ಭುವನೇಶ್ವರ್ : ಕುಡಿದ ಅಮಲಿನಲ್ಲಿ ಜಗಳವಾಡಿದ ವ್ಯಕ್ತಿಯೊಬ್ಬ ಸ್ನೇಹಿತನ ಗುಪ್ತಾಂಗವನ್ನೇ ಕಟ್ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
ಒಡಿಶಾದ ಕೇಂದ್ರಪಾರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಜಗಳದ ನಂತರ ಸ್ನೇಹಿತನ ಗುಪ್ತಾಂಗ ಕಟ್ ಮಾಡಿದ್ದಾನೆ. ಭಗಬತ್ ದಾಸ್ (30) ಮತ್ತು ಆತನ ಸ್ನೇಹಿತ ಅಕ್ಷಯ್ ರೌತ್ (32) ಪೆಂಥಾ ಬೀಚ್ನಲ್ಲಿ ಮದ್ಯ ಸೇವಿಸಿದ್ದರು. ಈ ಸಂದರ್ಭದಲ್ಲಿ ಅವರ ಮಧ್ಯೆ ಜಗಳ ನಡೆದಿದೆ. ಈ ಜಗಳ ವಿಕೋಪಕ್ಕೆ ತೆರಳುತ್ತಿದ್ದಂತೆ ಅಕ್ಷಯ್ ಅಲ್ಲೇ ಇದ್ದ ಹರಿತವಾದ ಆಯುಧದಿಂದ ಭಗಬತ್ ದಾಸ್ನ ಗುಪ್ತಾಂಗವನ್ನು ಕತ್ತರಿಸಿ ಹಾಕಿದ್ದಾನೆ. ಘಟನೆ ನಂತರ ಅಕ್ಷಯ್ ಸ್ಥಳದಿಂದ ಓಡಿ ಹೋಗಿದ್ದಾನೆ.
ಭಗಬತ್ನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಘಟನೆಗೆ ಕುರಿತು ಪ್ರಕರಣ ದಾಖಲಾಗಿದೆ.