ಹೊಸ ವೈರಾಣು ಕುರಿತು ಅನಗತ್ಯ ಆತಂಕಬೇಡ : ಸುಧಾಕರ್ Sudhakar saaksha tv
ಬೆಂಗಳೂರು : ಹೊಸ ವೈರಾಣು ಕುರಿತು ಜನರು ಅನಗತ್ಯವಾಗಿ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಓಮಿಕ್ರಾನ್ ವೈರಾಣು ಬಗ್ಗೆ ಜನರಲ್ಲಿ ಆತಂಕ ಶುರುವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವರು, ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣು 12 ದೇಶಗಳಲ್ಲಿ ಪತ್ತೆಯಾಗಿದೆ.
ರಾಜ್ಯದಲ್ಲಿ ವಿಮಾನ ನಿಲ್ದಾಣ ಸೇರಿದಂತೆ ವಿವಿಧೆಡೆ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ.
ಕಳೆದ 12-13 ದಿನಗಳಲ್ಲಿ ನಿರ್ದಿಷ್ಟ ದೇಶಗಳಿಂದ ಬಂದವರ ಮೇಲೆ ನಿಗಾ ಇರಿಸಿ, ಅವರ ಸಂಪರ್ಕಿತರ ಪತ್ತೆ ಹಚ್ಚಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಹೊಸ ವೈರಾಣು ಕುರಿತು ಜನರು ಅನಗತ್ಯವಾಗಿ ಆತಂಕಗೊಳ್ಳುವ ಅಗತ್ಯವಿಲ್ಲ.
ಆದರೆ ಈ ಮೊದಲಿನಂತೆಯೇ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ.