“ನಾನು ದೊಡ್ಡವನಲ್ಲ, ನಾನು ಇನ್ನೂ ಸಣ್ಣವನು” : ಕೆ.ಸುಧಾಕರ್
ಬೆಂಗಳೂರು : ನಾಯಕತ್ವ ಬದಲಾವಣೆ ಬಗ್ಗೆ ಮಾತಾನಾಡುವಷ್ಟು ನಾನು ದೊಡ್ಡವನಲ್ಲ. ನಾನು ಇನ್ನೂ ಸಣ್ಣವನು, ಆ ಬಗ್ಗೆ ಹಿರಿಯರು ಮಾತಾನಾಡುತ್ತಾರೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ನಾಯಕತ್ವ ಬದಲಾವಣೆ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ನಾಯಕತ್ವ ಬದಲಾವಣೆ ಬಗ್ಗೆ ಮಾತಾನಾಡುವಷ್ಟು ನಾನು ದೊಡ್ಡವನಲ್ಲ.
ನಾನು ಇನ್ನೂ ಸಣ್ಣವನು, ಆ ಬಗ್ಗೆ ಹಿರಿಯರು ಮಾತಾನಾಡುತ್ತಾರೆ. ಮುಖ್ಯಮಂತ್ರಿಗಳ ಸೂಚನೆಯಂತೆ ನಾನು ನನ್ನ ಕೆಲಸ ಮಾಡ್ತಿದ್ದೀನಿ ಎಂದು ಹೇಳಿದರು.
ಇದೇ ವೇಳೆ ಬಿ.ಎಸ್ ಯಡಿಯೂರಪ್ಪ ಅವರು ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದು ನಾಳೆಗೆ ಎರಡು ವರ್ಷ ಪೂರೈಸುತ್ತದೆ. ಈ ಹಿನ್ನೆಲೆಯಲ್ಲಿ ಸಚಿವ ಕೆ. ಸುಧಾಕರ್ ಅವರು ಬಿಎಸ್ ವೈಗೆ ಅಭಿನಂದನೆ ಸಲ್ಲಿಸಿದರು.
ರಾಜ್ಯ ಬಿಜೆಪಿ ಸರ್ಕಾರಕ್ಕೆ ಅದರಲ್ಲೂ ಮಾನ್ಯ ಮುಖ್ಯಮಂತ್ರಿಗಳಿಗೆ ನಾಳೆಯ ದಿನ ಅತ್ಯಂತ ಮಹತ್ವದ್ದಾಗಿದೆ. ಸರ್ಕಾರವನ್ನ ಅತ್ಯುತ್ತಮವಾಗಿ ಮುನ್ನಡೆಸಿಕೊಂಡು ಹೋಗಿದ್ದಾರೆ.
ಎರಡು ವರ್ಷ ಅನೇಕ ಅಡೆತಡೆಗಳ ನಡುವೆಯೂ ಬಿಎಸ್ವೈ ಅವರು ಯಶಸ್ವಿ ಉತ್ತಮ ಆಡಳಿತವನ್ನ ಮಾಡಿದ್ದಾರೆ ಎಂದರು.