ಸಿಎಂ ಬಿಎಸ್ವೈ ಶೀಘ್ರವೇ ಚೇತರಿಸಿಕೊಳ್ಳಲಿ – ಎಚ್ಡಿಕೆ, ಸಿದ್ದರಾಮಯ್ಯ ಹಾರೈಕೆ
ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಎಸ್ವೈ ಆರೋಗ್ಯ ಸ್ಥಿರವಾಗಿದ್ದು ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ. ತಜ್ಞ ವೈದ್ಯರ ತಂಡ ಸಿಎಂ ಚಿಕಿತ್ಸೆ ಬಗ್ಗೆ ನಿಗಾ ವಹಿಸುತ್ತಿದೆ ಎಂದು ಆಸ್ಪತ್ರೆಯ ಹೆಲ್ತ್ ಬುಲೆಟಿನ್ ತಿಳಿಸಿದೆ.
ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಬಿಎಸ್ವೈ ಶೀಘ್ರವೇ ಗುಣಮುಖರಾಗಲಿ ಎಂದು ಟ್ವಿಟ್ ಮಾಡಿದ್ದರೆ. ಇನ್ನೊಂದೆಡೆ ಮಾಜಿ ಸಿಎಂ ಎಚ್,ಡಿ, ಕುಮಾರಸ್ವಾಮಿ ಕೂಡ ಟ್ವಿಟ್ ಮಾಡಿದ್ದಾರೆ. ಬಿಎಸ್ವೈ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದು ತುಂಬಾ ನೋವುಂಟು ಮಾಡಿದೆ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಎಚ್ಡಿಕೆ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಹಾಗೇ ಸಿಎಂ ಜೊತೆ ಒಡನಾಟದಲ್ಲಿರುವ ಸಚಿವರು, ಅಧಿಕಾರಿಗಳು, ಸಿಬ್ಬಂದಿಗಳು ಈಗ ಆತಂಕಕ್ಕಿಡಾಗಿದ್ದಾರೆ. ಬಿಎಸ್ವೈ ಪುತ್ರಿ ಪದ್ಮಾವತಿ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. ಹಾಗೇ ಪುತ್ರ ವಿಜಯೇಂದ್ರ ಅವರು ಒಂದು ವಾರಗಳ ಕಾಲ ಹೋಮ್ ಕ್ವಾರಂಟೈನ್ಗೆ ಒಳಪಡಲಿದ್ದಾರೆ. ವಿಜಯೇಂದ್ರ ಅವರ ಕೊವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ವರದಿಯಾಗಿದೆ.
ಇನ್ನು ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯ ಆವರಣದಲ್ಲಿ ಬಿಗಿ ಪೋಲಿಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಭದ್ರತೆಯ ಬಗ್ಗೆ ಖುದ್ದು ಪರೀಶೀಲನೆ ನಡೆಸಿದ್ದಾರೆ.
ಹಾಗೇ ಸಿಎಂ ಬಿಎಸ್ವೈ ಜೊತೆಗೆ ಸಂಪರ್ಕದಲ್ಲಿದ್ದ ಸಚಿವರು, ಸಿಬ್ಬಂದಿಗಳು, ಅಧಿಕಾರಿಗಳು ಕೂಡ ಕೋವಿಡ್ ಪರೀಕ್ಷೆಗೆ ಒಳಪಡುವ ಸಾಧ್ಯತೆ ಇದೆ.