ರಾಜಧಾನಿ ಜನರೇ ಗಮನಿಸಿ : ಬೆಂಗಳೂರಲ್ಲಿಂದು ಹಲವೆಡೆ ವಿದ್ಯುತ್ ಕಡಿತ bescom saaksha tv
ಬೆಂಗಳೂರು : ಸಿಲಿಕಾನ್ ಸಿಟಿ ಮಂದಿಗೆ ಇಂದು ಬೆಸ್ಕಾಂ ಶಾಕ್ ನೀಡಿದ್ದು, ನಗರದ ಹಲವೆಡೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಕುರಿತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಟ್ವಿಟ್ಟರ್ ನಲ್ಲಿ ತಿಳಿಸಿದೆ.
ಇಂದು ದಕ್ಷಿಣ ವೃತ್ತದ ಜಯನಗರ, ಕೋರಮಂಗಲ ಹಾಗೂ ಹೆಚ್.ಎಸ್.ಆರ್ ಲೇಔಟ್, ಪಶ್ಚಿಮ ವೃತ್ತದ ರಾಜಾಜಿನಗರ, ಆರ್.ಆರ್ ನಗರ, ಕೆಂಗೇರಿ ವಿಭಾಗಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ.
ಪೂರ್ವ ವೃತ್ತದ ಇಂದಿರಾನಗರ್, ವೈಟ್ ಫೀಲ್ಡ್, ಶಿವಾಜಿನಗರ ಹಾಗೂ ವಿಧಾನಸೌಧ ವಿಭಾಗಗಳಲ್ಲಿ, ಇತ್ತ ಉತ್ತರ ವೃತ್ತದ ಮಲ್ಲೇಶ್ವರಂ, ಜಾಲಹಳ್ಳಿ, ಹೆಬ್ಬಾಳ ಹಾಗೂ ಪೀಣ್ಯ ವಿಭಾಗಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಕಲ್ಲಿದ್ದಲಿನ ಸಮಸ್ಯೆ ಉಂಟಾಗಿದ್ದು, ರಾಜ್ಯಕ್ಕೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.