ಕೊಪ್ಪಳ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮಹಾನ್ ಸುಳ್ಳುಗಾರ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಮೊದಲು ತಮ್ಮ ಭವಿಷ್ಯ ನೋಡಿಕೊಳ್ಳಲಿ. ಆ ನಂತರ ಬೇರೆಯವರ ಬಗ್ಗೆ ಮಾತನಾಡಲಿ. ಅವರೊಬ್ಬ ಮಹಾನ್ ಸುಳ್ಳುಗಾರ. ಎಲ್ಲ ಕ್ಷೇತ್ರಕ್ಕೆ ಹೋದರು ಸುಳ್ಳು ಹೇಳುವುದೇ ಅವರ ಕೆಲಸ. ವೋಟ್ ಬ್ಯಾಂಕ್ ಗಾಗಿ ಈ ರೀತಿ ಮಾಡುತ್ತಾರೆ ಎಂದು ಹೇಳಿದ್ದಾರೆ.
ಬಿಜೆಪಿ ಪಕ್ಷ ಈಗ ಮುಳುಗುವ ಹಡಗಾಗಿದೆ. ನಮ್ಮ ಪಕ್ಷವನ್ನು ಎದುರಿಸುವ ಶಕ್ತಿ ಆ ಪಕ್ಷಕ್ಕೆ ಇಲ್ಲ. ಹೀಗಾಗಿಯೇ ಆ ಪಕ್ಷದಲ್ಲಿದ್ದವರು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿಯು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ನಮ್ಮ ಅಧ್ಯಕ್ಷರನ್ನು ಅರೆಸ್ಟ್ ಮಾಡಿದ್ದಕ್ಕೆ ಅದು ರಾಜ್ಯದಲ್ಲಿ 68ಕ್ಕೆ ಬಂದು ನಿಂತಿತು. ಮತ್ತೆ ಅದೇ ರೀತಿ ಮಾಡಿದರೆ, 38ಕ್ಕೆ ಬಂದು ನಿಲ್ಲುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.