ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಮಾತನಾಡಿದ್ದ ಯತ್ನಾಳ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಸಮರ್ಥಿಸಿಕೊಂಡಿದ್ದು, ದೊರೆಸ್ವಾಮಿ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರಿಗೆ ಅವಹೇಳನ ಮಾಡುತ್ತಾರೆ. ನಮಗೆ ಸ್ವಾತಂತ್ರ್ಯಹೋರಾಟಗಾರರ ಮೇಲೆ ನಂಬಿಕೆಯಿದೆ. ಸ್ವಾತಂತ್ರ್ಯ ಹೋರಾಟಗಾರು ಇದ್ದಿದ್ದರೆ ಹೀಗೆ ಮಾತನಾಡುತ್ತಿದ್ದರಾ? ಎಂದು ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. “ದೊರೆಸ್ವಾಮಿ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ಯಾರು ಯಾರು ಏನೇನು ಮಾತನಾಡಿದ್ದಾರೆ ಎಂಬುದು ಗೊತ್ತಿದೆ. ವಯಸ್ಸಾಗಿದೆ ಅಂತ ಏನು ಬೇಕಾದರೂ ಮಾತನಾಡಬಹುದಾ? ನಮ್ಮಲ್ಲಿ ಹಠಮಾರಿ ಧೋರಣೆಯಿಲ್ಲ. ಪ್ರಧಾನಿ, ಅಂಬೇಡ್ಕರ್ ಬಗ್ಗೆ ಮಾತನಾಡಿದ್ರೆ ಸಹಿಸೋದಕ್ಕೆ ಆಗುತ್ತಾ” ಎಂದು ರೇಣುಕಾಚಾರ್ಯ ಅವರು ಹೇಳಿಕೆ ಕೊಟ್ಟಿದ್ದಾರೆ.
ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...








