ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Dr K Sudhakar | ಮೋದಿಯವರ “ನವ ಭಾರತ”ದ ಕನಸು ನನಸಾಗುತ್ತಿದೆ

Mahesh M Dhandu by Mahesh M Dhandu
April 29, 2022
in Newsbeat, State, ರಾಜ್ಯ
Dr K Sudhakar Modi's dream of "New India" is coming true saaksha tv

Dr K Sudhakar Modi's dream of "New India" is coming true saaksha tv

Share on FacebookShare on TwitterShare on WhatsappShare on Telegram

Dr K Sudhakar | ಮೋದಿಯವರ “ನವ ಭಾರತ”ದ ಕನಸು ನನಸಾಗುತ್ತಿದೆ

ಬೆಂಗಳೂರು : ಆಧುನಿಕ ಜಗತ್ತಿಗೆ ವೈದ್ಯರು ಒಗ್ಗಿಕೊಂಡು ಸಮಾಜಕ್ಕೆ ಉತ್ತಮ ಸೇವೆ ನೀಡಬೇಕು. ವೈದ್ಯರ ಕೆಲಸದಲ್ಲಿ ಧರ್ಮ, ಜಾತಿಯ ಭೇಧವಿಲ್ಲ. ಹಳ್ಳಿ ಹಳ್ಳಿಯಲ್ಲೂ ಆರೋಗ್ಯ ಸೇವೆ ಸುಲಭವಾಗಿ ಸಿಕ್ಕಾಗ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

Related posts

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

January 22, 2026
ರಾಜಣ್ಣ ಮತ್ತೆ ಸಚಿವರಾಗೋದು ಪಕ್ಕಾನಾ? ಸಿಹಿ ಸುದ್ದಿ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ: ಪುತ್ರ ರಾಜೇಂದ್ರ ಹೇಳಿದ್ದೇನು?

ರಾಜಣ್ಣ ಮತ್ತೆ ಸಚಿವರಾಗೋದು ಪಕ್ಕಾನಾ? ಸಿಹಿ ಸುದ್ದಿ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ: ಪುತ್ರ ರಾಜೇಂದ್ರ ಹೇಳಿದ್ದೇನು?

January 22, 2026

ಬೆಂಗಳೂರಿನ ಬಿಜಿಎಸ್ ಮೆಡಿಕಲ್ ಕಾಲೇಜಿನ ಮೂರನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ವೈದ್ಯರು ತಪಾಸಣೆ ಅಥವಾ ಚಿಕಿತ್ಸೆಯ ವೇಳೆ ರೋಗಿಯ ಮತ್ತು ಅವರ ಸಂಬಂಧಿಕರ ಕಣ್ಣಿನಲ್ಲಿರುವ ಪ್ರೀತಿ ಅಥವಾ ಕಷ್ಟಗಳನ್ನು ಕಾಣುವಂತಗಬೇಕು. ಅವರ ಕಣ್ಣಿರು ಒರೆಸಿದರೆ ಅದುವೇ ನಿಮಗೆ ಆಶೀರ್ವಾದ ಎಂದು ಅಭಿಪ್ರಾಯ ಪಟ್ಟರು.

ಬಿಜಿಎಸ್​​ನ 150 ವೈದ್ಯ ವಿದ್ಯಾರ್ಥಿಗಳು ಇಂದಿನಿಂದ ಸಮಾಜದಲ್ಲಿ ನಿಜವಾದ ಸವಾಲನ್ನು ಎದುರಿಸಲಿದ್ದಾರೆ. ಎಲ್ಲಾ ಸಮಯದಲ್ಲೂ ಸರ್ಕಾರ ಎಲ್ಲಾ ವೈದ್ಯರ ನೆರವಿಗೆ ನಿಲ್ಲಲಿದೆ. ವೈದ್ಯರಿಗೆ ಯಾರ ಭಯವೂ ಬೇಡ. ನಿಮ್ಮ ಕೆಲಸವನ್ನು ನೀವು ಬದ್ಧತೆ ಮತ್ತು ಶ್ರದ್ಧೆಯಿಂದ ಮಾಡಿ. ಸಮಾಜಕ್ಕೆ ಮಾದರಿ ಆಗುವಂತಹ ಕೆಲಸಗಳನ್ನು ಮಾಡಿ ಎಂದು ಹೇಳಿದರು

ಶಾಲಾ ಶಿಕ್ಷಕನ ಮಗನಾಗಿರುವ ನನಗೆ ವೈದ್ಯಕೀಯ ಎಷ್ಟು ದುಬಾರಿ ಅನ್ನುವುದರ ಅರಿವಿದೆ. ಉನ್ನತ ಶಿಕ್ಷಣದಲ್ಲಿ ವಿಶ್ವದಲ್ಲೇ ವೈದ್ಯಕೀಯ ಶಿಕ್ಷಣ ಎಲ್ಲಕ್ಕಿಂತ ದುಬಾರಿ . ಭಾರತ ಮಾತ್ರವಲ್ಲ, ವಿಶ್ವದ ಎಲ್ಲಾ ಕಡೆಯೂ ವೈದ್ಯಕೀಯ ಶಿಕ್ಷಣ ದುಬಾರಿ ಆಗಿದೆ. ಆದರೆ ಪೋಷಕರು ತ್ಯಾಗ, ಬದ್ಧತೆ ಮತ್ತು ಕನಸು ಇಟ್ಟುಕೊಂಡು ಮಕ್ಕಳನ್ನು ವೈದ್ಯರನ್ನಾಗಿ ಮಾಡುತ್ತಾರೆ. ತನ್ನ ಇತಿಹಾಸ ಅರಿತವನು ಹೊಸ ಇತಿಹಾಸ ಸೃಷ್ಟಿಸಬಲ್ಲನು ಅನ್ನುವ ಮಾತಿದೆ. ಇತಿಹಾಸದ ಮೂಲಕ ಭವಿಷ್ಯವಬನ್ನು ಕಟ್ಟ ಬಹುದು ಎಂದು ಹೇಳಿದರು.

Dr K Sudhakar Modi's dream of "New India" is coming true saaksha tv

ಎಂಬಿಬಿಎಸ್ ಪದವಿ ಪಡೆದ ಈ ಬ್ಯಾಚ್ ಸ್ಪೆಷಲ್ ಬ್ಯಾಚ್ ಆಗಿದೆ. 1918-1919ರ ನಂತರ ಮೊದಲ ಬಾರಿಗೆ ಸಾಂಕ್ರಾಮಿಕ ರೋಗ ಕೊರೊನಾ ಬಾಧಿಸಿತ್ತು. ಆಗಿನ ವೈದ್ಯಕೀಯ ವಿದ್ಯಾರ್ಥಿಗಳು ಸ್ಪಾನಿಷ್ ಫ್ಲೂ ವಿರುದ್ಧ ಹೋರಾಟ ಮಾಡುವ, ಕೆಲಸ ಮಾಡುವ ಅವಕಾಶ ಪಡೆದಿದ್ದರು. ಈಗ ಈ ಬ್ಯಾಚ್ ಗೆ ಕೊರೊನಾ ವಿರುದ್ಧ ಹೋರಾಟ ಮಾಡುವ ಅವಕಾಶ ಸಿಕ್ಕಿತ್ತು. ಕಲಿಕೆಯ ಜೊತೆ ಪ್ರಾಕ್ಟೀನ್ ಅನುಭವ ಸಿಕ್ಕಿದೆ. ವೈದ್ಯ ವೃತ್ತಿಯ ಆರಂಭದಲ್ಲಿ ಸಿಕ್ಕಿದ ಈ ಅನುಭವ ನಿಮ್ಮೆಲ್ಲರನ್ನು ಅತ್ಯುತ್ತಮ ವೈದ್ಯನಾಗಿ ಮಾಡಲಿದೆ ಎಂದು ಆಶಿಸಿದರು.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ 900 ಜನರಿಗೆ ಒಬ್ಬ ವೈದ್ಯ ಬೇಕಾಗುತ್ತದೆ. 2014ಕ್ಕೂ ಮೊದಲು 1300 ಜನಕ್ಕೆ ಒಬ್ಬ ವೈದ್ಯರ ಲಭ್ಯತೆ ಇತ್ತು. ಆದರೆ ಇವತ್ತು ಅಲೋಪಥಿಕ್, ಆಯುರ್ವೇದಮ ಯುನಾನಿ ಮತ್ತು ಯೋಗಿಕ್ ಸೈನ್ಸ್ ಸೇರಿಕೊಂಡು ಕರ್ನಾಟಕದಲ್ಲಿ 900 ಜನರಿಗೆ ಒಬ್ಬರ ವೈದ್ಯರ ಲಭ್ಯತೆ ಇದೆ. 2014ರಿಂದ ಬಿಜೆಪಿ ಸರ್ಕಾರ ದೇಶದ ಎಲ್ಲಾ ಕಡೆ ಸುಮಾರು 200ಕ್ಕೂ ಅಧಿಕ ಮೆಡಿಕಲ್ ಕಾಲೇಜುಗಳುನ್ನು ಆರಂಭಿಸಿದೆ. ಪ್ರತೀ ವರ್ಷ ಸುಮಾರು 65, 000ಕ್ಕೂ ಅಧಿಕ ಎಂಬಿಬಿಎಸ್ ವೈದ್ಯರು ಹಾಗೂ 30,000 ಸ್ನಾತಕೋತ್ತರ ವೈದ್ಯರು ಸಮಾಜ ಸೇವೆಗೆ ಸಿಗುತ್ತಿದ್ದಾರೆ. ಯಾರಿಗೂ ಮನುಷ್ಯನ ಜೀವನ ಅಥವಾ ಜೀವಂತ ಸಮಯವನ್ನು ನಿರ್ಧಾರ ಮಾಡಲು ಸಾಧ್ಯವಿಲ್ಲ. ಆದರೆ ವೈದ್ಯರಿಗೆ ಅದು ಸಾಧ್ಯವಿದೆ. ಹೀಗಾಗಿ ವೈದ್ಯರು ಎಲ್ಲರಿಗಿಂತಲೂ ವಿಭಿನ್ನ ಎಂದು ಹೇಳಿದರು.

ಹೆಣ್ಣುಮಕ್ಕಳು ಹೆಚ್ಚಾಗಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ. ಇದು ಮಹಿಳಾ ಸಬಲೀಕರಣದ ಹೆಜ್ಜೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಕಂಡ ಕನಸಿನ ನವ ಭಾರತವಾಗಿದೆ. ವೈದ್ಯಕೀಯ ಶಿಕ್ಷಣದ ಅಭಿವೃದ್ಧಿ ಇನಷ್ಟು ಆಗಬೇಕು. ವಿದೇಶಿ ವೈದ್ಯರು, ಶಿಕ್ಷಣ ಸಂಸ್ಥೆಗಳ ಜೊತೆ ಸ್ಪರ್ಧೆ ಮಾಡಬೇಕು. ಸರ್ಕಾರ ಈ ನಿಟ್ಟಿನಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ರೂಪಿಸಿದೆ. ತಂತ್ರಜ್ಞಾನದ ಬಳಕೆ ಮತ್ತು ಹೊಸ ಹೊಸ ಸಂಶೋಧನೆಗಳ ಹೆಚ್ಚು ಆಗಬೇಕು ಎಂದು ತಿಳಿಸಿದರು.

ಕೊರೊನಾ ಬಳಿಕ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಇಲಾಖೆಯಲ್ಲಿ ಬದಲಾವಣೆ ಆಗಿದೆ. 50 ವರ್ಷಗಳಲ್ಲಿ ಆಗದೇ ಇರುವುದು ಸಾಂಕ್ರಾಮಿಕ ರೋಗದ ಸಮಯದಲ್ಲಿ ಆಗಿದೆ. ,ಮೂಲ ಸೌಕರ್ಯದ ಅಭಿವೃದ್ಧಿಯಿಂದ ಹಿಡಿ ಎಲ್ಲವೂ ಈಗ ಲಭ್ಯವಿದೆ. ರಾಜ್ಯದಲ್ಲಿ 50,000 ಆಕ್ಸಿಜನ್ ಬೆಡ್ ಗಳಿವೆ. ಖಾಸಗಿಯಲ್ಲಿ 1 ಲಕ್ಷಕ್ಕೂ ಅಧಿಕ ಬೆಡ್ ಗಳಿವೆ. ಈ ಮೂಲ ಸೌಕರ್ಯಗಳ ಅಭಿವೃದ್ಧಿಯಿಂದಲೇ ಕೊರೊನಾವನ್ನು ಕಟ್ಟಿಹಾಕಲು ಸಾಧ್ಯವಾಯಿತು. ಕೊರೊನಾ ವೇಳೆ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಸಹಕಾರ ನೀಡಿದ್ದಾರೆ. ಕಳೆದ 1 ವರ್ಷದಲ್ಲಿ ಸರ್ಕಾರ 1750 ವೈದ್ಯರ ನೇಮಕ ಮಾಡಿದೆ. ಆದರೆ ಎಲ್ಲಾ ವೈದ್ಯರು ಹಳ್ಳಿಯಲ್ಲಿ ಕನಿಷ್ಠ 1 ವರ್ಷ ಸೇವೆ ಮಾಡಬೇಕು. ಹಳ್ಳಿ ಜನರಿಗೆ ಆರೋಗ್ಯ ವ್ಯವಸ್ಥೆಯ ಅವಶ್ಯಕತೆ ಇದೆ. ಹಳ್ಳಿ ಹಳ್ಳಿಯಲ್ಲಿ ಆರೋಗ್ಯ ಸೇವೆ ಸುಲಭವಾಗಿ ಸಿಕ್ಕಾಗ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು. Dr K Sudhakar Modi’s dream of “New India” is coming true

Tags: #Saaksha TVDr. K SudhakarkarnatakaNarendra mod
ShareTweetSendShare
Join us on:

Related Posts

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

by Shwetha
January 22, 2026
0

ಕೋಲಾರ: ನಾನು ಮೃದು ಸ್ವಭಾವದವನು, ಆದರೂ ನನಗೆ ಗೃಹ ಇಲಾಖೆಯಂತಹ ಜವಾಬ್ದಾರಿಯುತ ಖಾತೆಯನ್ನೇ ನೀಡುತ್ತಾರೆ. ವಿರೋಧ ಪಕ್ಷಗಳು ನನ್ನನ್ನು ಅಸಮರ್ಥ ಎಂದು ಕರೆದರೆ ಅದಕ್ಕೆ ತಲೆಬಾಗುವ ಜಾಯಮಾನ...

ರಾಜಣ್ಣ ಮತ್ತೆ ಸಚಿವರಾಗೋದು ಪಕ್ಕಾನಾ? ಸಿಹಿ ಸುದ್ದಿ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ: ಪುತ್ರ ರಾಜೇಂದ್ರ ಹೇಳಿದ್ದೇನು?

ರಾಜಣ್ಣ ಮತ್ತೆ ಸಚಿವರಾಗೋದು ಪಕ್ಕಾನಾ? ಸಿಹಿ ಸುದ್ದಿ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ: ಪುತ್ರ ರಾಜೇಂದ್ರ ಹೇಳಿದ್ದೇನು?

by Shwetha
January 22, 2026
0

ಮೈಸೂರು: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಗುಸುಗುಸು ಕೇಳಿಬರುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿರುವುದು ತೀವ್ರ...

ತಾಳ್ಮೆಗೂ ಇದೆ ಮಿತಿ! ದೆಹಲಿ ನಾಯಕರ ಮೌನದ ವಿರುದ್ಧ ಸಿಡಿದೆದ್ದ ಡಿಕೆಶಿ ಪಡೆ

ತಾಳ್ಮೆಗೂ ಇದೆ ಮಿತಿ! ದೆಹಲಿ ನಾಯಕರ ಮೌನದ ವಿರುದ್ಧ ಸಿಡಿದೆದ್ದ ಡಿಕೆಶಿ ಪಡೆ

by Shwetha
January 22, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಯಂತ್ರದ ಚುಕ್ಕಾಣಿ ಯಾರ ಕೈಯಲ್ಲಿರಬೇಕು ಎಂಬ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ....

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 22, 2026
0

ದಿನ ಭವಿಷ್ಯ: 22-01-2026 ಮೇಷ ರಾಶಿ ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆಯಿದೆ. ಆರ್ಥಿಕವಾಗಿ ದಿನವು ಉತ್ತಮವಾಗಿದೆ. ಕುಟುಂಬದವರೊಂದಿಗೆ...

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

by admin
January 21, 2026
0

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram