ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಮಾತನಾಡಿದ್ದ ಯತ್ನಾಳ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಸಮರ್ಥಿಸಿಕೊಂಡಿದ್ದು, ದೊರೆಸ್ವಾಮಿ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರಿಗೆ ಅವಹೇಳನ ಮಾಡುತ್ತಾರೆ. ನಮಗೆ ಸ್ವಾತಂತ್ರ್ಯಹೋರಾಟಗಾರರ ಮೇಲೆ ನಂಬಿಕೆಯಿದೆ. ಸ್ವಾತಂತ್ರ್ಯ ಹೋರಾಟಗಾರು ಇದ್ದಿದ್ದರೆ ಹೀಗೆ ಮಾತನಾಡುತ್ತಿದ್ದರಾ? ಎಂದು ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. “ದೊರೆಸ್ವಾಮಿ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ಯಾರು ಯಾರು ಏನೇನು ಮಾತನಾಡಿದ್ದಾರೆ ಎಂಬುದು ಗೊತ್ತಿದೆ. ವಯಸ್ಸಾಗಿದೆ ಅಂತ ಏನು ಬೇಕಾದರೂ ಮಾತನಾಡಬಹುದಾ? ನಮ್ಮಲ್ಲಿ ಹಠಮಾರಿ ಧೋರಣೆಯಿಲ್ಲ. ಪ್ರಧಾನಿ, ಅಂಬೇಡ್ಕರ್ ಬಗ್ಗೆ ಮಾತನಾಡಿದ್ರೆ ಸಹಿಸೋದಕ್ಕೆ ಆಗುತ್ತಾ” ಎಂದು ರೇಣುಕಾಚಾರ್ಯ ಅವರು ಹೇಳಿಕೆ ಕೊಟ್ಟಿದ್ದಾರೆ.
ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ
ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...








