ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Election 2023) ಯ ಫಲಿತಾಂಶ ನಾಳೆಗೆ ಹೊರ ಬೀಳಲಿದ್ದು, ಈಗಾಗಲೇ ಬೆಟ್ಟಿಂಗ್ ದಂಧೆ ಆರಂಭವಾಗಿದೆ. ವ್ಯಕ್ತಿಯೊಬ್ಬರು ಬೆಟ್ಟಿಂಗ್ ಗೆ ಜಮೀನನ್ನೇ ಮಾರಾಟ ಮಾಡಲು ಮುಂದಾಗಿರುವ ಪ್ರಸಂಗವೊಂದು ನಡೆದಿದೆ.
ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡ (Yogesh Gowda Betting) ಜಮೀನು ಮಾರಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ (Congress) ಪಕ್ಷದ ಮುಖಂಡ, ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಕೆ.ವೆಂಕಟೇಶ್ (K Venkatesh) ಹಾಗೂ ಜೆಡಿಎಸ್ (JDS) ಅಭ್ಯರ್ಥಿ ಕೆ.ಮಹದೇವ್ ( K Mahadev) ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ.
ಹೀಗಾಗಿ ಪಿರಿಯಾಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆಂದು 1 ಎಕರೆ 37 ಗುಂಟೆ ಜಮೀನು ಬೆಟ್ಟಿಂಗ್ ನಡೆದಿದೆ. ಸದ್ಯ ಯೋಗೇಶ್ ಗೌಡ ಮಾತನಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಿದ್ದರಾಮಯ್ಯ ಕಣ್ಣೀರಿಗೆ ಬಕೆಟ್ಟೇ ತುಂಬುತ್ತಿತ್ತು: ಹಳೆಯ ಇತಿಹಾಸ ಕೆದಕಿ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು: ರಾಜಕೀಯ ಎಂದರೆ ಕೇವಲ ಅಧಿಕಾರವಲ್ಲ, ಅದು ಹಳೆಯ ನೆನಪು ಮತ್ತು ಕೃತಜ್ಞತೆಯೂ ಕೂಡ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾವು ಸಂಕಷ್ಟದಲ್ಲಿದ್ದಾಗ ಕೈಹಿಡಿದವರು ನೆನಪಿಲ್ಲ ಎಂದು...








