ಬೆಂಗಳೂರು: ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ (Muniratna) ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್, ಕುಸುಮಾ ಹಾಗೂ ಹನುಮಂತರಾಯಪ್ಪ ವಿರುದ್ಧ ಮುನಿರತ್ನ ಅವರು ದೂರು ನೀಡಿದ್ದಾರೆ.
ಆದರೆ, ನಂದಿನಿ ಲೇಔಟ್ ಠಾಣೆ ಪೊಲೀಸರು ಮಾತ್ರ ಯಾರ ಹೆಸರೂ ಉಲ್ಲೇಖಿಸದೆ ಝೀರೋ ಎಫ್ಐಆರ್ ದಾಖಲಿಸಿದ್ದಾರೆ. ಹಲ್ಲೆ ಮಾಡಿದವರ ಹೆಸರು ಅಪರಿಚಿತರು ಅಂತ ಎಫ್ಐಆರ್ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ. ಯಾವ ಆರೋಪಿಗಳ ಹೆಸರೂ ಉಲ್ಲೇಖಿಸದೇ ಝೀರೋ ಎಫ್ಐಆರ್ ದಾಖಲಾಗಿದೆ.
ಶಾಸಕರ ಹೇಳಿಕೆ ದಾಖಲಿಸಿ, ಘಟನಾ ಸ್ಥಳದಲ್ಲಿದ್ದ ಪ್ರತ್ಯಕ್ಷ ಸಾಕ್ಷಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೊಬೈಲ್ ವೀಡಿಯೊಗಳ ಸಂಗ್ರಹಿಸಲಾಗಿದೆ. ಸಿಸಿಟಿವಿ ವೀಡಿಯೊಗಳನ್ನ ಸಹ ಪೊಲೀಸರು ಸಂಗ್ರಹಿಸಿದ್ದಾರೆ. ಆದರೆ, ಮೊಟ್ಟೆ ಎಸೆದವರ ಬಗ್ಗೆ ವೀಡಿಯೊಗಳಲ್ಲಿ ದಾಖಲಾಗಿಲ್ಲ. ಹೀಗಾಗಿ ಸಾಕ್ಷಿಗಳ ಹೇಳಿಕೆ ಮೇಲೆ ತನಿಖೆ ನಡೆಯಲಿದೆ.
ಮೊಟ್ಟೆ ಎಸೆದವರು ಎಂದು ಆರೋಪ ಹೊತ್ತವರು ಕೂಡ ಪ್ರತಿದೂರು ದಾಖಲಿಸಿದ್ದಾರೆ. ನಮ್ಮ ಮೇಲೆ ಗುಂಪು ಕಟ್ಟಿ ಹಲ್ಲೆ ಮಾಡಿದ್ದಾರೆ ಎಂದು ವಿಶ್ವನಾಥ, ಕೃಷ್ಣಮೂರ್ತಿ, ಚಂದ್ರು ದೂರು ನೀಡಿದ್ದಾರೆ.








