ಅಭಿಮಾನಿಗಳ ಪರ ಕ್ಷಮೆಯಾಚಿಸಿದ ದರ್ಶನ್ : ಧನ್ಯವಾದ ಎಂದ ಜಗ್ಗೇಶ್..!
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳ ವರ್ತನೆಗೆ ನವರಸ ನಾಯಕ ಜಗ್ಗೇಶ್ ಅವರ ಬಳಿ ಕ್ಷಮೆಯಾಚನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದರ್ಶನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಅನ್ನ ಮಿಕ್ಕಿದ್ದರೆ ತಯಾರಿಸಿ ಸಿಹಿಯಾದ ರಸಗುಲ್ಲಾ !
ಅಭಿಮಾನಿಗಳಿಂದ ಆಗಿರುವ ನೋವಿಗೆ ನಾನು ಕ್ಷಮೆಯಾಚಿಸುತ್ತೇನೆ ಎಂದು ದರ್ಶನ್ ಹೇಳಿದ ನಂತರ ಜಗ್ಗೇಶ್, ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯೆ. ವೈಶಾಲ್ಯತೆ ಚಿಂತನೆ ಹೃದಯ ಇದ್ದಾಗ ಅಪನಂಬಿಕೆ ಮೋಡ ಸರಿದು ಮತ್ತೆ ಸೂರ್ಯ ಪ್ರಜ್ವಲಿಸುತ್ತಾನೆ. ಕನ್ನಡಕ್ಕೆ ಒಗ್ಗಟ್ಟಿರಲಿ. ಧನ್ಯವಾದ ದರ್ಶನ್ ಎಂದು ಟ್ವೀಟ್ ಮಾಡಿದ್ದಾರೆ.
ಈ ವರ್ಷದ ವೇತನ ಹೆಚ್ಚಳದಲ್ಲಿ ಟೇಕ್ ಹೋಮ್ ಮೊತ್ತ ಹೆಚ್ಚಳವಿಲ್ಲ ?
ಈ ಮೂಲಕ ಕಳೆದ ಎರಡು ದಿನಗಳಿಂದ ಜಗ್ಗೇಶ್ ಮತ್ತು ದರ್ಶನ್ ಅಭಿಮಾನಿಗಳ ಜೊತೆಗಿನ ಕಿತ್ತಾಟ ವಿವಾದಕ್ಕೂ ತೆರೆಬಿದ್ದಂತಾಗಿದೆ. ಅಲ್ಲದೇ ಮನಸ್ಸು ಹಗುರವಾಯಿತು. ಧನ್ಯವಾದ ಮಾಧ್ಯಮಮಿತ್ರರಿಗೆ, ಧನ್ಯವಾದ ಕನ್ನಡದ ಮನಗಳಿಗೆ. ಇನ್ನೆಂದು ಇಂಥ ದಿನ ಬರದಿರಲಿ ಎಂದು ಜಗ್ಗೇಶ್ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.