PSI ನೇಮಕಾತಿ ಹಗರಣ – ಹೊಸ ಬಾಂಬ್ ಸಿಡಿಸಿದ ಹೆಚ್ ಡಿ ಕೆ
ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ನಿಷ್ಠಾವಂತ ಪೊಲೀಸ್ ಅಧಿಕಾರಿ ಕಮಲ್ ಫಂಥ್ ವಿರುದ್ದ ಬಿಜೆಪಿ ನಾಯಕರು ಮಾತನಾಡಿದ್ದಕ್ಕೆ ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ ಎಂದು ಬಾಂಬ್ ಸಿಡಿಸಿದ್ದಾರೆ.
ಚಾಮರಾಜಪೇಟೆಯಲ್ಲಿ ನಡೆದ ಕೊಲೆಯ ಹಿನ್ನೆಲೆಯಲ್ಲಿ ಒಬ್ಬ ಬಿಜೆಪಿಯ ಪ್ರಮುಖ ವ್ಯಕ್ತಿ ಕಮಲ್ ಪಂಥ್ ಅವರ ವಿರುದ್ಧ ಆರೋಪ ಮಾಡಿದ್ದರು. ಉರ್ದು ಮಾತನಾಡದಿದ್ದಕ್ಕೆ ಚುರಿ ಹಾಕಿದ್ದು ಎಂದು ಹೇಳಿ ಕಥೆ ಕಟ್ಟಿದ್ದರು. ಇದು ಅಲ್ಲಿಂದ ಪಿಎಸ್ಐ ವಿಚಾರವಾಗಿ ಲಿಂಕ್ ಹೋಯ್ತು. ಬಿಜೆಪಿ ನಾಯಕರು ನಿಷ್ಠಾವಂತ ಪೊಲೀಸ್ ಅಧಿಕಾರಿಯ ಮೇಲೆ ಆರೋಪ ಮಾಡಿದರು. ಉರ್ದು ಮಾತನಾಡಿಲ್ಲ ಎಂದು ಗಲಾಟೆ ಮಾಡಿರುವ ಆ ವ್ಯಕ್ತಿಗೂ ಕಲಬುರ್ಗಿಯಲ್ಲಿ ಅರೆಸ್ಟ್ ಆಗಿರುವ ವ್ಯಕ್ತಿಗಳಿಗೂ ಲಿಂಕ್ ಇದೆ. ಈ ಬಗ್ಗೆ ಮಾಧ್ಯಮಗಳು ಬೆಳಕು ಚೆಲ್ಲಾ ಬೇಕು ಎಂದು ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಎಲ್ಲರೂ ದುಡ್ಡು ಕೊಟ್ಟು ಪಿಎಸ್ಐ ಆಗಿದ್ದಾರೆ ಎನ್ನಲು ಆಗಲ್ಲ. 30% ಮಂದಿ ದುಡ್ಡು ಕೊಟ್ಟು ಆಗಿರಬಹುದು. 30 ರಿಂದ 40 % ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರಬಹುದು. ಪೊಲೀಸ್ ಇಲಾಖೆಯ ಪ್ರಾಮಾಣಿಕ ಅಧಿಕಾರಿ ಕಮಲ್ ಪಂಥ್ಗೆ ಬಿಜೆಪಿ ನಾಯಕರು ಅವಮಾನ ಮಾಡಿದ್ದರು. ಅದಕ್ಕಾಗಿ ಅವರ ಅಭಿಮಾನಿಗಳು ಸರ್ಕಾರಕ್ಕೆ ಬುದ್ಧಿ ಕಲಿಸಲು ಅವರೇ ಹೊರತೆಗೆದಿದ್ದಾರೆ, ಇದು ಸರ್ಕಾರದಿಂದ ಹೊರಬಂದಿಲ್ಲ. ಪೊಲೀಸ್ ಇಲಾಖೆಯಿಂದಲೇ ಇದು ಹೊರಬಂದಿದೆ. ಈ ಸರ್ಕಾರದ ನಡವಳಿಕೆ ವಿರುದ್ಧ ಇಲಾಖೆಯವರೇ ಹೊರತೆಗೆದಿದ್ದಾರೆ. ಅಶ್ವಥ್ ನಾರಾಯಣ ವಿರುದ್ಧ ಅವರ ಜೊತೆಯಲ್ಲಿದ್ದವರೇ ಮಾಧ್ಯಮಕ್ಕೆ ಮಾಹಿತಿ ಕೊಟ್ಟಿದ್ದಾರೆ ಎಂಬ ಸ್ಫೋಟಕ ಮಾಹಿತಿ ನೀಡಿದರು.