ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಾರ್ವಜನಿಕ ಭಾಷಣಗಳಲ್ಲಿ ಹೇಳಿಕೆ ನೀಡುವಾಗ ಎಚ್ಚರ ವಹಿಸುವಂತೆ ಸ್ಟಾರ್ ಪ್ರಚಾರಕರು ಮತ್ತು ರಾಜಕೀಯ ನಾಯಕರಿಗೆ ಇತ್ತೀಚಿನ ಸಲಹೆಯನ್ನು ಅನುಸರಿಸುವಂತೆ ಚುನಾವಣಾ ಸಮಿತಿಯು ರಾಹುಲ್ ಗಾಂಧಿಗೆ ಎಚ್ಚರಿಸಿದೆ.
ನೀತಿ ಸಂಹಿತೆಯ ಉಲ್ಲಂಘನೆಗಾಗಿ ಪಕ್ಷಗಳು, ಅಭ್ಯರ್ಥಿಗಳು ಮತ್ತು ಸ್ಟಾರ್ ಪ್ರಚಾರಕರು ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಈ ಹಿಂದೆ ನೊಟೀಸ್ ಪಡೆದಿರುವ ಪಕ್ಷದ ಪ್ರಚಾರಕರು ಮತ್ತು ಅಭ್ಯರ್ಥಿಗಳು ಮಾದರಿ ಸಂಹಿತೆ ಪುನರಾವರ್ತಿತವಾಗಿ ಉಲ್ಲಂಘಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಆಯೋಗ ಎಚ್ಚರಿಕೆ ನೀಡಿದೆ.
ಹಿಂದಿನ ವರ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರನ್ನು ಪನೌಟಿ (ಕೆಟ್ಟ ಶಕುನ) ಮತ್ತು ಪಿಕ್ಪಾಕೆಟ್ ಎಂದು ಕರೆದಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ಸೂಚಿಸಿತ್ತು. ಈಗ ಆಯೋಗ ಎಚ್ಚರಿಕೆ ನೀಡಿದೆ.