ಆಸ್ತಿ ವಿಚಾರಕ್ಕೆ ಮಲಗಿದ್ದ ತಮ್ಮನನ್ನೆ ಕೊಲೆ ಮಾಡಿದ ಅಣ್ಣ..
ಆಸ್ತಿ ವಿಚಾರಕ್ಕೆ ನಡೆದ ಜಗಳಲ್ಲಿ ಅಣ್ಣ ತಮ್ಮನನ್ನ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೋಕಿನ ಮೆಲ್ಲಹಳ್ಳಿ ಬಳಿ ನಡೆದಿದೆ. 35 ವರ್ಷದ ಗೋವಿಂದ್ ಕೊಲೆಯಾದ ದುರ್ದೈವಿ, ಕೊಲೆ ಮಾಡಿ ಸಹೋದರ ರಂಗಸ್ವಾಮಿ ಪರಾರಿಯಾಗಿದ್ದಾನೆ.
ಜಾಗದ ವಿಚಾರವಾಗಿ ಅಣ್ಣ ತಮ್ಮಂದಿರ ನಡುವೆ ಆಗಾಗಾ ಜಗಳ ನಡೆಯುತ್ತಿತ್ತು,ಶನಿವಾರ ತಡರಾತ್ರಿ ಮನೆಯ ಮುಂಭಾಗದಲ್ಲಿದ್ದ ಶೌಚಾಲಯದ ಕೊಠಡಿಯ ಬೀಗ ಒಡೆದ ಎಂದು ಜಗಳ ತೆಗೆದು ಅಣ್ಣ ಘರ್ಷಣೆಗೆ ಮುಂದಾಗಿದ್ದಾನೆ. ಗೋವಿಂದ ನಾಯ್ಕ ಮತ್ತು ರಂಗಸ್ವಾಮಿ ನಡುವೆ ಮಾತಿನ ಚಕಮಕಿ ನಡೆಯುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಜಗಳ ಬಿಡಿಸಿದ್ದರು.
ನಿನ್ನೆ ರಾತ್ರಿ ತಮ್ಮ ಗೋವಿಂದ್ ಮಲಗಿದ್ದಾಗ ಅಣ್ಣ ರಂಗಸ್ವಾಮಿ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಗಾಯಗೊಂಡ ಗೋವಿಂದನನ್ನ ಕುಟುಂಬಸ್ಥರು ಕೂಡಲೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡೊಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೆ ಆರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ನಾಪತ್ತೆಯಾಗಿದ್ದ ರಂಗಸ್ವಾಮಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elder brother kills his younger brother for property at Mysore