ರಾಂಚಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ED) ದೊಡ್ಡ ಬೇಟೆಯಾಡಿದೆ. ರಾಂಚಿಯ (Ranchi) ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಅಪಾರ ಪ್ರಮಾಣದ ಹಣ ವಶಕ್ಕೆ ಪಡೆಯಲಾಗಿದೆ.
ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ,(Jharkhand Rural Development Minister ) ಕಾಂಗ್ರೆಸ್ ನಾಯಕ ಆಲಂಗೀರ್ ಆಲಂ ಅವರ ವೈಯಕ್ತಿಕ ಕಾರ್ಯದರ್ಶಿ ಸಂಜೀವ್ ಲಾಲ್ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಸುಮಾರು 20 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದೆ.
ಜಾರ್ಖಂಡ್ನಲ್ಲಿ ಮುಖ್ಯ ಎಂಜಿನಿಯರ್ ಆಗಿದ್ದ ವೀರೇಂದ್ರ ಕೆ ರಾಮ್ ಅವರು 100 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ವೀರೇಂದ್ರ ಕೆ ರಾಮ್ ಅವರನ್ನು ಫೆಬ್ರವರಿ 2023 ರಲ್ಲಿ ಇಡಿ ಬಂಧಿಸಿತ್ತು. ಕೆಲವು ಯೋಜನೆಗಳ ಅನುಷ್ಠಾನದಲ್ಲಿನ ಅಕ್ರಮ ಎಸಗಲು ಅಕ್ರಮವಾಗಿ ಅಕ್ರಮ ಹಣ ಪಡೆದಿದ್ದಾರೆಂದು ಬಂಧಿಸಲಾಗಿತ್ತು. ವೀರೇಂದ್ರ ಜಾರ್ಖಂಡ್ನ ಕೆಲವು ರಾಜಕಾರಣಿಗಳೊಂದಿಗಿನ ವ್ಯವಹಾರ ಇಟ್ಟುಕೊಂಡಿರುವ ಮಾಹಿತಿ ಇರುವ ಪೆನ್ ಡ್ರೈವ್ ಸಿಕ್ಕಿದೆ. ಈ ಕುರಿತು ಅಧಿಕಾರಿಗಳು ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.