ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಚಂದನವನದ ”ಯಜಮಾನರಿಗೊಂದು ಅಕ್ಷರ ನಮನ

admin by admin
September 18, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೋಟಿಗೊಬ್ಬನ ನೆನಪಲ್ಲಿ ಆದರ್ಶ ದಿನಾಚರಣೆ

ಹಾವಿನ ದ್ವೇಷ ಹನ್ನೆರುಡು ವರ್ಷ ಎಂಬ ನಾಗರಹಾವು ಚಿತ್ರದ ಹಾಡು ಕೇಳಿದ್ರನೇ ಆರು ವರ್ಷದ ಮಕ್ಕಳಿಂದ ಆರವತ್ತಾರರ ವೃದ್ಧರು ಸಹಾ ಎದೆಯುಬ್ಬಿಸಿ ನಿಲ್ಲುತ್ತಾರೆ. ಇಂತಹ ಸಾರ್ವಕಾಲಿಕ ಚಿತ್ರದ ಮೂಲಕ ಚಂದನವನಕ್ಕೆ ಕಾಲಿಟ್ಟವರು ಮರೆಯದ ಮಾಣಿಕ್ಯ, ಸಹಾಸ ಸಿಂಹ ಡಾ. ವಿಷ್ಣುವರ್ಧನ್. ಅಭಿನಯ ಭಾರ್ಗವ, ಮೈಸೂರು ರತ್ನ ಎಂಬ ಬಿರುದಾಂಕಿತ ವಿಷ್ಣುವರ್ಧನ್ ಅವರಿಗೆ ಇಂದು 70ನೇ ಜನ್ಮದಿನದ ಸಂಭ್ರಮ.. ಭೌತಿಕವಾಗಿ ವಿಷ್ಣು ಇಲ್ಲದಿದ್ದರು ಇಂದು ಅವರ ಹೆಸರಿನಲ್ಲಿ ಆದರ್ಶ ದಿನಾಚರಣೆ, ಸಸಿ ನೆಡುವುದು, ರಕ್ತದಾನ, ಅನ್ನದಾನ, ಆರೋಗ್ಯ ಶಿಬಿರಗಳ ಮೂಲಕ ಇಂದು ವಿಷ್ಣು ಉತ್ಸವ ನಡೆಯುತ್ತಿದೆ.

ಪಂಚಭಾಷೆಗಳಲ್ಲಿ ಒಟ್ಟು 220 ಚಿತ್ರಗಳಲ್ಲಿ ನಟಿಸಿದ ವಿಷ್ಣದಾದಾ ಜನಿಸಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 1950ನೇ ಇಸವಿಯ ಸೆಪ್ಟೆಂಬರ್ 18ರಂದು. ಚಿತ್ರ ಸಂಭಾಷಣೆಕಾರ ಹೆಚ್ ಎಲ್ ನಾರಾಯಣರಾವ್ ಹಾಗೂ ಕಾಮಾಕ್ಷಮ್ಮನವರ ಮುದ್ದಿನ ಮಗ ಸಂಪತ್ ಕುಮಾರ್ ತಮ್ಮ ಪ್ರಾರ್ಥಮಿಕ ಶಿಕ್ಷಣವನ್ನು ಮುಗಿಸಿ, ಕಾಲೇಜು ಶಿಕ್ಷಣಕ್ಕೆ ಬೆಂಗಳೂರಿನ ನ್ಯಾಷನಲ್ ಕಾಲೇಜ್ ಸೇರಿದರು.

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

ತಮ್ಮ ಐದನೇ ವಯಸ್ಸಿನಲ್ಲೇ ಶಿವರಣೆ ನಂಬೆಯಕ್ಕ ಮೂಲಕ ಬಣ್ಣ ಹಚ್ಚಿದ ಸಂಪತ್ ಕುಮಾರ್, ಬಳಿಕ ಗಿರಿಶ್ ಕಾರ್ನಾಡರ ವಂಶವೃಶದ ಮೂಲಕ ಗಮನ ಸೆಳೆದರು. ನ್ಯಾಯ ನಿಷ್ಠುರನಾದ ರಾಮಾಚಾರಿ ಪಾತ್ರದಲ್ಲಿ ಪುಟ್ಟಣ್ಣ ಕಣಗಾಲ್ ಅವರು ಸಂಪತ್ ಕುಮಾರನನ್ನು ವಿಷ್ಣುವರ್ಧನ್ ಎಂಬ ಹೆಸರಿನೊಂದಿಗೆ ನಾಗರಹಾವು ಮೂಲಕ ಚಿತ್ರರಂಗದಲ್ಲಿ ದಾಖಲೆ ನಿರ್ಮಿಸಿದ್ದಾರೆ

ವಿಷ್ಣುದಾದಾ ನಟನೆಯಲ್ಲದೇ ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿಂಹ , ಜಿಮ್ಮಿಗಲ್ಲು, ಖೈದಿ, ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯನವನ್ನೂ ಕೂಡ ಮಾಡಿ ಕನ್ನಡಿಗರನ್ನು ರಂಜಿಸಿದ್ದಾರೆ.

ಸುಮಾರು 14 ಚಿತ್ರಗಳಲ್ಲಿ ದ್ವಿಪಾತ್ರ ಮಾಡುವ ಮೂಲಕ ಕನ್ನಡ ಚಿತ್ರರಂಗದಲ್ಲಿ ವಿಷ್ಣುವರ್ಧನ್ ದಾಖಲೆ ನಿರ್ಮಿಸಿದ್ದಾರೆ. ಅದರಲ್ಲೂ ಗೌಡರ ಗತ್ತಿನ ಸೂರ್ಯವಂಶ, ಸಿಂಹಾದ್ರಿಯ ಸಿಂಹ, ಜಮಿನ್ದಾರ್, ಹಾಗೂ ಆದರ್ಶನ ಅಣ್ಣನ ಪಾತ್ರದ ಯಜಮಾನನ್ನು ಕನ್ನಡಿಗರು ಎಂದೂ ಮರೆಯಲು ಸಾಧ್ಯವಿಲ್ಲ.

ಕನ್ನಡ ಚಿತ್ರರಂಗದ ದಿಗ್ಗಜನಟ ಡಾ. ವಿಷ್ಣುವರ್ಧನ್ ಅವರು ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಮಿಂಚಿ ಕಲೆಗೆ ಭಾಷೆಯ ಗಡಿಯಿಲ್ಲ ಎನ್ನುವುದನ್ನು ಅಂದೇ ತೋರಿಸಿಕೊಟ್ಟರು. ಅಕ್ಷಯ್ ಕುಮಾರ್, ರಜಿನಿಕಾಂತ್, ಕಮಲ್ ಹಾಸನ್, ಮುಮ್ಮಟ್ಟಿ, ವಿಜಯ್ ಕಾಂತ್, ಶಿವಾಜಿ ಗಣೇಶನ್, ಕೃಷ್ಣಂ ರಾಜು, ರಾಜಶೇಖರ್ ಜೊತೆ ತೆರೆಹಂಚಿಕೊಂಡು ಪರಭಾಷೆಗಳಲ್ಲೂ ತಮ್ಮ ಸ್ನೇಹಲೋಕ ಸೃಷ್ಠಿಸಿಕೊಂಡಿದ್ದರು. ಅಲ್ದೆ ನಟ ಶಂಕರ್ ನಾಗ್ ನಿರ್ದೇಶನದ ಮಾಲ್ಗುಡಿ ಡೇಸ್ ನಲ್ಲಿ ವಿಷ್ಣುದಾದಾ ಬಣ್ಣ ಹಚ್ಚಿ ಕಮಾಲ್ ಮಾಡಿದ್ದರು. ತಮ್ಮ ವಿವಿಧ ಚಿತ್ರದ ಅಭಿನಯಕ್ಕೆ ಒಟ್ಟು 7 ಫಿಲ್ಮ ಫೇರ್ ಪ್ರಶಸ್ತಿ ಪಡೆದಿದ್ದಾರೆ.

ತನ್ನದಲ್ಲದ ತಪ್ಪಿಗೆ ಕೆಲ ಕುತಂತ್ರಿಗಳು ಮಾಡಿದ ಸಂಚಿಗೆ ಬಲಿಯಾದ ವಿಷ್ಣುದಾದ ಗಂಧದಗುಡಿ ಪ್ರಕರಣದಲ್ಲಿ ಸಂಕಷ್ಟಗಳ ಸರಪಳಿಯನ್ನೇ ಎದುರಿಸಿದರು. ಈ ವೇಳೆ ವಿಷ್ಣುವರ್ಧನ್ ಜೊತೆ ನಿಂತದ್ದು ಅವರ ಕುಚುಕು ಗೆಳೆಯ ಅಂಬರೀಶ್ ಮತ್ತು ಅಭಿಮಾನಿಗಳು. ನಂತರ ಬಂಧನ ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದ ಕರ್ನಾಟಕ ತೊರೆಯುವ ಯೋಚನೆ ಕೈಬಿಟ್ಟ, ಕನ್ನಡ ಮಣ್ಣನ್ನೇ ಹಣೆಯ ತಿಲಕ್ಕವನ್ನಾಗಿಸಿಕೊಂಡರು.

ಭೂತಯ್ಯನ ಮಗ ಅಯ್ಯು, ಕಾರ್ಮಿಕ ಕಳ್ಳನಲ್ಲ, ಊರಿಗೆ ಉಪಕಾರಿ, ಕರ್ಣ, ಕಥಾನಾಯಕ, ಕರುಣಾಮಯಿ, ದೇವಾ, ಧಣಿ, ಸೂರಪ್ಪ, ಕದಂಬ, ಕೋಟಿಗೊಬ್ಬ ಹೃದಯವಂತ ಚಿತ್ರಗಳ ಮೂಲಕ ವಿಷ್ಣು ಅದೇಷ್ಟು ಹತಾಶ ಮನಸುಗಳಿಗೆ ಆದರ್ಶ ಹಾಗೂ ಜೀವನೋತ್ಸಹ ತುಂಬಿದ್ದಾರೆ.

ಇನ್ನು ವಿಷ್ಣುವರ್ಧನ್ ಅವರ ಸಂಸಾರಿಕ ಜೀವನದ ಬಗ್ಗೆ ಹೇಳೋದಾದರೆ ಹೆಸರಾಂತ ಪಂಚಭಾಷನಟಿ ಭಾರತಿಯವರನ್ನು ಮದುವೆಯಾಗಿ, ಕೀರ್ತಿ, ಚಂದನ ಎಂಬ ದತ್ತು ಪತ್ರಿಯರ ಜೊತೆ ಆದರ್ಶ ಪ್ರಾಯ ಜೀವನ ನಡೆಸಿದ್ದಾರೆ.

ಇನ್ನು ಆರಂಭದ ನಾಗರಹಾವಿನಿಂದ ಅಂತ್ಯದ ಆಪ್ತರಕ್ಷದವರೆಗೂ ಯಶಸ್ಸು ವಿಷ್ಣು ಜೀವನದ ಜೊತೆ ಅಗತ್ಯ ಬಿದ್ದಾಗಲೆಲ್ಲ ಗಟ್ಟಿಯಾಗಿ ನಿಂತಿತ್ತು. ಆದರೆ ಅವರು 2009ರಂದು ಗತಿಸಿದ ಮೇಲೆ ಅವರ ಸ್ಮಾರಕದ ವಿಚಾರದಲ್ಲಿ ಚಿತ್ರರಂಗ ಮತ್ತು ಸರ್ಕಾರ ತಮ್ಮ ಸಹಜ ಗೌರವ ಸಲ್ಲಿಸಲು ಸಾಧ್ಯವಾಗಿಲ್ಲ. ಆದರೆ ಇಂದಿಗೂ ಅವರ ಅಭಿಮಾನಿಗಳು ಮಾತ್ರ ರಾಷ್ಟ್ರೀಯ ಉತ್ಸವದಂತ ಅದ್ದೂರಿ ಕಾರ್ಯಕ್ರಮಗಳು ಮಾತ್ರವಲ್ಲದೇ ಅನೇಕ ಅರ್ಥಪೂರ್ಣ ಕೆಲಸ ಮಾಡುತ್ತಿದ್ದಾರೆ.

ವೀರಪ್ಪನಾಯ್ಕ, ಮುತ್ತಿನಹಾರ, ವಿಷ್ಣುಸೇನಾದಂತಹ ದೇಶಾಭಿಮಾನ ಸಾರುವ ಚಿತ್ರದ ಮೂಲಕ ಸಂಪತ್ ಕುಮಾರ್ ಕನ್ನಡಿಗರ ಹೃದಯಮಂದಿರದಲ್ಲಿ ಸಾಹಸ ಸಿಂಹನಾಗಿ ಸಾದ ಜೀವಂತವಾಗಿದ್ದಾರೆ.

ಮಾನವೀಯ ಮೌಲ್ಯಗಳನ್ನೇ ಜೀವನದ ಉಸಿರಾಗಿಸಿಕೊಂಡು ಬದುಕಿದ “ಹೃದಯವಂತ”ನಿಗೆ ನಮ್ಮ ಕಡೆಯಿಂದ ಹುಟ್ಟುಹಬ್ಬದ ಶುಭಾಶಯಗಳು.. ನೀವು ಸಹಾ ಸಹಾಸಸಿಂಹನ ಜನ್ಮದಿನ ಸಂಭ್ರಮದಲ್ಲಿ ಭಾಗಿಯಾಗಬೇಕೆಂದರೆ ಕಮೆಂಟ್ ಮಾಡಿ ಕೋಟಿಗೊಬ್ಬನಿಗೆ ಶುಭಕೋರಿ.

✍ ಪ್ರತಾಪ್ ಕೋಟೆ

Tags: actorvishvardhanBirthdaykotigobbaNagarahavuRamacharisandalwoodactorvishnavardhan
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram