ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೆಲವೇ ಕ್ಷಣಗಳ ಹಿಂದೆ ಭಾರೀ ಭೂಕಂಪನದ ಅನುಭವವಾಗಿದೆ. ದೆಹಲಿ ಕೇಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಭೂಮಿ ಕಂಪಿಸಿದ ಅನುಭವವಾಗಿದೆ.
ಭೂಮಿ ಕಂಪಿಸಿರುವ ಅನುಭವವಾಗಿರುವ ಬಗ್ಗೆ ಸಾರ್ವಜನಿಕರು ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಳ್ಳುತ್ತಿದ್ದಾರೆ. ದೆಹಲಿಯಲ್ಲಿ ಭಾರಿ ಭೂಕಂಪನ ಆಗುವ ಸಾಧ್ಯತೆ ಇದೆ ಎಂದು ಭೂವಿಜ್ಞಾನಗಳು ಈ ಹಿಂದೆಯೇ ಎಚ್ಚರಿಸಿದ್ದರು.
ಜೂನ್.3ರಂದು ದೆಹಲಿಯಲ್ಲಿ ಮಧ್ಯಮ ಪ್ರಮಾಣದ ಭೂಕಂಪನವಾಗಿತ್ತು. ಅಂದಿನ ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.2ರಷ್ಟು ದಾಖಲಾಗಿತ್ತು. ಅದಕ್ಕೂ ಮುಂಚೆ ಏಪ್ರಿಲ್ 12 ಹಾಗೂ ಮೇ.29ರಂದು ಸಣ್ಣ ಪ್ರಮಾಣದಲ್ಲಿ ಭೂಕಂಪನವಾಗಿತ್ತು.
ತಜ್ಞರ ಪ್ರಕಾರ ಸಣ್ಣ ಪ್ರಮಾಣದಲ್ಲಿ ಆದ ಭೂಕಂಪನಗಳು ಮುಂದೆ ದೊಡ್ಡದೊಂದು ಭೂಕಂಪನವಾಗಲಿದೆ ಎಂಬುದರ ಮುನ್ಸೂಚನೆ ಎಂದಿದ್ದಾರೆ. ಇತ್ತೀಚಿನ ಮಾಹಿತಿ ಪ್ರಕಾರ ಭೂಕಂಪನದಿಂದ ಯಾವುದೇ ಪ್ರಾಣ-ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ದೆಹಲಿಯಿಂದ 63 ಕಿ.ಮೀ ದೂರದಲ್ಲಿರುವ ಹರಿಯಾಣದ ಗುರುಗ್ರಾಮದಲ್ಲೂ ಭೂಕಂಪನವಾಗಿದೆ. ಈ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.5ರಷ್ಟು ದಾಖಲಾಗಿದೆ.
ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ
ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...








