ಬಕ್ರೀದ್ ಸಂಭ್ರಮ – ಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ….
ದೇಶಾದ್ಯಂತ ಸಂಭ್ರಮದಿಂದ ಬಕ್ರೀದ್ ಹಬ್ಬವನ್ನ ಆಚರಿಸಲಾಗುತ್ತಿದೆ. ಈದ್-ಉಲ್-ಅಝಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ.. “ಈದ್ ಮುಬಾರಕ್! ಶುಭಾಶಯಗಳು ಈದ್-ಉಲ್-ಅಝಾ. ಈ ಹಬ್ಬವು ಮಾನವೀಯತೆಯ ಯೋಗಕ್ಷೇಮ ಮತ್ತು ಸಮೃದ್ಧಿಯ ಚೈತನ್ಯವನ್ನು ಮುಂದುವರಿಸಲು ನಮಗೆ ಸ್ಫೂರ್ತಿ ನೀಡಲಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ದೇಶವಾಸಿಗಳಿಗೆ ಬಕ್ರೀದ್ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಹಬ್ಬವು ತ್ಯಾಗ ಮತ್ತು ಮಾನವ ಸೇವೆಯ ಪ್ರತೀಕವಾಗಿದೆ ಎಂದರು. ಈ ಸಂದರ್ಭವನ್ನು ಮನುಕುಲದ ಸೇವೆಗೆ ಸಮರ್ಪಿಸಿಕೊಂಡು ದೇಶದ ಏಳಿಗೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸೋಣ ಎಂದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಎಲ್ಲರಿಗೂ ಬಕ್ರೀದ್ ಶುಭಾಶಯ ಕೋರಿದ್ದಾರೆ. “ಈ ಶುಭ ಸಂದರ್ಭವು ಎಲ್ಲರಿಗೂ ಒಗ್ಗಟ್ಟಿನ ಮನೋಭಾವವನ್ನು ತರಲಿ ಮತ್ತು ಎಲ್ಲರಿಗೂ ಶಾಂತಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ.” ಎಂದು ಬರೆದುಕೊಂಡಿದ್ದಾರೆ.
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶುಭಾಶಯಗಳನ್ನ ತಿಳಿಸಿದ್ದಾರೆ.