ಜನ ನೇಣು ಹಾಕಿಕೊಳ್ಳಬೇಕಾ : ಸದಾನಂದ ಗೌಡ ವಿರುದ್ಧ ಡಿಕೆಶಿ ಗರಂ
ಬೆಂಗಳೂರು : ಲಸಿಕೆ ಉತ್ಪಾದನೆ ಆಗದಿದ್ದರೇ ನಾವು ನೇಣು ಹಾಕಿಕೊಳ್ಳಬೇಕಾ ಎಂದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಲಸಿಕೆ ಕೇಳಿದರೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ನೇಣುಹಾಕಿಕೊಳ್ಳಬೇಕಾ ಎಂದು ಕೇಳುತ್ತಾರೆ. ಹಾಗಾದ್ರೆ ಜನ ನೇಣು ಹಾಕಿಕೊಳ್ಳಬೇಕಾ ಹೇಳಿ ಎಂದು ತಿರುಗೇಟು ನೀಡಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಡಿವಿ ಸದಾನಂದ ಗೌಡರ ವಿರುದ್ಧ ಮುಗಿಬಿದ್ದರು. ಕೇಂದ್ರ ಸಚಿವ ಸದಾನಂದಗೌಡರು ನೇಣುಹಾಕಿಕೊಳ್ಳಬೇಕಾ ಎಂದು ಪ್ರಶ್ನಿಸಿದ್ದಾರೆ. ಲಸಿಕೆ ಕೇಳಿದರೆ ನೇಣುಹಾಕಿಕೊಳ್ಳಬೇಕಾ ಎನ್ನುತ್ತೀರಿ. ಹಾಗಾದರೆ ಲಸಿಕೆ ಸಿಗುತ್ತಿಲ್ಲ, ಜನ ನೇಣು ಹಾಕಿಕೊಳ್ಳಬೇಕಾ ಎಂದು ಪ್ರಶ್ನಿಸಿದರು.
ಇನ್ನು ನೀವು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾಗಿದ್ದೀರಿ. ನಿಮ್ಮನ್ನಲ್ಲದೆ ಯಾರನ್ನು ಕೇಳಬೇಕು ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಸಾವಿನ ಮೆರವಣಿಗೆ ನಡೆಯುತ್ತಿದೆ. ರೆಮ್ ಡಿಸಿವಿರ್ ಸೇರಿದಂತೆ ವಿವಿಧ ಪರಿಕರಗಳ ಖರೀದಿಗೆ ಗ್ಲೋಬಲ್ ಟೆಂಡರ್ ಕರೆಯಲು ಮುಂದಾಗಿದ್ದೀರಿ. ಎಲ್ಲೆಲ್ಲಿ ಎಷ್ಟೆಷ್ಟು ಪಸೆರ್ಂಟೇಜ್ ಕಮಿಷನ್ ನಡೆಯುತ್ತಿದೆ ಎಂದು ಗೊತ್ತಾಗುತ್ತಿದೆ. ಅಲ್ಲದೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ವ್ಯಾಕ್ಸಿನ್ ಬೆಲೆಗೂ, ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿರುವ ಬೆಲೆಗೂ ತುಂಬಾ ವ್ಯತ್ಯಾಸ ಇದೆ. ನಾವು ಸುಮ್ಮನೆ ಬಿಡುವುದಿಲ್ಲ, ಜನರ ಪರವಾಗಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.