ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ : ಇಲ್ಲಿನವರೆಗಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ…

Namratha Rao by Namratha Rao
October 23, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ : ಇಲ್ಲಿನವರೆಗಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ…

ಬಾಲಿವುಡ್ ನ ಸ್ಟಾರ್ ನಟ ಶಾರುಖ್ ಪುತ್ರ ಆರ್ಯನ್ ಖಾನ್ ಡ್ರಗ್ ಲಿಂಕ್ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿದ್ದು ಈವರೆಗೂ ಜೈಲಿನಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಅಲ್ಲದೇ ಆರ್ಯನ್ ಖಾನ್ ಜಾಮೀನು ಅರ್ಜಿ ಸತತವಾಗಿ ತಿರಸ್ಕಾರವಾಗುತ್ತಲೇ ಇದೆ. ಅಕ್ಟೋಬರ್ 20 ರಂದು ಮತ್ತೆ ಮುಂಬೈನ ವಿಶೇಷ ನ್ಯಾಯಾಲಯವು ಆರ್ಯನ್ ಖಾನ್ ಜಾಮೀನು ಅರ್ಜಿ ವಜಾಗೊಳಿಸಿದೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ಹೀಗಾಗಿ ಆರ್ಯನ್ ಈವರೆಗೂ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಅಕ್ಟೋಬರ್ 3ರಂದು ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರ ನೆರವಿನೊಂದಿಗೆ, ಎನ್‌ಸಿಬಿಯ ಮುಂಬೈ ಘಟಕವು ನಗರ ಕರಾವಳಿಯಲ್ಲಿ ಒಂದು ಐಶಾರಾಮಿ ಕ್ರೂಸ್ ಹಡಗಿನಲ್ಲಿ ಪಾರ್ಟಿ ನಡೆಸುತ್ತಿದ್ದ ವೇಳೆ  ದಾಳಿ ಮಾಡಿತು. ಈ ವೇಳೆ ಆರ್ಯನ್ ಖಾನ್ ಮತ್ತು ಇತರ ಅನೇಕರನ್ನು ಈ ವೇಳೆ ಬಂಧಿಸಲಾಗಿತ್ತು. ಅಲ್ಲದೇ ಸ್ಥಳದಲ್ಲಿ ಡ್ರಗ್ಸ್ ಕೂಡ ಪತ್ತೆಯಾಗಿತ್ತು. ಇದಾದ ನಂತರದಲ್ಲಿ ಸಮೀರ್ ವಾಂಖೇಡೆ ಅವರನ್ನ ಕೆಲವರು ಫಾಲೋ ಮಾಡ್ತಿದ್ದು ಜೀವ ಬೆದರಿಕೆಯಿದೆ ಎಂದು ಸಮೀರ್ ಅವರು ದೂರು ಕೂಡ ದಾಖಲು ಮಾಡಿದ್ರು.

ಬಂಧನವಾದ ನಂತರದಿಂದ ಶಾರುಖ್ ಪುತ್ರನನ್ನ ನೋಡಿರಲಿಲ್ಲ. ಇತ್ತೀಚೆಗೆ ಅಂದ್ರೆ ಅಕ್ಟೋಬರ್ 21 ಕ್ಕೆ ಪುತ್ರನನ್ನ ನೋಡಲು ಶಾರುಖ್ ಜೈಲಿಗೆ ತೆರಳಿದ್ದರು. ಕೆಲ ಕಾಲ ಮಗನ ಜೊತೆಗೆ ಮಾತನಾಡಿದ್ದ ಶಾರುಖ್ ಪುತ್ರನ ಮಾತುಗಳನ್ನ ಕೇಳಿ ಭಾವುಕರಾಗಿದ್ದರು ಎಂದು ವರದಿಯಾಗಿತ್ತು. ಈ ಸಂಬಂಧಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಅಂದ್ಹಾಗೆ ಅಕ್ಟೋಬರ್ 03ರಂದು ಆರ್ಯನ್ ಖಾನ್, ಅವರ ಗೆಳೆಯ ಅರ್ಬಾಜ್ ಸೇಠ್ ಮರ್ಚೆಂಟ್ ಹಾಗೂ ಮುನ್‌ಮುನ್ ಧಮೇಚಾ ಅವರುಗಳನ್ನು ಎನ್‌ಸಿಬಿ ಬಂಧಿಸಿತು. ಎನ್‌ಸಿಬಿಯು ಆರ್ಯನ್ ಖಾನ್ ಅನ್ನು ಬಂಧಿಸಿದಾಗ ಆರ್ಯನ್ ಬಳಿ ಯಾವುದೇ ಮಾದಕ ವಸ್ತು ಇರಲಿಲ್ಲ. ಆದರೆ ಅರ್ಬಾಜ್ ಮರ್ಚೆಂಟ್‌ ಬಳಿ ಸ್ವಲ್ಪ ಪ್ರಮಾಣದ ಚರಸ್ ದೊರೆತಿತ್ತು.

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಪುತ್ರನನ್ನ ಶಾರುಖ್ ಭೇಟಿಯಾಗಿ ಬಂದ ದಿನವೇ ಶಾರುಖ್ ಖಾನ್ ಹಾಗೂ ಅನನ್ಯಾ ಪಾಂಡೆ ಮನೆಗಳ ಮೇಲೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಬಗ್ಗೆಗಿನ ವಿಡಿಯೋಗಳು ಕೂಡ ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಇದಾದ ನಂತರದಲ್ಲಿ ಅನನ್ಯಾ ಪಾಂಡೆ ವಿರುದ್ಧ ಡ್ರಗ್ ಕೇಸ್ ಸಂಬಂಧಿತ ಅನುಮಾನಗಳು ಹುಟ್ಟಿಕೊಂಡಿದ್ವು. ಆದ್ರೆ ಇದಕ್ಕೆಲ್ಲಾ ಅನನನ್ಯಾ ಪಾಂಡೆ ಸ್ಪಷ್ಟನೆ ನೀಡಿದ್ದರು.

ಜಾಮೀನು ಅರ್ಜಿಯನ್ನು ವಿಶೇಷ ಡ್ರಗ್ಸ್ ಕೋರ್ಟ್ ತಿರಸ್ಕರಿಸಿದ ನಂತರ ಆರ್ಯನ್ ಖಾನ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಜೈಲಿನಲ್ಲಿದ್ದಾರೆ. ಮತ್ತೊಂದೆಡೆ ಬಾಂಬೆ ಹೈಕೋರ್ಟ್ ಮೊರೆ ಹೋಗುವುದಾಗಿ ಆರ್ಯನ್ ಪರ ವಕೀಲರು ಹೇಳಿದ್ದಾರೆ. ಈ ಎಲ್ಲಾ ಬೆಳವಣಿಗಳ ನಡುವೆ ಆರ್ಯನ್ ಖಾನ್ ತಾಯಿ ಗೌರಿ ಖಾನ್ ತೀರ ಮಾನಸಿಕವಾಗಿ ನೊಂದಿದ್ದಾರೆ ಎನ್ನಲಾಗ್ತಿದೆ.

ಹಿರಿಯ ವಕೀಲರಾದ ಸತೀಶ್ ಮನೆಶಿಂಡೆ ಮತ್ತು ಅಮಿತ್ ದೇಸಾಯಿ ಅವರನ್ನು ಒಳಗೊಂಡ ಆರ್ಯನ್ ಖಾನ್ ಪರ ಕಾನೂನು ತಂಡವು ಆರ್ಯನ್ ಜಾಮೀನು ಕೊಡಿಸುವುದಕ್ಕೆ ಶತಾಯಗತಾಯ ಪ್ರಯತ್ನ ಮಾಡ್ತಿದೆ.  ಆರ್ಯನ್ ಪರ ವಕೀಲರ ವಾದಗಳೇನು..? ಆತನಿಂದ ಯಾವುದೇ ಮಾದಕ ವಸ್ತುಗಳನ್ನ ವಶಕ್ಕೆ ಪಡೆಯಲಾಗಿಲ್ಲ. ಆಪಾದಿತ WhatsApp ಚಾಟ್‌ಗಳು ಪ್ರಸ್ತುತ ಪ್ರಕರಣಕ್ಕೆ ಸಂಪರ್ಕ ಹೊಂದಿಲ್ಲ

ನಿಜವಾಗಿದ್ದರೂ, ಆರೋಪಗಳು ‘ಸಣ್ಣ ಪ್ರಮಾಣ’ ಮತ್ತು ‘ಬಳಕೆ’ಗೆ ಮಾತ್ರ ಸಂಬಂಧಿಸಿವೆ ಎಂಬುದು ಆರ್ಯನ್ ಪರ ವಕೀಲರ ವಾದಗಗಳು

NCB ವಾದವೇನು..?

ಆರ್ಯನ್‌ನ ಸ್ನೇಹಿತ ಅರ್ಬಾಜ್ ಮರ್ಚೆಂಟ್‌ನಿಂದ ವಶಪಡಿಸಿಕೊಂಡ ಡ್ರಗ್ಸ್

ಇಬ್ಬರಿಗೂ WhatsApp ಚಾಟ್‌ಗಳು ‘ಅಂತರರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆ’ಯನ್ನು ಸೂಚಿಸುತ್ತವೆ

ಆರ್ಯನ್ ಖಾನ್ ಪಿತೂರಿಯಲ್ಲಿ ಭಾಗಿಯಾಗಿದ್ದರಿಂದ ಪತ್ತೆಯಾದ ಡ್ರಗ್ಸ್ ಪ್ರಮಾಣವು ಅಪ್ರಸ್ತುತವಾಗಿದೆ.shahrukh saaksha tv

ಆರೋಪಿಗಳ ಬಿಡುಗಡೆಯಿಂದ ತನಿಖೆಗೆ ಅಡ್ಡಿಯಾಗುತ್ತದೆ ಎಂಬುದು NCB ವಾದ

ಪ್ರಕರಣ ಸಂಬಂಧ ಯಾರೆಲ್ಲಾ ಯಾವ ರೀತಿ ಪ್ರತಿಕ್ರಿಯಿಸಿದ್ರು..?

ಬಂಧನದ ನಂತರ ಖಾನ್ ಕುಟುಂಬ ಬಹಿರಂಗವಾಗಿ  ಏನನ್ನೂ ಹೇಳಿಲ್ಲ. ಆದಾಗ್ಯೂ, ಕೆಲವು ಬಾಲಿವುಡ್ ತಾರೆಯರು ಮತ್ತು ರಾಜಕಾರಣಿಗಳಿಂದ ಪ್ರತಿಕ್ರಿಯೆಗಳು ಬಂದಿವೆ.

ನಟ ಸುನೀಲ್ ಶೆಟ್ಟಿ ಈ ಬಗ್ಗೆ ಮಾತನಾಡಿ ಆರ್ಯನ್ ಖಾನ್ ಇನ್ನೂ ಮಗು.. ಉಸಿರಾಡಲು ಬಿಡಿ. ನೀವಾಗಿಯೇ ತೀರ್ಮಾನಕ್ಕೆ ಹೋಗಬೇಡಿ ಎಂದು ಕೇಳಿಕೊಂಡಿದ್ದರು.

ಚಿತ್ರ ನಿರ್ದೇಶಕಿ ಪೂಜಾ ಭಟ್ ಟ್ವಿಟ್ಟರ್‌ನಲ್ಲಿ “ನಾನು ನಿಮ್ಮೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತೇನೆ. ಶಾರುಖ್.  ಇದು ಕೂಡ ಹಾದುಹೋಗುತ್ತದೆ” ಎಂದಿದ್ರು.

ನಟ ಹೃತಿಕ್ ರೋಷನ್ ಇನ್ಸ್ಟಾಗ್ರಾಮ್ ನಲ್ಲಿ ಆರ್ಯನ್ ಅವರನ್ನು ಉದ್ದೇಶಿಸಿ ಬರೆದ ಮನದಾಳದ ಪತ್ರವನ್ನು ಪೋಸ್ಟ್ ಮಾಡಿದ್ರು. “ದೇವರು ಕರುಣಾಮಯಿ. ಅವರು ಕಠಿಣ ಪರಿಸ್ಥಿತಿಗಳನ್ನ ಎದುರಿಸುವ ಶಕ್ತಿ ಹೊಂದಿರುವವರತ್ತ ಮಾತ್ರ  ಕಠಿಣವಾದ ಚೆಂಡುಗಳನ್ನು ನೀಡುತ್ತಾರೆ ಎಂದಿದ್ದರು.

ನಿರ್ದೇಶಕರಾದ ಫರಾ ಖಾನ್ ಮತ್ತು ಕರಣ್ ಜೋಹರ್ ಸೇರಿದಂತೆ ಇತರರು ಮುಂಬೈನ ಬಾಂದ್ರಾದಲ್ಲಿರುವ ಖಾನ್ ಕುಟುಂಬದ ಮನೆಯಾದ ಮನ್ನತ್‌ಗೆ ಭೇಟಿ ನೀಡಿ ಧೈರ್ಯ ತುಂಬಿದ್ರು. ಅಷ್ಟೇ ಅಲ್ಲ ಬಾಲಿವುಡ್ ನ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಕೂಡ ಶಾರುಖ್ ಮನೆಗೆ ಭೇಟಿ ಕೊಟ್ಟಿದ್ರು.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರ್ಯನ್ ಖಾನ್ ಅವರ ಮುಸ್ಲಿಂ ಉಪನಾಮದಿಂದಾಗಿ ಕಾನೂನು ಜಾರಿ ಸಂಸ್ಥೆಗಳಿಂದ ಗುರಿಯಾಗುತ್ತಿದ್ದಾರೆ ಎಂದು ಹೇಳಿದ್ದರು.  ಇತ್ತ ಪ್ರಕರಣದ ಕುರಿತು ಕೇಳಲಾದ ಪ್ರಶ್ನೆಗೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು “ಧ್ವನಿಯಿಲ್ಲದ ಮತ್ತು ದುರ್ಬಲರಿಗಾಗಿ ಹೋರಾಡುತ್ತೇನೆ, ಅವರ ತಂದೆ ಶಕ್ತಿಶಾಲಿಗಳಿಗಾಗಿ ಅಲ್ಲ” ಎಂದು ಹೇಳಿದ್ದರು.

ಏತನ್ಮಧ್ಯೆ, ಮಹಾರಾಷ್ಟ್ರದ ಸಚಿವ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ನವಾಬ್ ಮಲಿಕ್ ಅವರು ಕ್ರೂಸ್ ಮೇಲೆ ಎನ್ಸಿಬಿಯ ದಾಳಿಯು ‘ನಕಲಿ’ ಎಂದು ಆರೋಪಿಸಿದರು ಮತ್ತು ಬಿಜೆಪಿಯು

ಸರ್ಕಾರ ಮತ್ತು ಬಾಲಿವುಡ್ ಅನ್ನು ಮಾನನಷ್ಟಗೊಳಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದೆ” ಎಂದು ಆರೋಪಿಸಿದ್ದರು.

ಮುಂಬೈನ ಥಿಯೇಟರ್ ಗಳಲ್ಲಿ “ವೇನಂ” ಸೀಕ್ವೆಲ್ ರಿಲೀಸ್ – ಸಿನಿಪ್ರಿಯರು ಖುಲ್ ಖುಷ್  

 

Tags: #saakshatvaryan khanBailBollywoodcruisedrugs casegowri khanindiaLawmumbaincbsharuk khan
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram