ವಲಸಿಗ ಸಚಿವರಿಗೆ ಡಮ್ಮಿ ಖಾತೆ : ಡಿ.ಕೆ.ಶಿವಕುಮಾರ್
ಬೆಂಗಳೂರು : ವಲಸಿಗ ಸಚಿವರಿಗೆ ಡಮ್ಮಿ ಖಾತೆ ನೀಡಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಖಾತೆ ಹಂಚಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಖಾತೆ ಹಂಚಿಕೆ ಮತ್ತು ಬಿಜೆಪಿಯಲ್ಲಿನ ಅಸಮಾಧಾನದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ನಿಂದ ಹೋಗಿ ಬಿಜೆಪಿ ಸೇರಿರುವ ಶಾಸಕರಿಗೆ ಅನ್ಯಾಯವಾಗಿದೆ.
ವಲಸಿಗ ಸಚಿವರಿಗೆ ಡಮ್ಮಿ ಖಾತೆಗಳನ್ನು ನೀಡಿದ್ದಾರೆ. ಆ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ವಲಸಿಗರನ್ನು ಯೂಸ್ ಅಂಡ್ ಥ್ರೋ ಮಾಡಿದಾರೆ ಎಂದು ಕುಟುಕಿದ್ದಾರೆ.
ನಾನು ವಿಧಾನಸಭೆಯಲ್ಲಿ ಈ ಮೊದಲೇ ಹೇಳಿದ್ದೆ.ನೀವೆಲ್ಲ ರಾಜಕೀಯವಾಗಿ ಸಮಾಧಿ ಆಗುತ್ತಿದ್ದರೆಂದು. ಈಗ ನೋಡಿ ಯಾವ್ಯಾವ ಖಾತೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಐಸಿಯು, ವೆಂಟಿಲೇಟರ್ ನಲ್ಲಿ ನಡೆಯುತ್ತಿದೆ.
ಗೋಪಾಲಯ್ಯ, ಎಂಟಿಬಿ ನಾಗರಾಜ್, ನಾರಾಯಣಗೌಡ, ರೋಷನ್ ಬೇಗ್ ಅವರ ಕಥೆ ಈಗ ಏನಾಗಿದೆ ನೋಡಿ. ಎಂಟಿಬಿ ನಾಗರಾಜ್ ಗೆ ಈ ಮೊದಲು ವಸತಿ ಖಾತೆ ಇತ್ತು. ಪಾಪ ಈಗ ಅಬಕಾರಿ ಖಾತೆ ಕೊಟ್ಟಿದ್ದಾರೆ. ವಲಸಿಗರನ್ನೆಲ್ಲ ಯೂಸ್ ಅಂಡ್ ಥ್ರೋ ಮಾಡಿದ್ದಾರೆ ಎಂದು ಡಿಕೆಶಿ ಪುನರುಚ್ಚರಿಸಿದರು.