಕ್ಷರಶಃ ಕರ್ಮಕಾಂಡ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಅಕ್ರಮ ಮುಚ್ಚಿ ಹಾಕಲು ಗೃಹ ಇಲಾಖೆ ಬೇಕಿತ್ತೇ

ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿದ ಹೆಚ್ ಡಿ ಕೆ ಅವರು ಅಸಿಸ್ಟೆಂಟ್ ಇಂಜಿನಿಯರ್ ಆಯ್ಕೆಯ ಸಮಯದಲ್ಲಿ ಅಕ್ರಮ ನಡೆದಿದ್ದು ಎಲ್ಲರಿಗೂ ಗೊತ್ತಿದೆ. ಆ ಸಮಯದಲ್ಲಿ ಇಲಾಖೆಯ ಮಂತ್ರಿಯಾಗಿದ್ದವರು ಯಾರು? ಅಕ್ರಮ ಹೊರಗೆ ಬಂದ ಕೂಡಲೇ ನೀವು ಗೃಹ ಇಲಾಖೆಯನ್ನು ಯಾಕೆ ಪಡೆದುಕೊಂಡಿರಿ? ಈ ಹಗರಣವನ್ನು ಮುಚ್ಚಿ ಹಾಕುವುದಕ್ಕಾಗಿಯೇ ನೀವು ಇಲಾಖೆಯನ್ನು ಬದಲಾಯಿಸಿಕೊಂಡಿದ್ದೀರಾ ಎಂದು ಪ್ರಶ್ನಿಸಿದರು. ಹೈಕೋರ್ಟ್ ಈಗಾಗಲೇ ಸರ್ಕಾರದ ಮುಖಕ್ಕೆ ಮಂಗಳಾರತಿ ಎತ್ತಿ ದಂಡ ವಿಧಿಸಿದೆ. ನಿಮ್ಮ ಪಾರದರ್ಶಕತೆ ಎಲ್ಲಿದೆ ಎಂದು ಅವರು ಪ್ರಶ್ನಿಸಿದರು.

ಕಾಂಗ್ರೆಸ್ ಸಿದ್ಧಾಂತದ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರಿಗೆ ಕುಮಾರಸ್ವಾಮಿ ತಿರುಗೇಟು ನೀಡಿದರು. ದೇಶಕ್ಕೆ ಗಂಡಾಂತರ ತಂದಿರುವುದು ಆರ್ ಎಸ್ ಎಸ್ ಅಲ್ಲ ಬದಲಾಗಿ ಕಾಂಗ್ರೆಸ್ ಪಕ್ಷ. ನಿಮ್ಮ ಸಿದ್ಧಾಂತದ ಬಗ್ಗೆ ನಮಗೆ ಚೆನ್ನಾಗಿ ಗೊತ್ತಿದೆ. ತಮಿಳುನಾಡಿನಲ್ಲಿ ಡಿಎಂಕೆ ಬಿಟ್ಟು ಟಿವಿಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದು ನಿಮ್ಮ ಸಿದ್ಧಾಂತವೇ? ನಾವು ಅಕ್ರಮಗಳ ಬಗ್ಗೆ ಮಾತನಾಡಿದರೆ ನೀವು ಜೆಡಿಎಸ್ ಪಕ್ಷದ ಬಗ್ಗೆ ಮಾತನಾಡುತ್ತೀರಿ. ಮೊದಲು ನೀವು ಮಾಡಿರುವ ಅಕ್ರಮಗಳಿಗೆ ಉತ್ತರ ಕೊಡಿ. ಅದನ್ನು ಬಿಟ್ಟು ನನ್ನ ಮುಂದೆ ಹಗುರವಾಗಿ ಮಾತನಾಡಬೇಡಿ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಪ್ರಿಯಾಂಕ್ ಖರ್ಗೆ ತಿರುಗೇಟು ರಾಜಕೀಯ ಅಸ್ತಿತ್ವಕ್ಕೆ ನನ್ನ ಹೆಸರು ಬೇಕು

ಇತ್ತ ಕುಮಾರಸ್ವಾಮಿ ಅವರ ಎಚ್ಚರಿಕೆಗೆ ಅಷ್ಟೇ ವೇಗವಾಗಿ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ ಅವರು ನನ್ನ ನಾಲಿಗೆ ಬಗ್ಗೆ ಮಾತನಾಡಲು ಜೆಡಿಎಸ್ ನವರು ಯಾರು ಎಂದು ಪ್ರಶ್ನಿಸಿದ್ದಾರೆ. ತಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಅವರಿಗೆ ಈಗ ಪ್ರಿಯಾಂಕ್ ಖರ್ಗೆ ಹೆಸರು ಬೇಕಾಗಿದೆ. ನನ್ನ ಹೆಸರನ್ನು ಬಳಸಿಕೊಂಡು ಅವರು ರಾಜಕೀಯ ಮಾಡುತ್ತಿದ್ದಾರೆ ಎಂದರೆ ಮಾಡಿಕೊಳ್ಳಲಿ. ನಾನು ಬಿಜೆಪಿ ಅಥವಾ ಜೆಡಿಎಸ್ ನಿಂದ ಕಲಿಯುವುದು ಏನೂ ಇಲ್ಲ ಎಂದು ಖಾರವಾಗಿ ಉತ್ತರಿಸಿದ್ದಾರೆ. ಈ ಇಬ್ಬರು ನಾಯಕರ ನಡುವಿನ ಸಂಘರ್ಷ ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ShareTweetSendShare
Join us on:

Related Posts

ಯಶ್‌ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಣ್ಣಾಮಲೈ ಅಸಮಾಧಾನ; ‘ನಿಯಮಗಳನ್ನು ಬಿಗಿಗೊಳಿಸಬೇಕು’

ಯಶ್‌ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಣ್ಣಾಮಲೈ ಅಸಮಾಧಾನ; ‘ನಿಯಮಗಳನ್ನು ಬಿಗಿಗೊಳಿಸಬೇಕು’

by Shwetha
August 29, 2026
0

ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಕುರಿತು ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸಿನಿಮಾಗಳಲ್ಲಿ ಮಹಿಳೆಯರನ್ನು ಚಿತ್ರಿಸುವ ರೀತಿಯ...

‘ಈ ನೆಗೆಟಿವಿಟಿ ನನ್ನ ಮಗನಿಗೆ ಕೌಂಟ್ ಆಗಲ್ಲ’: ಟಾಕ್ಸಿಕ್ ಟ್ರೋಲ್‌ಗಳಿಗೆ ಯಶ್ ತಾಯಿ ಖಡಕ್ ತಿರುಗೇಟು

‘ಈ ನೆಗೆಟಿವಿಟಿ ನನ್ನ ಮಗನಿಗೆ ಕೌಂಟ್ ಆಗಲ್ಲ’: ಟಾಕ್ಸಿಕ್ ಟ್ರೋಲ್‌ಗಳಿಗೆ ಯಶ್ ತಾಯಿ ಖಡಕ್ ತಿರುಗೇಟು

by Shwetha
August 29, 2026
0

ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಕುರಿತು ಕೇಳಿಬರುತ್ತಿರುವ ನೆಗೆಟಿವ್ ಕಾಮೆಂಟ್‌ಗಳು ಹಾಗೂ ಟ್ರೋಲ್‌ಗಳಿಗೆ ನಟ ಯಶ್ ಅವರ ತಾಯಿ ಪುಷ್ಪಾ...

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ವಾಲ್ಮೀಕಿ ಹಗರಣ ಬಿಜೆಪಿಯ ಷಡ್ಯಂತ್ರ:ಕಣ್ಣೀರಿಟ್ಟ ಬಿ ನಾಗೇಂದ್ರಗೆ ಬಿಕೆ ಹರಿಪ್ರಸಾದ್ ಸಾಂತ್ವನ ನಡುನೀರಲ್ಲಿ ಕೈಬಿಡಲ್ಲ ಎಂದ ಕಾಂಗ್ರೆಸ್ ಅಧ್ಯಕ್ಷ

by Shwetha
August 29, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಕಣ್ಣೀರಿಟ್ಟ ಬಿ ನಾಗೇಂದ್ರ ಅವರಿಗೆ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಭರವಸೆಯ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 29, 2026
0

ದಿನ ಭವಿಷ್ಯ: 29-08-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳ ದಿನ. ನಿಮ್ಮಲ್ಲಿ ಅತಿಯಾದ ಉತ್ಸಾಹ ಇರುತ್ತದೆ, ಆದರೆ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ವೃತ್ತಿ...

shivarajkumar-bail-movie-teaser-released-pavan-wadeyar-kvn-productions

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್: ಪವನ್ ಒಡೆಯರ್-ಕೆವಿಎನ್ ಕಾಂಬಿನೇಷನ್‌ನಲ್ಲಿ ಸದ್ದು ಮಾಡುತ್ತಿದೆ ಖಾಕಿ ಖದರ್!

by admin
August 28, 2026
0

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್: ಪವನ್ ಒಡೆಯರ್-ಕೆವಿಎನ್ ಕಾಂಬಿನೇಷನ್‌ನಲ್ಲಿ ಸದ್ದು ಮಾಡುತ್ತಿದೆ ಖಾಕಿ ಖದರ್! ಬೆಂಗಳೂರು: ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram