ಉರ್ದು ಶಾಲೆಗಳನ್ನ ಮುಚ್ಚುವ ಪ್ರಶ್ನೆಯೇ ಇಲ್ಲ – B C ನಾಗೇಶ್ ಸ್ಪಷ್ಟನೆ..
ಉರ್ದು ಶಾಲೆಗಳನ್ನ ಮುಚ್ಚುವ ಪ್ರಶ್ನೆಯೇ ಇಲ್ಲ ಉತ್ತಮ ಶಿಕ್ಷಣಕ್ಕೆ ನೀಡುವ ಉದ್ದೇಶದಿಂದ ಒಂಟಿ ಶಾಲೆಗಳನ್ನ ವಿಲಿನಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.
ಇಂದಿನಿಂದ ಪಿಯುಸಿ ಪರೀಕ್ಷೆ ಆರಂಭವಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಜೂನಿಯರ್ ಕಾಲೇಜಿನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪರಿಶೀಲಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ 9671 – 4,597 ಬಾಲಕರು, 5074 ಬಾಲಕಿಯರು ಹದಿನೆಂಟು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
ಇದೇ ವೇಳೆ ಮಾತನಾಡಿದ ಶಿಕ್ಷಣ ಸಚಿವರು ಮಕ್ಕಳು ತುಂಬಾ ವಿಶ್ವಾಸದಲ್ಲಿದ್ದಾರೆ. ರಾಜ್ಯದಲ್ಲಿ ಬಾಲಕರು, ಬಾಲಕಿಯರು ಸಮಪಾಲು ಬರೆಯುತ್ತಿದ್ದಾರೆ. ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಗೈರಾಗುವುದು ಸಾಮಾನ್ಯ. ಆದರೆ, ಎಸ್ಎಸ್ಎಲ್ಸಿ ರೀತಿ ಪಿಯುಸಿಯಲ್ಲಿ ಗೈರು ಹಾಜರಾಗುವುದಿಲ್ಲ. ಪರೀಕ್ಷೆ ಸುಗಮವಾಗಿ ನಡೆಯುವ ವಿಶ್ವಾಸ ಇದೆ ಎಂದರು. ಉರ್ದು ಶಾಲೆ ಮುಚ್ಚುವ ಚಿಂತನೆ ಇಲ್ಲ. ಆದರೆ, ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಒಂಟಿ ಶಾಲೆಗಳನ್ನು ವಿಲೀನ ಮಾಡಲಾಗುವುದು ಎಂದು ಇದೇ ಸಂಭರ್ದದಲ್ಲಿ ಸಚಿವರು ಸ್ಪಪ್ಟಪಡಿಸಿದರು.