ಜನರನ್ನ ಬೆಲೆ ಏರಿಕೆ ಬಿಸಿಗೆ ಸಿಲುಕಿಸಿ ಸರ್ಕಾರ ಬೆಲೆ ಬಾರುಕೋಲು ಅಭಿಯಾನ
ಬೆಂಗಳೂರು : ದಿನ ನಿತ್ಯ ವಸ್ತುಗಳ ಬೆಲೆ ಏರಿಕೆ, ತೈಲ ಬೆಲೆಗಳ ಹೆಚ್ಚಳದ ನಡುವೆ ಇದೀಗ ವಿದ್ಯುತ್ ದರ ಕೂಡ ಹೆಚ್ಚಿಸಲಾಗಿದೆ. ಈ ಕುರಿತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದು, ಜನರನ್ನು ಬೆಲೆ ಏರಿಕೆ ಬಿಸಿಗೆ ಸಿಲುಕಿಸಿ ಬೆಲೆ ಬಾರುಕೋಲು ಅಭಿಯಾನವನ್ನು ಬಿಜೆಪಿ ಸರಕಾರ ಶುರು ಮಾಡಿದೆ ಎಂದಿದ್ದಾರೆ.
ಈಕುರಿತು ಸರಣಿ ಟ್ವೀಟ್ ಗಳನ್ನ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ.
ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ.
ರೈತರು ತಾವು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಇಲ್ಲದೆ ಬೀದಿಯಲ್ಲಿದ್ದಾರೆ. ರಾಗಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಜನರನ್ನು ಬೆಲೆ ಏರಿಕೆ ಬಿಸಿಗೆ ಸಿಲುಕಿಸಿ ಬೆಲೆ ಬಾರುಕೋಲು ಅಭಿಯಾನವನ್ನು ಬಿಜೆಪಿ ಸರಕಾರ ಶುರು ಮಾಡಿದೆ. ಲೋಡ್ ಶೆಡ್ಡಿಂಗ್ ತೆಗೆದು ಗುಣಮಟ್ಟದ ವಿದ್ಯುತ್ ಪೂರೈಕೆ ಸರಕಾರದ ಕರ್ತವ್ಯ.4/5
— H D Kumaraswamy (@hd_kumaraswamy) April 4, 2022
ಬಡವರು ಮನೆ ಕಟ್ಟುವ ಹಾಗಿಲ್ಲ, ಹೊಟ್ಟೆ ತುಂಬಾ ಊಟ ಮಾಡುವಂತಿಲ್ಲ, ಬಡವ ಈಗ ಬೆಳಕಲ್ಲಿಯೂ ಇರುವಂತಿಲ್ಲ. ಬಡವರ ವಿರುದ್ಧ ಬಿಜೆಪಿ ಬೆಲೆ ಏರಿಕೆ ಸಮರ ಹೂಡಿದೆಯಾ ಎನ್ನುವ ಅನುಮಾನ ನನ್ನದು.
ರೈತರು ತಾವು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಇಲ್ಲದೆ ಬೀದಿಯಲ್ಲಿದ್ದಾರೆ. ರಾಗಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಜನರನ್ನು ಬೆಲೆ ಏರಿಕೆ ಬಿಸಿಗೆ ಸಿಲುಕಿಸಿ ಬೆಲೆ ಬಾರುಕೋಲು ಅಭಿಯಾನವನ್ನು ಬಿಜೆಪಿ ಸರಕಾರ ಶುರು ಮಾಡಿದೆ. ಲೋಡ್ ಶೆಡ್ಡಿಂಗ್ ತೆಗೆದು ಗುಣಮಟ್ಟದ ವಿದ್ಯುತ್ ಪೂರೈಕೆ ಸರಕಾರದ ಕರ್ತವ್ಯ.
ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ.1/5
— H D Kumaraswamy (@hd_kumaraswamy) April 4, 2022
ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
Electricity rates increased h d kumaraswamy tweet