H.D.Kumaraswamy | JDS ಗೆ ಅಧಿಕಾರ ಕೊಟ್ರೆ ಬೆಂಗಳೂರು ಕೆರೆಗಳಿಗೆ ನೀರು
ಬೆಂಗಳೂರು : ಜೆಡಿಎಸ್ ಗೆ ಅಧಿಕಾರ ಕೊಟ್ಟರೇ ಬೆಂಗಳೂರು ಕೆರೆಗಳಿಗೆ ನದಿ ನೀರು ಹರಿಸಲು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂಕಲ್ಪ ಮಾಡಿದ್ದಾರೆ.
ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗಾಂಧಿನಗರದಲ್ಲಿರುವ ಅಣ್ಣಮ್ಮ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತ ಕೊಟ್ಟು ಐದು ವರ್ಷಗಳ ಸರ್ಕಾರ ರಚನೆ ಮಾಡಲು ಜನರು ಬೆಂಬಲ ನೀಡಿದರೆ, ನೀರಿನ ವಿಷಯದಲ್ಲಿ ಬೆಂಗಳೂರು ಜನರು ಎದುರಿಸುತ್ತಿರುವ ಎಲ್ಲ ಸಂಸ್ಥೆಗಳನ್ನು ಬಗೆಹರಿಸಲಾಗುವುದು ಎಂದು ಘೋಷಿಸಿದರು.

ಅಲ್ಲದೇ ಮುಂದುವರೆದು ಮಾತನಾಡಿದ ಕುಮಾರಸ್ವಾಮಿ, ಜಲ ಮೂಲಗಳು ರಕ್ಷಿಸಿ ಅದನ್ನು ಅದನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಜಲಧಾರೆ ಕಾರ್ಯಕ್ರಮ ರೂಪಿಸಲಾಗಿದೆ.
ಕೆರೆಗಳನ್ನು ಉತ್ತಮಪಡಿಸಿ ಅವುಗಳಿಗೆ ನದಿ ನೀರು ತುಂಬಿಸುವ ಕೆಲಸ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಇನ್ನು ನಾಳೆ ನೆಲಮಂಗಲದಲ್ಲಿ ಜಲಧಾರೆಯ ಬೃಹತ್ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು ಐದರಿಂದ ಆರು ಲಕ್ಷ ಜನರು ಭಾಗವಹಿಸುವ ಸಾಧ್ಯತೆಗಳಿವೆ. EX CM H D KUMARSWAMY PROMISES TO PROVIDE WATER TO BENGALURU








