ಚುನಾವಣೆ ಎಫೆಕ್ಟ್ – ಬೀದರ್ ನಲ್ಲಿ ಕೊರೊನಾಗೆ 55 ಶಿಕ್ಷಕರು ಬಲಿ
ಬೀದರ್ : ಗಡಿ ಜಿಲ್ಲೆ ಬೀದರ್ ನಲ್ಲಿ ಒಟ್ಟು 55 ಶಿಕ್ಷಕರು ಕೊರೊನಾಗೆ ಬಲಿಯಾಗಿದ್ದಾರೆ. ಸಾವನ್ನಪ್ಪಿದ ಶಿಕ್ಷಕರಲ್ಲಿ ಬಹುತೇಕರು ಉಪ ಚುನಾವಣೆ ಹಾಗೂ ನಗರಸಭೆ ಚುನಾವಣೆಗಳಲ್ಲಿ ಭಾಗವಹಸಿದ್ದರು ಎನ್ನಲಾಗಿದೆ.
ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಅನುದಾನಿತ ಶಾಲೆಗಳ ಒಟ್ಟು 48 ಪ್ರೌಢ ಶಾಲಾ ಶಿಕ್ಷಕರು ಹಾಗೂ 7 ಜನ ಪ್ರಾಧ್ಯಾಪಕರು ಕೊರೊನಾಗೆ ಬಲಿಯಾಗಿದ್ದಾರೆ. ಬಸವಕಲ್ಯಾಣದಲ್ಲಿ 15, ಬೀದರ್ ತಾಲೂಕಿನಲ್ಲಿ 16, ಹುಮ್ನಬಾದ್ ನಲ್ಲಿ 4 , ಭಾಲ್ಕಿಯಲ್ಲಿ 7, ಔರಾದ್ ನಲ್ಲಿ 6, ಶಿಕ್ಷಕರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.