ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗಂಗೂಲಿಯವರನ್ನು ತಂಡದಿಂದ ಕೈಬಿಟ್ಟಿರುವುದು ಯಾಕೆ ? ಮಾಜಿ ಆಯ್ಕೆ ಸಮಿತಿ ಮುಖ್ಯಸ್ಥ ಕಿರಣ್ ಮೋರೆ ಹೇಳುವುದೇನು ?

admin by admin
July 23, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಗಂಗೂಲಿಯವರನ್ನು ತಂಡದಿಂದ ಕೈಬಿಟ್ಟಿರುವುದು ಯಾಕೆ ? ಮಾಜಿ ಆಯ್ಕೆ ಸಮಿತಿ ಮುಖ್ಯಸ್ಥ ಕಿರಣ್ ಮೋರೆ ಹೇಳುವುದೇನು ?

ಕೊಲ್ಕತ್ತಾದ ಮಹಾರಾಜ ಸೌರವ್ ಗಂಗೂಲಿ ಹೆಸರು ಕೇಳಿದಾಗ ತಕ್ಷಣ ನೆನಪಾಗೋದು ಟೀಮ್ ಇಂಡಿಯಾ.. 2000ದಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಟೀಮ್ ಇಂಡಿಯಾ ಎಂಬ ಹೆಸರನ್ನಿಟ್ಟುಕೊಂಡು ಮುನ್ನಡೆಸಿದ್ದ ಸಾರಥಿ ಸೌರವ್ ಗಂಗೂಲಿ. ಮ್ಯಾಚ್ ಫಿಕ್ಸಿಂಗ್ ನಿಂದ ಕಂಗೆಟ್ಟಿದ್ದ ಭಾರತ ಕ್ರಿಕೆಟ್ ತಂಡಕ್ಕೆ ಹೊಸ ಸ್ವರೂಪ ಕೊಟ್ಟಿದ್ದು ಕೂಡ ಗಂಗೂಲಿಯೇ. ಯುವ ಪ್ರತಿಭೆಗಳಿಗೆ ಅವಕಾಶ ಕೊಟ್ಟು ಬಲಿಷ್ಠ ತಂಡವನ್ನು ಕಟ್ಟಿದ್ದ ಹೆಗ್ಗಳಿಕೆ ಕೂಡ ಗಂಗೂಲಿಗೆ ಸಲ್ಲುತ್ತದೆ. ಹಾಗೇ ದೇಶಿ ಮತ್ತು ವಿದೇಶಿ ನೆಲಗಳಲ್ಲಿ ಟೀಮ್ ಇಂಡಿಯಾಗೆ ಗೆಲುವಿನ ರುಚಿ ತೋರಿಸಿದ್ದು ಕೂಡ ಈ ದಾದಾನೇ.. ಅಷ್ಟೇ ಅಲ್ಲ, ಟೀಮ್ ಇಂಡಿಯಾ ಆಟಗಾರರಲ್ಲಿ ಆಕ್ರಮಣಕಾರಿ ಪ್ರವೃತ್ತಿಯನ್ನೂ ಮೈಗೂಡಿಸಿಕೊಳ್ಳುವಂತೆ ಮಾಡಿದ್ದು ಸಹ ಸೌರವ್ ಗಂಗೂಲಿಯೇ..

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಅಂತಹ ಸೌರವ್ ಗಂಗೂಲಿಯವರನ್ನು 2005ರಲ್ಲಿ ಟೀಮ್ ಇಂಡಿಯಾದ ನಾಯಕತ್ವದಿಂದಲೇ ಕೈಬಿಡಲಾಗಿತ್ತು. ಆಗ ಗಂಗೂಲಿಯ ಅಭಿಮಾನಿಗಳು ಕುಪಿತಗೊಂಡಿದ್ದರು. ಪಶ್ಚಿಮ ಬಂಗಾಳದಲ್ಲಂತೂ ಆಗಿನ ಆಯ್ಕೆ ಸಮಿತಿ ಮುಖ್ಯಸ್ಥ ಕಿರಣ್ ಮೋರೆಯ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು. ಹಾಗೇ ಸಂಸತ್ ನಲ್ಲೂ ಈ ವಿಚಾರ ಚರ್ಚೆಯಾಗಿತ್ತು. ಆಗಿನ ಕೋಚ್ ಗ್ರೆಗ್ ಚಾಪೆಲ್ ಕೂಡ ಕೆಂಗಣ್ಣಿಗೆ ಗುರಿಯಾಗಿದ್ದರು. ಆದ್ರೆ ಗಂಗೂಲಿಯವರನ್ನು ಕೈಬಿಟ್ಟಿರುವ ಬಗ್ಗೆ ಆಗಿನ ಆಯ್ಕೆ ಸಮಿತಿಯ ಮುಖ್ಯಸ್ಥ ಕಿರಣ್ ಮೋರೆ ಸಮರ್ಥನೆ ಮಾಡಿಕೊಂಡಿದ್ದಾರೆ.

ಒಂದಂತೂ ನಿಜ, ಗಂಗೂಲಿಯಂತಹ ಆಟಗಾರರನ್ನು ತಂಡದಿಂದ ಕೈಬಿಡುವುದು ಸುಲಭದ ಕೆಲಸವಾಗಿರಲಿಲ್ಲ. ಅದೊಂದು ಕಠಿಣ ನಿರ್ಧಾರವಾಗಿತ್ತು. ಹಾಗಂತ ನಾನು ಒಬ್ಬ ತೆಗೆದುಕೊಂಡ ನಿರ್ಧಾರವಲ್ಲ. ಐದು ಮಂದಿ ಆಯ್ಕೆ ಸಮಿತಿ ಸದಸ್ಯರು ಪರಸ್ಪರ ಚರ್ಚೆ ನಡೆಸಿ ತೆಗೆದುಕೊಂಡ ನಿರ್ಧಾರವಾಗಿತ್ತು. ಹಾಗೇ ಟೀಮ್ ಮ್ಯಾನೇಜ್‍ಮೆಂಟ್, ನಾಯಕ, ಕೋಚ್ ಹಾಗೂ ಕೆಲವು ಹಿರಿಯ ಆಟಗಾರರ ಜೊತೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಿದ್ದೇವು ಎಂದು ಕಿರಣ್ ಮೋರೆ ಹೇಳಿದ್ದಾರೆ.
ಹಾಗಂತ ನಾವೇನು ರಾತ್ರೋ ರಾತ್ರಿ ಈ ನಿರ್ಧಾರ ತಗೊಂಡಿಲ್ಲ. ಕೇವಲ ಪ್ರತಿಕಾರಕ್ಕಾಗಿ ತೆಗೆದುಕೊಂಡ ನಿರ್ಧಾರವಾಗಿರಲಿಲ್ಲ. ನಾವು ತುಂಬಾ ಯೋಚನೆ ಮಾಡಿ ತೆಗೆದುಕೊಂಡು ನಿರ್ಧಾರವಾಗಿತ್ತು. ಏನು ಮಾಡಬೇಕು? ತಂಡದ ಭವಿಷ್ಯವನ್ನು ಮುಂದಿಟ್ಟುಕೊಂಡು ಸ್ಪಷ್ಟ ಮನಸ್ಸಿನಿಂದ ತೆಗೆದುಕೊಂಡ ನಿರ್ಧಾರವಾಗಿತ್ತು. ಆ ಸಮಯದಲ್ಲಿ ರಾಹುಲ್ ದ್ರಾವಿಡ್ ನಾಯಕತ್ವ ನೀಡಿದ್ರೆ ಉತ್ತಮ ಎಂಬ ಭಾವನೆಯನ್ನು ಆಯ್ಕೆಗಾರರು ಹೊಂದಿದ್ದೇವು. ಹೀಗಾಗಿ ಗಂಗೂಲಿ ಬದಲು ರಾಹುಲ್ ದ್ರಾವಿಡ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿದ್ದೇವು ಎಂದು ಕಿರಣ್ ಮೋರೆ ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳುವಂತೆ ಹೇಳಿದ್ದಾರೆ.
ಇನ್ನು ತಂಡದಿಂದ ಆಟಗಾರರನ್ನು ಕೈಬಿಟ್ಟಾಗ ಅವರಿಗೆ ಮತ್ತೆ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಅವಕಾಶವೂ ಇದೆ. ನಾನು ಆಡುತ್ತಿರುವಾಗಲೂ ಸಹ ಸಾಕಷ್ಟು ಬಾರಿ ತಂಡದಿಂದ ಹೊರಗಿದ್ದೆ. ಮತ್ತೆ ತಂಡವನ್ನು ಸೇರಿಕೊಂಡಿದ್ದೆ. ಹಾಗೇ ನೋಡಿದ್ರೆ ಮೋಹಿಂದರ್ ಅಮರನಾಥ್ ಅವರು ಸುಮಾರು 10-12 ಬಾರಿ ತಂಡದಿಂದ ಕೈಬಿಟ್ಟು ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ತಂಡದಿಂದ ಕೈಬಿಡುವುದು, ಮತ್ತೆ ತಂಡವನ್ನು ಸೇರಿಕೊಳ್ಳುವುದು ಆಟಗಾರರ ಪಾಲಿಗೆ ಮಾಮೂಲಿಯಾಗಿದೆ ಎಂದು ಕಿರಣ್ ಮೋರೆ ಅಭಿಪ್ರಾಯಪಟ್ಟಿದ್ದಾರೆ.
ತಂಡದಿಂದ ಕೈಬಿಟ್ಟಾಗ ನಮಗೆ ಅವರ ಮೇಲೆ ದ್ವೇಷವಿದೆ.. ಪ್ರತಿಕಾರಕ್ಕಾಗಿ ತಂಡದಿಂದ ಕೈಬಿಟ್ಟಿದ್ದೇವೆ ಅಂತಲ್ಲ. ಯಾಕಂದ್ರೆ ತಂಡದಿಂದ ಕೈಬಿಟ್ಟಾಗ ಆಗುವಂತಹ ನೋವು ಏನು ಎಂಬುದು ನಮಗೂ ಗೊತ್ತಿದೆ. ನಮಗೂ ಅಂತಹ ಅನುಭವಗಳು ಆಗಿವೆ. ಹೀಗಾಗಿ ಆಟಗಾರರನ್ನು ತಂಡದಿಂದ ಕೈಬಿಟ್ಟಾಗ ಅವರ ದೃಷ್ಟಿಕೋನದಿಂದ ಅವರು ಹೇಗೆ ಯೋಚಿಸುತ್ತಾರೆ ಎಂಬುದನ್ನು ನಾನು ಕೂಡ ಯೋಚಿಸುತ್ತಿದೆ ಎಂದು ಕಿರಣ್ ಮೋರೆ ಹೇಳಿದ್ದಾರೆ.
ಇನ್ನು ಧೋನಿಯವರನ್ನು ತಂಡಕ್ಕೆ ನಾವೇ ಆಯ್ಕೆ ಮಾಡಿಕೊಂಡಿರುವುದು ಅಂತ ತುಂಬಾ ಜನ ಹೇಳಿಕೊಳ್ಳುತ್ತಾರೆ. ಆದ್ರೆ ಧೋನಿಯವರನ್ನು ನಾವೇ ಆಯ್ಕೆ ಮಾಡಿಕೊಂಡಿರುವುದು. ಐವರು ಆಯ್ಕೆ ಸಮಿತಿ ಸದಸ್ಯರು ಚರ್ಚೆ ಮಾಡಿ ಆಯ್ಕೆ ಮಾಡಿರುವುದು ಎಂದು ಕಿರಣ್ ಮೋರೆ ಅವರು ತಿಳಿಸಿದ್ದಾರೆ.

Tags: bccigreg chappelIndian cricketkliran moreM.S DhoniRahul DravidSachin TendulkarSourav Gangulyteam india
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram