Bengaluru: ಬುದ್ದಿ ಹೇಳಬೇಕಾದ ತಂದೆ ಮಗನನ್ನು ತಪ್ಪು ದಾರಿಗೆ ಎಳೆದ
1 min read
ಬುದ್ದಿ ಹೇಳಬೇಕಾದ ತಂದೆ ಮಗನನ್ನು ತಪ್ಪು ದಾರಿಗೆ ಎಳೆದ
ಬೆಂಗಳೂರು : ಗಾಂಜಾ ದಂಧೆಯಲ್ಲಿ ತೊಡಗಿದ್ದ ಆರೋಪಿಯನ್ನು ಎಚ್.ಎಸ್.ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಸಾಧಿಕ್ ಬಂಧಿತ ರೋಪಿ ಎಂದು ಗುರುತಿಸಲಾಗಿದೆ.
ಏಪ್ರಿಲ್ 12ರಂದು ಎಚ್.ಎಸ್.ಆರ್ ಲೇಔಟ್ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಟಿವಿಎಸ್ ಎಕ್ಸೆಲ್ ನಲ್ಲಿ ತಿರುಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 5 ಕೆ.ಜಿ 300 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಬಳಿಕ ಹೆಚ್ಚಿನ ವಿಚಾರಣೆ ವೇಳೆ ಆರೋಪಿಯು ತನ್ನ ತಂದೆ ಅಮೀರ್ ಜೊತೆಗೂಡಿ, ಒಡಿಶಾದಿಂದ ತಮಿಳುನಾಡಿಗೆ ಗಾಂಜಾ ತರಿಸಿಕೊಂಡು ಬಳಿಕ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದುದಾಗಿ ಹೇಳಿದ್ದಾರೆ. ಆರೋಪಿಯ ಮಾಹಿತಿ ಮೇರೆಗೆ ಒಟ್ಟು 52.50 ಲಕ್ಷ ಮೌಲ್ಯದ 105 ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸದ್ಯ ಮಗ ಸಾಧಿಕ್ ಬಂಧನದ ನಂತರ ತಂದೆ ಅಮೀರ್ ನಾಪತ್ತೆಯಾಗಿದ್ದು ಹೆಚ್.ಎಸ್.ಆರ್ ಲೇಔಟ್ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.