Siddaramaiah | ಬಿಜೆಪಿಯ ದಬ್ಬಾಳಿಕೆಗೆ ತಲೆಬಾಗುವವರು ನಾವಲ್ಲ
ಬೆಂಗಳೂರು : ಬಿಜೆಪಿಯ ದಬ್ಬಾಳಿಕೆಗೆ ತಲೆಬಾಗಿ, ಹೋರಾಟಕ್ಕೆ ಬೆನ್ನು ತೋರುವವರು ನಾವಲ್ಲ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ..
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮಂಗಳವಾರ 2ನೇ ದಿನದ ವಿಚಾರಣೆಗೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದು, ವಿಚಾರಣೆ ಮುಂದುವರೆದಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಜನರ ಪರವಾದ ದನಿಯನ್ನು ಆಳುವ ಸರ್ಕಾರ ದಬ್ಬಾಳಿಕೆಯ ಮೂಲಕ ಮೆಟ್ಟಿನಿಲ್ಲಲು ಹೊರಟಾಗ ನಮ್ಮ ಧ್ವನಿ ಇನ್ನಷ್ಟು ಗಟ್ಟಿಯಾಗಬೇಕು. ನಮ್ಮ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಜೊತೆ ಕಾಂಗ್ರೆಸ್ ಪಕ್ಷ ಮಾತ್ರವಲ್ಲ, ದೇಶದ ಕೋಟ್ಯಂತರ ಜನರಿದ್ದಾರೆ. ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಮನಸ್ಥಿತಿಗೆ ನನ್ನ ಧಿಕ್ಕಾರ.
ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯವನ್ನು ತಮ್ಮ ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಇಂಥಾ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುತ್ತೇವೆ ಎಂದುಕೊಂಡಿದ್ದರೆ ಅದು ನಿಮ್ಮ ಭ್ರಮೆ ಮಿಸ್ಟರ್ ನರೇಂದ್ರ ಮೋದಿ
ಬ್ರಿಟಿಷರ ಗುಂಡೇಟು, ಲಾಠಿ ಏಟಿಗೆ ಬೆದರದೆ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ಪಕ್ಷ ನಮ್ಮದು. ಕಾಂಗ್ರೆಸ್ ಎಂದರೆ ಅದೊಂದು ಚಳವಳಿ.ಹಿಂದೆ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ ಹೋರಾಡಿತ್ತು, ಇಂದು ನ್ಯಾಯಕ್ಕಾಗಿ ಹೋರಾಡಲಿದೆ.
ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ನ್ಯಾಷನಲ್ ಹೆರಾಲ್ಡ್ ಎಂಬ ಪತ್ರಿಕೆಯ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ, ತನಿಖೆಯ ನೆಪದಲ್ಲಿ ನಮ್ಮ ನಾಯಕರಾದ ಸೋನಿಯಾ ಗಾಂಧಿ ಹಾಗೂ @RahulGandhi ಅವರನ್ನು ಬೆದರಿಸಲು ವ್ಯರ್ಥ ಪ್ರಯತ್ನ ನಡೆಸಲಾಗುತ್ತಿದೆ. 3/9#IndiaWithRahulGandhi
— Siddaramaiah (@siddaramaiah) June 13, 2022
ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ನ್ಯಾಷನಲ್ ಹೆರಾಲ್ಡ್ ಎಂಬ ಪತ್ರಿಕೆಯ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ, ತನಿಖೆಯ ನೆಪದಲ್ಲಿ ನಮ್ಮ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಬೆದರಿಸಲು ವ್ಯರ್ಥ ಪ್ರಯತ್ನ ನಡೆಸಲಾಗುತ್ತಿದೆ.
ಬಿಜೆಪಿಯವರು ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಧ್ವನಿಯನ್ನು ಅಡಗಿಸಲು ಹೊರಟರೆ, ನಮ್ಮೊಂದಿಗೆ ಈ ದೇಶದ ಜನತೆ, ಸಂವಿಧಾನ, ನ್ಯಾಯಾಂಗ ವ್ಯವಸ್ಥೆ ಇದೆ. ಬಿಜೆಪಿಯ ದಬ್ಬಾಳಿಕೆಗೆ ತಲೆಬಾಗಿ, ಹೋರಾಟಕ್ಕೆ ಬೆನ್ನು ತೋರುವವರು ನಾವಲ್ಲ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.