ಚೆನ್ನೈ: ತಮಿಳುನಾಡು ಕೃಷಿ ಸಚಿವ ಆರ್.ದೊರೈಕಣ್ಣು ಅವರು ಕೊರೊನಾ ಸೋಂಕಿನಿದಾಗಿ ವಿಧಿವಶರಾಗಿದ್ದಾರೆ. 72 ವರ್ಷದ ದೊರೈಕಣ್ಣು ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ತಿಂಗಳು 13ರಂದು ಅನಾರೋಗ್ಯದ ಕಾರಣ ವಿಳ್ ಪುರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಚಿವರು ದಾಖಲಾಗಿದ್ರು. ಈ ವೇಳೆ ಸಚಿವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿತ್ತು. ನಂತರ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ದುರಾದೃಷ್ವಶಾತ್ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ.
ಕೃಷಿ ಸಚಿವ ದೊರೈಕಣ್ಣು ಅವರು ನಿಧನರಾದ ಸುದ್ದಿಯನ್ನು ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಅರವಿಂದನ್ ಸೆಲ್ವರಾಜ್ ಅವರು ಬಹಿರಂಗಪಡಿಸಿದ್ದಾರೆ. ಇನ್ನೂ ಹಿರಿಯ ಸಚಿವರ ನಿಧನಕ್ಕೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ, ತಮಿಳುನಾಡು ರಾಜ್ಯಪಾಲರಾದ ಬನ್ವರಿಲಾಲ್ ಪುರೋಹಿತ್ ಸೇರಿದಂತೆ ಅನೇಕರು ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel