ಲಕ್ನೋ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಗೆ ಮಾಹಿತಿ ರವಾನಿಸುತ್ತಿದ್ದ ಮಾಸ್ಕೋದಲ್ಲಿರುವ ಭಾರತೀಯ ರಾಜಭಾರಿ ಕಚೇರಿಯ ಉದ್ಯೋಗಿಯನ್ನು ಬಂಧಿಸಲಾಗಿದೆ.
ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ATS) ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯನ್ನು ಮೀರತ್ನಲ್ಲಿ ಬಂಧಿಸಿದೆ. ಸತ್ಯೇದ್ರ ಸಿವಾಲ್ ಬಂಧಿತನಾಗಿದ್ದು, 2021 ರಿಂದ ಮಾಸ್ಕೋದಲ್ಲಿರುವ (Moscow) ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತ ಆಧಾರಿತ ಭದ್ರತಾ ಸಹಾಯಕನಾಗಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ.
ಐಎಸ್ಐ ಹ್ಯಾಂಡ್ಲರ್ಗಳು ಭಾರತೀಯ ವಿದೇಶಾಂಗ ಸಚಿವಾಲಯದ ಉದ್ಯೋಗಿಗಳನ್ನು ಸೆಳೆದು ಹಣದ ಆಮಿಷ ತೋರಿಸುತ್ತಿದ್ದಾರೆ ಎಂಬ ಸೂಕ್ಷ್ಮ ಮಾಹಿತಿ ಭಾರತೀಯ ಸೇನೆ ಹಾಗೂ ಗುಪ್ತಚರ ಇಲಾಖೆಗೆ ಲಭ್ಯವಾಗಿತ್ತು. ಈ ಕುರಿತು ಮಾಹಿತಿ ಪಡೆದಿದ್ದ ಭಯೋತ್ಪಾದನಾ ನಿಗ್ರಹ ದಳ ರಹಸ್ಯವಾಗಿಯೇ ತನ್ನ ಕಾರ್ಯಾಚರಣೆ ಮುಂದುವರಿಸಿತ್ತು.
ಭಾರತೀಯ ರಾಯಭಾರಿ ಕಚೇರಿಯಲ್ಲಿ ತನ್ನ ಸ್ಥಾನ ದುರ್ಬಕೆ ಮಾಡಿಕೊಂಡು ಗೌಪ್ಯ ದಾಖಲೆ ಹೊರ ತೆಗೆಯುತ್ತಿದ್ದ. ಹಣದ ಆಸೆಗಾಗಿ ರಕ್ಷಣಾ ಸಚಿವಾಲಯ, ವಿದೇಶಾಂಗ ಸಚಿವಾಲಯ ಮತ್ತು ಭಾರತೀಯ ಸೇನೆಯ ಆಂತರಿಕೆ ಮತ್ತು ಬಾಹ್ಯ ಕಾರ್ಯಾಚರಣೆ ಚಟುವಟಿಕೆಗಳ ಕುರಿತು ಐಎಸ್ಐ ಹ್ಯಾಂಡ್ಲರ್ಗಳಿಗೆ ರವಾನಿಸುತ್ತಿದ್ದ ಎಂದು ಉನ್ನತ ಮೂಲಗಳು ತಿಳಿಸಿವೆ.