ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Dr. K Sudhakar : ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ – ಸಚಿವ ಡಾ.ಕೆ.ಸುಧಾಕರ್

ನಾನು ಆರೋಗ್ಯ ಸಚಿವನಾದ ಬಳಿಕ ಪ್ರತಿ ವರ್ಷದಂತೆ ಎರಡು ಬಾರಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹೆಚ್ಚಿಸಲು ಪಾತ್ರ ವಹಿಸಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ತಮ್ಮ ಮೊದಲ ಬಜೆಟ್‌ನಲ್ಲಿ ಗೌರವಧನವನ್ನು 1,000 ರೂ. ಹೆಚ್ಚಿಸಿದ್ದಾರೆ. ಈ ಸಲ ಕೂಡ ಆಶಾ ಕಾರ್ಯಕರ್ತೆಯರ ಕೆಲ ಮನವಿಗಳನ್ನು ನೀಡಿದ್ದು, ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸಲಾಗುವುದು ಎಂದರು.

Naveen Kumar B C by Naveen Kumar B C
February 14, 2023
in Newsbeat, State, ರಾಜ್ಯ
D K Sudakar Saaksha Tv
Share on FacebookShare on TwitterShare on WhatsappShare on Telegram

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ – ಸಚಿವ ಡಾ.ಕೆ.ಸುಧಾಕರ್

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಬಜೆಟ್‌ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಬೆಂಗಳೂರಿನ ಶಿಕ್ಷಕರ ಸದನದಲ್ಲಿ, ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡ ಸಚಿವ ಡಾ.ಕೆ.ಸುಧಾಕರ್, ಸಂಘದ ಮನವಿ ಸ್ವೀಕರಿಸಿ ಮಾತನಾಡಿದರು.

ನಾನು ಆರೋಗ್ಯ ಸಚಿವನಾದ ಬಳಿಕ ಪ್ರತಿ ವರ್ಷದಂತೆ ಎರಡು ಬಾರಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹೆಚ್ಚಿಸಲು ಪಾತ್ರ ವಹಿಸಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ತಮ್ಮ ಮೊದಲ ಬಜೆಟ್‌ನಲ್ಲಿ ಗೌರವಧನವನ್ನು 1,000 ರೂ. ಹೆಚ್ಚಿಸಿದ್ದಾರೆ. ಈ ಸಲ ಕೂಡ ಆಶಾ ಕಾರ್ಯಕರ್ತೆಯರ ಕೆಲ ಮನವಿಗಳನ್ನು ನೀಡಿದ್ದು, ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸಲಾಗುವುದು ಎಂದರು.

ಆಶಾ ಕಾರ್ಯಕರ್ತೆಯರ ಪ್ರತಿನಿಧಿಯಾಗಿ ನಾನು ಕೆಲಸ ಮಾಡುತ್ತೇನೆ. ಇತ್ತೀಚೆಗೆ ಬಜೆಟ್ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಯಿತು. ಈ ಚರ್ಚೆಯ ವೇಳೆ, ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು 2,000 ರೂ. ಹೆಚ್ಚಿಸಲು ಮನವಿ ಮಾಡಲಾಗಿದೆ. ಈ ಬಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಆಶಾ ಕಾರ್ಯಕರ್ತೆಯರಿಗೆ 5 ಕೋಟಿ ರೂ. ಮೊತ್ತದ ಕ್ಷೇಮಾಭಿವೃದ್ಧಿ ನಿಧಿ ಇರಿಸಿ, ಕಾರ್ಯಕರ್ತೆಯರ ಆರೋಗ್ಯ ರಕ್ಷಣೆಗೆ ನೀಡಬೇಕು ಎಂಬ ಬೇಡಿಕೆ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ತಾಂತ್ರಿಕ ನ್ಯೂನತೆ ನಿವಾರಿಸಿ, ಸರಿಯಾದ ಸಮಯಕ್ಕೆ ಗೌರವಧನ ನೀಡಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

ಕೋವಿಡ್ ಸಮಯದಲ್ಲಿ ಅನೇಕರು ವರ್ಕ್ ಫ್ರಂ ಹೋಮ್ ಮಾಡಿದ್ದಾರೆ. ಆದರೆ ಆಶಾ ಕಾರ್ಯಕರ್ತೆಯರು ವರ್ಕ್ ಫ್ರಂ ಸ್ಟ್ರೀಟ್ ಮಾಡಿದ್ದರು. 10 ವರ್ಷಗಳ ಕಾಲ ಸೇವೆ ಸಲ್ಲಿಸಿದವರು ಅಥವಾ 60 ವಯಸ್ಸಿನ ಬಳಿಕ ನಿವೃತ್ತರಾಗಲು ಬಯಸಿದರೆ, ಅವರಿಗೆ ಇಡಿಗಂಟು ನೀಡಲು ಕ್ರಮ ವಹಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಚರ್ಚಿಸಲಾಗುವುದು. ಕೇವಲ ಮಾತಿನಲ್ಲಲ್ಲ, ಕೃತಿಯ ಮೂಲಕ ಕೊಡುಗೆ ನೀಡಲಾಗುವುದು ಎಂದರು.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಯ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವವಾದದ್ದು. ಅಪೌಷ್ಟಿಕತೆ ನಿವಾರಿಸುವ ಪೋಷಣ್ ಅಭಿಯಾನ, ಇಂದ್ರಧನುಷ್ ಲಸಿಕಾಕರಣ ಮೊದಲಾದ ಕಾರ್ಯಕ್ರಮಗಳನ್ನು ಆಶಾ ಕಾರ್ಯಕರ್ತೆಯರಿಂದ ಯಶಸ್ವಿಯಾಗುತ್ತಿದೆ. ಕೋವಿಡ್ ಲಸಿಕಾಕರಣದಲ್ಲಿ, 42 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಲಸಿಕೆ ನೀಡಲು ಶ್ರಮಿಸಿದ್ದರು. ಕೋವಿಡ್ ಲಸಿಕೆ ಅಭಿಯಾನದಲ್ಲಿ ಮೊದಲ ಮತ್ತು ಎರಡನೇ ಡೋಸ್ ಶೇ.100 ರಷ್ಟು ಆಗಿದ್ದು, ಇದರಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರವೇ ಪ್ರಮುಖವಾಗಿದೆ ಎಂದರು.

ಆಶಾ ಕಾರ್ಯಕರ್ತೆಯರ ಸೇವೆಯನ್ನು ಮೆಚ್ಚಿ ವಿಶ್ವ ಆರೋಗ್ಯ ಸಂಸ್ಥೆಯು ʼಜಾಗತಿಕ ನಾಯಕರುʼ ಎಂದು ಕರೆದಿದೆ. ಆಶಾ ಎಂದರೆ ಭರವಸೆ ಎಂದರ್ಥ. ಇಡೀ ವಿಶ್ವವೇ ನಂಬಿಕೆ, ಭರವಸೆಯ ಮೇಲೆ ನಿಂತಿದೆ. ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಮೇಲೆ ಸಂಪೂರ್ಣ ಭರವಸೆ ಇದ್ದು, ಯಾವುದೇ ಆಶಾ ಕಾರ್ಯಕರ್ತೆಯರು ಅದನ್ನು ಹುಸಿ ಮಾಡಲಿಲ್ಲ. ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿದ್ದಾರೆ ಎಂದರು.

ಕೋವಿಡ್ ಕಾಲದಲ್ಲಿ ಆಶಾ ಕಾರ್ಯಕರ್ತೆಯರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇದರಿಂದಾಗಿ ರಾಜ್ಯಕ್ಕೆ ಹೆಲ್ತ್‌ಗಿರಿ ಪ್ರಶಸ್ತಿ ದೊರೆತಿದೆ. ರಾಜ್ಯದಲ್ಲೀಗ ಸಾಂಸ್ಥಿಕ ಹೆರಿಗೆ ಪ್ರಮಾಣ ಶೇ.90 ಕ್ಕೂ ಹೆಚ್ಚಿದೆ. ಆದರೆ ಇದು ಶೇ.100 ಕ್ಕೆ ತಲುಪಬೇಕು. ತಾಯಂದಿರು ಹಾಗೂ ಶಿಶುಗಳ ಮರಣ ಪ್ರಮಾಣವನ್ನು ಇಳಿಕೆ ಮಾಡಬೇಕು. ಈ ವಿಚಾರದಲ್ಲಿ ಇನ್ನಷ್ಟು ಗುರಿ ಮುಟ್ಟಬೇಕಿದೆ. ನಾಗರಿಕ ಸಮಾಜದ ಅತಿ ದೊಡ್ಡ ಶತ್ರುವೇ ಅಪೌಷ್ಟಿಕತೆ. ಇದಕ್ಕೆ ಕೇವಲ ಬಡತನವೊಂದೇ ಕಾರಣವಲ್ಲ. ಎಲ್ಲಾ ಬಗೆಯ ಆಯಾಮಗಳಿಂದ ಇದನ್ನು ನೋಡಬೇಕಿದೆ ಎಂದರು.

Dr. K Sudhakar : Sincere effort to increase honorarium for Asha workers – Minister Dr. K. Sudhakar

Tags: Dr. K Sudhakar
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram