ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು 33ನೇ ಸಿಸಿಹೆಚ್ ನ್ಯಾಯಾಲಯ ಸೆ.14ರವರೆಗೆ(ಸೋಮವಾರ) ಮುಂದೂಡಿದೆ.
ನಟಿ ರಾಗಿಣಿ ಪರ ವಕೀಲರು ಜಾಮೀನು ಕೋರಿ ಬೆಂಗಳೂರಿನ 33ನೇ ಸಿಸಿಹೆಚ್ ಕೋರ್ಟ್ಗೆ ನಿನ್ನೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ದಾಖಲಿಸಿಕೊಂಡಿದ್ದ ಕೋರ್ಟ್ ಇಂದು ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು.
ಇಂದು ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಸಿಸಿಬಿ ಪೊಲೀಸರಿಗೆ ನೋಟಿಸ್ ನೀಡಿದೆ. ಕೋರ್ಟ್ ನೀಡಿದ ನೋಟಿಸ್ಗೆ ಸಿಸಿಬಿ ಪೊಲೀಸರು ಉತ್ತರ ನೀಡಬೇಕು ಅಥವಾ ಆಕ್ಷೇಪಣೆ ಸಲ್ಲಿಸಬೇಕು. ಪ್ರಕರಣದ ತನಿಖೆ ಕುರಿತ ಕೇಸ್ ಡೈರಿಯನ್ನು ಸಲ್ಲಿಸಬೇಕು. ಈ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದ್ದು, ನಟಿ ರಾಗಿಣಿಗೆ ಸೆ.14ರವರೆಗೆ ಬಿಡುಗಡೆಯ ಭಾಗ್ಯವಾಗಲಿ, ರಿಲೀಫ್ ಆಗಲಿ ಸಿಕ್ಕಿಲ್ಲ.
ಆರೋಪಿಯು ಪೊಲೀಸರ ಕಸ್ಟಡಿಯಲ್ಲಿರುವಾಗ ಕೋರ್ಟ್ಗಳು ಜಾಮೀನು ಕೊಡಲು ಬರುವುದಿಲ್ಲ. ಇಂದು ಎನ್ಡಿಪಿಎಸ್ ಕೋರ್ಟ್ನಲ್ಲಿ ರಾಗಿಣಿ ಸಿಸಿಬಿ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ವಿಚಾರಣೆ ಇದೆ. ಒಂದು ವೇಳೆ ಎನ್ಡಿಪಿಎಸ್ ಕೋರ್ಟ್ ರಾಗಿಣಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರೆ ಮಾತ್ರ ಜಾಮೀನು ವಿಚಾರಣೆ ಕೈಗೆತ್ತಿಕೊಳ್ಳಲು ಮತ್ತೊಂದು ಕೋರ್ಟ್ಗೆ ಅವಕಾಶ ಇದೆ. ಈ ಕಾರಣಕ್ಕೆ ಇಂದು ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೋಮವಾರಕ್ಕೆ ಮುಂಡೂಡಿದೆ.
175 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಿ, ರೈತರ ಸಾಲ ಮನ್ನಾ ಮಾಡಿ, ಹಣ ಬಿಡುಗಡೆ ಬಗ್ಗೆ ನಿಖರವಾಗಿ ತಿಳಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಸಚಿವ ನಾಗೇಂದ್ರ ರಾಜೀನಾಮೆ ನೀಡುವುದು ಖಚಿತ, ನಮ್ಮ ಹೋರಾಟಕ್ಕೆ ಬೆಲೆ ಸಿಗಲಿದೆ ಬೆಂಗಳೂರು, ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬರಗಾಲ ಘೋಷಣೆ ಮಾಡಿದೆ. ಆದರೆ 175 ತಾಲೂಕುಗಳಲ್ಲಿ ಬರ...








